ಬಸ್‌ನಿಲ್ದಾಣವೀಗ ಮೊಬೈಲ್‌ ಕಳ್ಳರ ಹಾಟ್‌ಸ್ಪಾಟ್‌!

ಪ್ರತಿನಿತ್ಯ 2 ರಿಂದ 3 ಪ್ರಯಾಣಿಕರ ಮೊಬೈಲ್‌ ಕಳ್ಳತನ

Team Udayavani, Apr 25, 2022, 3:28 PM IST

bus

ಸಿರುಗುಪ್ಪ: ನಗರದಲ್ಲಿರುವ ಸರ್ಕಾರಿ ಬಸ್‌ನಿಲ್ದಾಣ ಮೊಬೈಲ್‌ ಕಳ್ಳರ ಸ್ವರ್ಗವಾಗಿದ್ದು ಪ್ರತಿನಿತ್ಯವೂ ಬಸ್‌ ಹತ್ತುವ ಸಮಯದಲ್ಲಿ 2-3 ಪ್ರಯಾಣಿಕರ ಮೊಬೈಲ್‌ ಕಳ್ಳತನವಾಗುವುದು ಸಾಮಾನ್ಯವಾಗಿರುತ್ತದೆ.

ನಗರದ ಬಸ್‌ನಿಲ್ದಾಣದಿಂದ ಬೀದರ್‌ನಿಂದ ಚಾಮರಾಜ ನಗರದವರೆಗೆ ಮೈಸೂರ್‌ನಿಂದ ವಿಜಯಪುರದವರೆಗೆ ಹೈದ್ರಾಬಾದ್‌ನಿಂದ ಬೆಂಗಳೂರುವರೆಗೆ ಪ್ರತಿನಿತ್ಯವೂ ಈ ಬಸ್‌ ನಿಲ್ದಾಣದಿಂದ ಸುಮಾರು 4 ಸಾವಿರ ಪ್ರಯಾಣಿಕರು, 5 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಂಚರಿಸುತ್ತಾರೆ.

ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಪ್ರಯಾಣಿಕರು ಸೀಟಿಗಾಗಿ ಅವಸರವಾಗಿ ಬಸ್‌ ಹತ್ತುವ ಸಮಯದಲ್ಲಿಯೇ ಬೆಲೆ ಬಾಳುವ ಮೊಬೈಲ್‌ ಗಳು ಕಳ್ಳತನವಾಗುವುದು ಇಲ್ಲಿ ಕಳೆದ ಒಂದು ವರ್ಷದಿಂದ ಹೆಚ್ಚಾಗಿದೆ. ಕಳೆದ ಒಂದು ವರ್ಷದಿಂದ ಬಸ್‌ ಹತ್ತುವ ಪ್ರಯಾಣಿಕರ ಸಾವಿರಾರು ಮೊಬೈಲ್‌ ಗಳು ಕಳ್ಳತನವಾಗುತ್ತಿದ್ದರೂ ಬಸ್‌ ನಿಲ್ದಾಣದ ಅಧಿಕಾರಿಗಳು ಮಾತ್ರ ಇಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲು ಇಲ್ಲಿಯವರೆಗೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಇದರಿಂದಾಗಿ ಮೊಬೈಲ್‌ ಕಳ್ಳರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

ಮೊಬೈಲ್‌ ಕಳೆದುಕೊಂಡ ಪ್ರಯಾಣಿಕರು ಕಳ್ಳರಿಗೆ ಹಿಡಿ ಶಾಪ ಹಾಕುತ್ತಾರೆಯೇ ಹೊರತು ಪೊಲೀಸ್‌ ಠಾಣೆಗೆ ದೂರು ನೀಡಿದರೆ ಕಳೆದು ಹೋದ ಮೊಬೈಲ್‌ನ್ನು ಹುಡುಕಿಕೊಡುವುದು ಅಷ್ಟರಲ್ಲಿಯೇ ಇದೆ ಎನ್ನುವ ಅಸಡ್ಡೆಯಿಂದ ಮೊಬೈಲ್‌ ಕಳೆದುಕೊಂಡ ಬಹುತೇಕರು ಪೊಲೀಸ್‌ ಠಾಣೆಗೆ ಹೋಗಿ ದೂರನ್ನೇ ನೀಡುತ್ತಿಲ್ಲ. ಇದರಿಂದಾಗಿಯೂ ಮೊಬೈಲ್‌ ಕಳ್ಳರ ಹಾವಳಿ ಹೆಚ್ಚಾಗಿರುತ್ತದೆ.

ಬಸ್‌ನಿಲ್ದಾಣದಲ್ಲಿ ಪ್ರಯಾಣಿಕರು ಬಸ್‌ ಹತ್ತುವ ಸ್ಥಳದಲ್ಲಿ ಸಿ.ಸಿ. ಕ್ಯಾಮೆರಾಗಳನ್ನು ಅಳವಡಿಸಿದರೆ ಮೊಬೈಲ್‌ ಕಳ್ಳರನ್ನು ಗುರುತಿಸಬಹುದು. ಆದರೆ ಸಾರಿಗೆ ಇಲಾಖೆ ಅಧಿಕಾರಿಗಳು ಸಿ.ಸಿ. ಕ್ಯಾಮೆರಾ ಅಳವಡಿಸಲು ಮುಂದಾಗದಿರುವುದು ಹಲವು ರೀತಿಯ ಅನುಮಾನಗಳಿಗೆ ಕಾರಣವಾಗಿದೆ ಎಂದು ಪ್ರಯಾಣಿಕರಾದ ಎಚ್.ಎಸ್. ಶೇಕಣ್ಣ, ಸಿದ್ದಲಿಂಗ ಬೇಸರ ವ್ಯಕ್ತಪಡಿಸಿದ್ದಾರೆ.

ಪ್ರಯಾಣಿಕರ ಮೊಬೈಲ್‌ ಕಳ್ಳತನ ತಡೆಗಟ್ಟಲು ಪೊಲೀಸ್‌ ಪಹರೆಯೊಂದಿಗೆ, ಸಿ.ಸಿ.ಕ್ಯಾಮೆರಾವನ್ನು ಅಳವಡಿಸಿದರೆ ಮೊಬೈಲ್‌ ಕಳ್ಳತನ ಮಾಡುವವರ ಹಾವಳಿಯನ್ನು ನಿಯಂತ್ರಿಸಬಹುದೆಂದು ದಿನನಿತ್ಯವೂ ಈ ಬಸ್‌ನಿಲ್ದಾಣದಿಂದ ಪ್ರಯಾಣಿಸುವ ಪ್ರಯಾಣಿಕರು ಆಗ್ರಹಿಸಿದ್ದಾರೆ.

– ಆರ್‌. ಬಸವರೆಡ್ಡಿ ಕರೂರು

ಟಾಪ್ ನ್ಯೂಸ್

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.