ಮಂಗಗಳ ಉಪಟಳ: ಜನರ ಕಳವಳ

ನಿರಂತರ ಹಾವಳಿಯಿಂದ ಜನತೆ ಕಂಗಾಲು

Team Udayavani, Oct 18, 2020, 7:51 PM IST

Ballary-tdy-1

ಕೂಡ್ಲಿಗಿ: ಮನೆ ಕಾಂಪೌಂಡ ಮೇಲೆ ವಿಶ್ರಾಂತಿ ಪಡೆಯುತ್ತಿರುವ ವಾನರ ಸೈನ್ಯ.

ಕೂಡ್ಲಿಗಿ: ಪಟ್ಟಣದಲ್ಲೀಗ ಮಂಗಗಳದ್ದೇ ಕಾರುಬಾರು. ಮಂಗಗಳ ನಿರಂತರ ಹಾವಳಿಯಿಂದ ಸಾರ್ವಜನಿಕರು ಕಂಗಾಲಾಗಿದ್ದಾರೆ.

ಪಟ್ಟಣ ಸೇರಿದಂತೆ ಸುತ್ತಲಿನ ಹಲವು ವಾರ್ಡ್‌ಗಳಲ್ಲಿ ಇವುಗಳದ್ದೇ ಕಾರುಬಾರು ಸರ್ವೆ ಸಾಮಾನ್ಯವಾಗಿ ಬಿಟ್ಟಿದೆ. ಬಹಳ ವರ್ಷದಿಂದ ಮಂಗಗಳ 3-4 ಗುಂಪು ಬೀಡು ಬಿಟ್ಟಿದ್ದು ದಿನ ಬೆಳಗಾದರೆ ಸಾಕು ಈ ಮಂಗಗಳು ನಾನಾ ಓಣಿಗಳಲ್ಲಿ, ಮನೆಗಳ ಮೇಲೆ ಹಿಂಡು ಹಿಂಡಾಗಿ ಜಿಗಿದು ಹೆಂಚುಗಳನ್ನು ಒಡೆದು

ಚೂರು ಚೂರು ಮಾಡುತ್ತಿವೆ. ಮನೆಗಳ ಸುತ್ತಲಲ್ಲಿನ ಪೇರಲ, ಹುಣಸೆ, ಪಪ್ಪಾಯಿ ಹಣ್ಣಿನ ಮತ್ತು ಹೂವಿನ ಗಿಡಗಳನ್ನು ಹಾಗೂ ತೆಂಗಿನ ಗಿಡಗಳನ್ನು ಹಾಳು ಮಾಡುತ್ತಿವೆ ಎನ್ನುತ್ತಾರೆ ಸಾರ್ವಜನಿಕರು. ಒಂದು ಮನೆಯಿಂದ ಮತ್ತೂಂದು ಮನೆಗೆ ಜಿಗಿಯುತ್ತ ಕೇಬಲ್‌ ನಾಶ ಮಾಡಿ ಟೆಲಿಫೋನ್‌, ವಿದ್ಯುತ್‌ ಕಂಬದ ತಂತಿ ಮೇಲೆ ಸರ್ಕಸ್‌ ಮಾಡುತ್ತವೆ. ಇದರಿಂದಾಗಿ ಒಮ್ಮೊಮ್ಮೆ ವಿದ್ಯುತ್‌ ಹರಿಯುವಿಕೆ ನಿಂತು ಹೋಗಿ ವಿದ್ಯುತ್‌ನಿಂದಲೇ ನಡೆಯುವ ಬಹುತೇಕ ಕಾರ್ಯಗಳು ನಿಂತು ಹೋಗುತ್ತಿವೆ. ಕುಡಿಯುವ ನೀರು ಬಾರದೆ, ಗಿರಣಿ ಆರಂಭವಾಗದೆ ಜನತೆ ಪರಿತಪಿಸುವಂತಾಗುತ್ತಿದೆ.

ಬೆಳೆ ಹಾಳು ಮಾಡುವ ಮಂಗಗಳು ಮನುಷ್ಯರನ್ನೂ ಕಾಡುತ್ತಿವೆ. ಒಬ್ಬಿಬ್ಬರು ಮಹಿಳೆಯರು, ಮಕ್ಕಳು ಹೊಲಗಳಲ್ಲಿ ಕೆಲಸ ಮಾಡುತ್ತಿದ್ದರೆ ಹಿಂದಿನಿಂದ ಹತ್ತಾರು ಮಂಗಗಳು ಮೈಮೇಲೆ ಬರುತ್ತಿವೆ. ರೈತರು ಕವಣೆ ಬೀಸಿದರೂ ಕಂಠ ಹರಿಯುವಂತೆ ಕೂಗಿದರೂ, ಪಟಾಕಿ ಸಿಡಿಸಿದರೂ ಕ್ಯಾರೆ ಎನ್ನದೆ ತಮ್ಮ ಚಲ್ಲಾಟ ಮುಂದುವರಿಸುತ್ತಿವೆ. ಇನ್ನಾದರೂ ಅರಣ್ಯ ಇಲಾಖೆ ಪಟ್ಟಣ ಪಂಚಾಯಿತಿ ಜಂಟಿಯಾಗಿ ವಿಶೇಷ ತಂಡ ರಚಿಸಿ ಈ ಬಗ್ಗೆ ಮುತುವರ್ಜಿ ವಹಿಸಬೇಕು. ಮಂಗಗಳನ್ನು ಹಿಡಿದು ಕಾಡಿಗೆ ಕಳಿಸುವ ಕೆಲಸ ಮಾಡಬೇಕು ಎಂದು ಜನರು ಒತ್ತಾಯಿಸಿದ್ದಾರೆ.

ಸಾಲ ಮಾಡಿ ರೈತರು ಬೋರವೆಲ್‌ ನಲ್ಲಿದ್ದ ಅಲ್ಪ ಸ್ವಲ್ಪ ನೀರಿನಿಂದ ತರಕಾರಿ ಬೆಳೆಯಲು ಮುಂದಾಗಿದ್ದಾರೆ. ಈಗ ಮಂಗಗಳಹಾವಳಿಯು ತರಕಾರಿ ತೋಟಗಳವರೆಗೆ ಹಬ್ಬಿದ್ದು, ಸವತೆ, ಹೀರೆ, ಬೆಂಡೆ, ಟೊಮೆಟೊ, ಬದನೆಕಾಯಿ, ಕುಂಬಳಕಾಯಿ ಇನ್ನಿತರ ಬೆಳೆಗಳನ್ನು ಮಂಗಗಳಿಂದ ರಕ್ಷಿಸುವುದು ರೈತರಿಗೆ ಸವಾಲಾಗಿದೆ. –ತಿಂದಪ್ಪ, ರೈತ

ಪಟ್ಟಣದ ವಾರ್ಡಿನ ನಿವಾಸಿಗಳಿಗೆ ಮತ್ತು ಸುತ್ತಮುತ್ತ ಪ್ರದೇಶದಲ್ಲಿ ಈಗಾಗಲೇ ಮಂಗಗಳ ಹಾವಳಿಗೆ ಜನರು ಹೈರಾಣಾಗಿದ್ದಾರೆ. ಆದಕಾರಣ ಪಪಂ ಇಲಾಖೆ ಮತ್ತು ಅರಣ್ಯ ಇಲಾಖೆ ಸಮನ್ವಯತೆ ಸಾಧಿ ಸಿ ಮಂಗಗಳ ಹಾವಳಿಗೆ ಮುಕ್ತಿ ಕಾಣಿಸಬೇಕಿದೆ. – ಶಿವರಾಜ್‌ ಪಾಲೂ¤ರ್‌, ಕೂಡ್ಲಿಗಿ ತಾಲೂಕು ಸ.ನೌ.ಸಂ ಅಧ್ಯಕ್ಷ

ಗಂಗಾವತಿಯಿಂದ ಮಂಗಗಳನ್ನು ಹಿಡಿಯುವ ತಜ್ಞರನ್ನು ಕೂಡ್ಲಿಗಿಗೆ ಕರೆಯಿಸುತ್ತೇವೆ. ಆ ವ್ಯಕ್ತಿಗಳ ಖರ್ಚು ವೆಚ್ಚವನ್ನು ಪಟ್ಟಣ ಪಂಚಾಯಿತಿ ಭರಿಸಬೇಕು. ಮಂಗಗಳನ್ನು ಹಿಡಿಯುವಾಗ ನಮ್ಮ ಇಲಾಖೆಯಿಂದ ಏನು ಸಹಕಾರ ಬೇಕು ನಾವು ಮಾಡುತ್ತೇವೆ.  –ರೇಣುಕಮ್ಮ. ಎ, ವಲಯ ಅರಣ್ಯಾಧಿಕಾರಿಗಳು ಕೂಡ್ಲಿಗಿ

ಮಂಗಗಳ ಹಾವಳಿ ಬಗ್ಗೆ ಗಮನಕ್ಕೆ ಬಂದಿದ್ದು, ಇದರ ಬಗ್ಗೆ ಅರಣ್ಯ ಇಲಾಖೆಗೆ ಪತ್ರವನ್ನು ಬರೆದಿದ್ದೇನೆ. ವನ್ಯಜೀವಿಗಳನ್ನು ಸಂರಕ್ಷಿಸುವುದು ನಮ್ಮ ಕರ್ತವ್ಯ. ಹಾಗಾಗಿ ಜಂಟಿಯಾಗಿ ಕಾರ್ಯ ನಿರ್ವಹಿಸುತ್ತೇವೆ. ಮಂಗಗಳ ಹಾವಳಿಗೆ ಕೂಡಲೇ ಕ್ರಮ ಕೈಗೊಳ್ಳಲಾಗುವುದು.  –ಪಕೃದ್ದೀನ್‌, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

 

-ಕೆ.ನಾಗರಾಜ್‌

ಟಾಪ್ ನ್ಯೂಸ್

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

bellary

Bellary: ತಡರಾತ್ರಿ ಸರಣಿ ಕಳ್ಳತನ; ಎಂಟು ಮನೆಗಳಿಗೆ ನುಗ್ಗಿದ ಕಳ್ಳರು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.