ನವಜಾತ ಶಿಶುವಿಗೆ ತಾಯಿ ಹಾಲು ಶ್ರೇಷ್ಠ

ಮಗುವನ್ನು ತಾಯಿಯ ಅತಿ ಸಮೀಪದಲ್ಲಿ ಮಲಗಿಸಬೇಕು.

Team Udayavani, Aug 4, 2022, 1:22 PM IST

ನವಜಾತ ಶಿಶುವಿಗೆ ತಾಯಿ ಹಾಲು ಶ್ರೇಷ್ಠ

ಬಳ್ಳಾರಿ: ಹೆರಿಗೆ ನಂತರ ನವಜಾತ ಶಿಶುವಿಗೆ ಅರ್ಧಗಂಟೆಯೊಳಗೆ ತಾಯಿ ಎದೆ ಹಾಲನ್ನು ನೀಡುವ ಜೊತೆಗೆ ಮುಂದಿನ 6 ತಿಂಗಳುಗಳ ಕಾಲ ತಾಯಿ ಹಾಲನ್ನು ಮಾತ್ರ ನೀಡಬೇಕು. ಇದರಿಂದ ಮಗುವಿನ ಆರೋಗ್ಯ ಕಾಪಾಡುವುದರ ಜೊತೆಗೆ ಬಾಣಂತಿ ತಾಯಿ ಆರೋಗ್ಯಕ್ಕೂ ಕ್ಷೇಮ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ| ಎಚ್‌.ಎಲ್‌. ಜನಾರ್ದನ್‌ ತಿಳಿಸಿದರು.

ನಗರದ ಜಿಲ್ಲಾಸ್ಪತ್ರೆಯಲ್ಲಿ ಜಿಲ್ಲಾ ಆಡಳಿತ, ಜಿಪಂ, ಜಿಲ್ಲಾ ಆರೋಗ್ಯ ಇಲಾಖೆ, ಸ್ವಾಮಿ ವಿವೇಕಾನಂದ ಯುತ್‌ ಮೂವ್‌ಮೆಂಟ್‌ ಸಹಯೋಗದಲ್ಲಿ ಮಕ್ಕಳ ವಿಭಾಗ ಸಹಕಾರದೊಂದಿಗೆ ಬುಧವಾರ ಹಮ್ಮಿಕೊಂಡಿದ್ದ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ದೇಶದ ಸಾಂಸ್ಕೃತಿಕ ಹಿನ್ನೆಲೆ ನೋಡಿದಾಗ ಮಗು ತಾನಾಗಿಯೇ ಬಿಡುವವರೆಗೆ ಹಾಲುಣಿಸುವ ಪದ್ದತಿ ಇದ್ದರೂ ಸಹ ಹೆರಿಗೆ ನಂತರ ತಕ್ಷಣವೇ ತಾಯಿ ಹಾಲುಣಿಸುವ ಪ್ರಯತ್ನವನ್ನು ಕುಟುಂಬದ ಎಲ್ಲ ಸದಸ್ಯರು ಮಾಡಬೇಕಿದೆ. ತಾಯಿ ಮೊದಲ ಹಾಲು (ಕೊಲಸ್ಟ್ರಮ್‌) ಉಣಿಸುವುದರಿಂದ ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಬೆಳೆಯುವುದರ ಜೊತೆಗೆ ತಾಯಿ ಗರ್ಭಧರಿಸುವುದು ಸಹ ಮುಂದೂಡಬಹುದು ಎಂದು ತಿಳಿಸಿದರು.

ಜಿಲ್ಲಾ ಶಸ್ತ್ರಚಿಕಿತ್ಸಕ ಡಾ| ಎನ್‌.ಬಸರೆಡ್ಡಿ ಮಾತನಾಡಿ, ತಾಯಂದಿರು ಅಥವಾ ಅವರ ಪಾಲಕರು ಮಗುವಿಗೆ ಜೇನು ತುಪ್ಪ, ಸಕ್ಕರೆ ನೀರನ್ನು ಅಥವಾ ಇನ್ನಿತರೆ ಯಾವುದೇ ದ್ರವ ಪದಾರ್ಥವನ್ನು ಚೀಪಿಸಬಾರದು. ಮಗುವಿಗೆ ತಾಯಿಯ ಹಾಲನ್ನು ಮಾತ್ರ ಉಣಿಸಬೇಕು.

ಹಾಲುಣಿಸುವಾಗ ಮಗುವಿನ ಬಾಯಿ ಅಗಲವಾಗಿ ತೆರೆದಿರುವಂತೆ, ಸ್ತನದ ಭಾಗವು ಮಗುವಿನ ಗದ್ದಕ್ಕೆ ತಾಕುವಂತಿರಬೇಕು. ಮಗುವಿನ ಸ್ಪರ್ಶ ತಾಯಿಯ ಸ್ತನಗಳಲ್ಲಿ ಹಾಲಿನ ಉತ್ಪಾದನೆಯನ್ನು ಪ್ರಚೋದಿಸುತ್ತದೆ ಎಂದು ತಿಳಿಸಿದರು. ಮಗುವನ್ನು ತಾಯಿಯ ಅತಿ ಸಮೀಪದಲ್ಲಿ ಮಲಗಿಸಬೇಕು.

ಆಗ ಮಗುವಿನ ಸುರಕ್ಷತಾ ಭಾವವು ಬಲಗೊಳ್ಳುವುದು. ಇದನ್ನು ಸಮರ್ಪಕವಾಗಿ ಸದುಪಯೋಗಪಡಿಸಿಕೊಳ್ಳಬೇಕು. ಇದಕ್ಕಾಗಿ ಎಲ್ಲ ಆಸ್ಪತ್ರೆಗಳಲ್ಲಿ ತಾಯಂದಿರಿಗೆ ಹಾಲುಣಿಸುವ ಪ್ರತ್ಯೇಕ ಸ್ಥಳವನ್ನು ಸಿದ್ಧಪಡಿಸಲಾಗುತ್ತಿದೆ ಎಂದರು. ನಂತರ ಮಕ್ಕಳ ತಜ್ಞ ಡಾ| ವೀರಶಂಕರ, ಡಾ| ಭಾವನಾ ಅವರು ಛಾಯಾಚಿತ್ರಗಳೊಂದಿಗೆ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರ್‌ಸಿಎಚ್‌ ಅಧಿಕಾರಿ ಡಾ| ಅನಿಲ್‌ ಕುಮಾರ್‌, ತಾಲೂಕು ಆರೋಗ್ಯ ಅಧಿಕಾರಿ ಡಾ| ಮೋಹನಕುಮಾರಿ, ಸ್ಥಾನಿಕ ವೈದ್ಯಾಧಿಕಾರಿ ಡಾ| ವಿಶ್ವನಾಥ ಎಚ್‌., ಪ್ರಸೂತಿ ತಜ್ಞೆ ಡಾ| ಸುಯಜ್ಞ ಜೋಶಿ, ಶುಶ್ರೂಷಕ ಅಧಿಧೀಕ್ಷಕಿ ರಾಜೇಶ್ವರಿ ಸೇರಿದಂತೆ ತಜ್ಞ ವೈದ್ಯರಾದ ಡಾ| ಜಯಪ್ರದ, ಡಾ| ಬಾಲು ವೆಂಕಟೇಶಲು, ಡಾ| ಖಾಜಿ, ಡಾ| ಜಯಲಕ್ಷ್ಮೀ, ಡಾ| ಸಂಜಯ, ಡಾ| ಸುನೀಲ, ಡಾ| ವೆಂಕಟೇಶ, ಡಾ| ರಾಜೀವ್‌, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ್‌ ದಾಸಪ್ಪನವರ, ಸ್ವಾಮಿ ವಿವೇಕಾನಂದ ಸಂಸ್ಥೆಯ ಗೋಪಾಲ ಅಗಸರ ಇದ್ದರು.

ಟಾಪ್ ನ್ಯೂಸ್

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.