ಶಾಸಕ ನಾಗೇಂದ್ರಗೆ ಎದೆನೋವು
Team Udayavani, Jul 12, 2019, 5:10 AM IST
ಬಳ್ಳಾರಿ: ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಅನಾರೋಗ್ಯದಿಂದ ಬುಧವಾರ ಸಂಜೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ನಂತರ ಗುರುವಾರ ಬೆಂಗಳೂರಿನ ತಮ್ಮ ನಿವಾಸಕ್ಕೆ ಮರಳಿದ್ದಾರೆ.
ಶಾಸಕ ನಾಗೇಂದ್ರ ಅವರಿಗೆ ಎದೆಯಲ್ಲಿ ನೋವು ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇದು ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿತ್ತು. ಆದರೆ,ಗ್ಯಾಸ್ಟ್ರಿಕ್ ಸಮಸ್ಯೆಯಿಂದಾಗಿ ಎದೆಯಲ್ಲಿ ನೋವು ಕಾಣಿಸಿಕೊಂಡಿದ್ದು, ಸೂಕ್ತ ಚಿಕಿತ್ಸೆ ಪಡೆದ ಬಳಿಕ ವೈದ್ಯರ ಸಲಹೆ ಮೇರೆಗೆ ಮನೆಗೆ ತೆರಳಿದ್ದಾರೆ. ಪ್ರಸಕ್ತ ರಾಜಕೀಯ ವಿದ್ಯಮಾನಗಳ ಪರಿಸ್ಥಿತಿಯಲ್ಲಿ ಶಾಸಕ
ನಾಗೇಂದ್ರ ಆಸ್ಪತ್ರೆ ಸೇರಿದ್ದು, ಹಲವು ಊಹಾಪೋಹಗಳಿಗೆ ಕಾರಣವಾಗಿದೆ.