ತರಾಸು ಜನ್ಮಶತಮಾನೋತ್ಸವ ಸರ್ಕಾರವೇ ಆಚರಿಸಲಿ
Team Udayavani, Apr 22, 2020, 4:19 PM IST
ನಾಯಕನಹಟ್ಟಿ: ತಳಕು ಸಮೀಪದ ಹೊಸಹಳ್ಳಿ ಶಾಲೆ ಆವರಣದಲ್ಲಿರುವ ತರಾಸು ಪುತ್ಥಳಿಗೆ ಗೌರವ ಸಲ್ಲಿಸಲಾಯಿತು
ನಾಯಕನಹಟ್ಟಿ: ತರಾಸುರವರ ಜನ್ಮ ಶತಮಾನೋತ್ಸವದ ವಿಶಿಷ್ಟ ಆಚರಣೆಗೆ ಸರ್ಕಾರ ವಿಶೇಷ ಅನುದಾನ ಬಿಡುಗಡೆ ಮಾಡಬೇಕು ಎಂದು ಜಿಪಂ ಸದಸ್ಯ ಓಬಳೇಶ್ ಒತ್ತಾಯಿಸಿದ್ದಾರೆ.
ತಳಕು ಗ್ರಾಮದಲ್ಲಿ ಮಂಗಳವಾರ ನಡೆದ ತರಾಸುರವರ 100 ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರಾಜ್ಯದ ಶ್ರೇಷ್ಠ ಕಾದಂಬರಿಕಾರರಲ್ಲಿ ತರಾಸು ಒಬ್ಬರಾಗಿದ್ದಾರೆ. ತ.ಸು. ಶಾಮರಾಯರು, ಟಿ.ಎಸ್. ವೆಂಕಣ್ಣಯ್ಯ ಹಾಗೂ ತರಾಸುರವರು ಚಿತ್ರದುರ್ಗ ಜಿಲ್ಲೆ ಹಾಗೂ ರಾಜ್ಯಕ್ಕೆ ಶ್ರೇಷ್ಠ ಕೊಡುಗೆ ನೀಡಿದ್ದಾರೆ. ಇವರುಗಳಿಂದ ತಳಕು ಗ್ರಾಮ ಇಡೀ ರಾಜ್ಯದಲ್ಲಿ ಹೆಸರು ಪಡೆದಿದೆ. ರಾಷ್ಟ್ರೀಯ ಹೆದ್ದಾರಿ 150 ಗ್ರಾಮವನ್ನು ಪ್ರವೇಶಿಸುವ ಪ್ರದೇಶದಲ್ಲಿ ತರಾಸು ಕಂಚಿನ ಪುತ್ಥಳಿ ನಿರ್ಮಿಸಬೇಕು. ಜನ್ಮ ಶತಮಾನೋತ್ಸವದ ಆಚರಣೆಯನ್ನು ಸರ್ಕಾರ ವಿಜೃಂಭಣೆಯಿಂದ ಆಚರಿಸಬೇಕು. ತಳಕು ಗ್ರಾಮದಲ್ಲಿ ವೆಂಕಣ್ಣಯ್ಯ ಸ್ಮಾರಕ ಗ್ರಂಥಾಲಯವನ್ನು ಮೇಲ್ದರ್ಜೆಗೇರಿಸಬೇಕು ಎಂದರು.
ಬಿಜೆಪಿ ಮಂಡಲ ಅಧ್ಯಕ್ಷ ಈ. ರಾಮರೆಡ್ಡಿ ಮಾತನಾಡಿ, ತಳಕು ಗ್ರಾಮ ತರಾಸುರವರಿಂದ ಗುರುತಿಸಿಕೊಂಡಿದೆ. ಅವರ ಸಾಹಿತ್ಯ ಕೃತಿಗಳನ್ನು ಇಂದಿನ ವಿದ್ಯಾರ್ಥಿಗಳು ಓದುವಂತಾಗಬೇಕು. ಜಿಲ್ಲಾ ಕೇಂದ್ರದಲ್ಲಿ ತರಾಸು ಕಂಚಿನ ಪುತ್ಥಳಿಯನ್ನು ಸ್ಥಾಪಿಸಬೇಕು. ಜನ್ಮ ಶತಮಾನೋತ್ಸವ ಆಚರಣೆಗೆ ಸರ್ಕಾರ ಗಮನ ಹರಿಸಬೇಕು ಎಂದರು. ರೈತ ಮುಖಂಡ ಓಬಣ್ಣ, ಮುಖಂಡ ನಾಗರಾಜ್, ತರಾಸು ಸಹೋದರ ಸಂಬಂಧಿ ಮಧುರನಾಥ್, ಸುರೇಶ್ ಮತ್ತಿತರರು ಇದ್ದರು .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ
Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು
Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ
MUST WATCH
ಹೊಸ ಸೇರ್ಪಡೆ
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
ದಳಪತಿ ಅಭಿಮಾನಿಗಳ ಟ್ರೋಲ್ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?
RCB: ಈ ಸಲ ಕಪ್ ನಮ್ಮದು…