ಹಂಪಿ ಸ್ಮಾರಕಗಳಿಗೆ ಬೇಕಿದೆ ರಕ್ಷಣೆ

­ಪದೆ, ಪದೇ ಉರುಳಿ ಬೀಳುತ್ತಿರುವ ಸ್ಮಾರಕಗಳು ­ಇಲಾಖೆ ನಿರ್ಲಕ್ಷ್ಯಕ್ಕೆ ಹಿಡಿದ ಕೈಗನ್ನಡಿ

Team Udayavani, Mar 13, 2021, 7:21 PM IST

Hmpi

ಹೊಸಪೇಟೆ: ವಿಶ್ವ ಪರಂಪರೆ ತಾಣ ಹಂಪಿ ಸ್ಮಾರಕಗಳಿಗೆ ರಕ್ಷಣೆ ಕೊರತೆ ಕಾಡುತ್ತಿದ್ದು, ಪದೇ, ಪದೇ, ಸ್ಮಾರಕಗಳ ಉರುಳಿ ಬೀಳುತ್ತಿರುವ ಪ್ರಕರಣಗಳೇ ಇದಕ್ಕೆ ಸಾಕ್ಷಿಯಾಗಿವೆ.

ಹೌದು! ಹಂಪಿ ಸಂರಕ್ಷಣೆಗಾಗಿ ಮೂರು ಇಲಾಖೆ ನೂರಾರು ಅಧಿಕಾರಿ-ಸಿಬ್ಬಂದಿಗಳು ಇದ್ದರೂ ಸ್ಮಾರಕಗಳಿಗೆ ಧಕ್ಕೆಯಾಗುವಂತ ಪ್ರಕರಣಗಳು ಮೇಲಿಂದ ಮೇಲೆ ಘಟಿಸುತ್ತಲೇ ಇವೆ.

ಕೇಂದ್ರ ಹಾಗೂ ರಾಜ್ಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಸೇರಿದಂತೆ ಮೇಲಾಗಿ ಹಂಪಿ ವಿಶ್ವ ಪರಂಪರೆ ನಿರ್ವಾಹಣಾ ಪ್ರಾಧಿಕಾರವೂ ಇದ್ದರೂ ಹಂಪಿ ಸ್ಮಾರಕ ರಕ್ಷಣೆ ಕೊರತೆ ಕಾಡುತ್ತಿದೆ. ಹಂಪಿ ಅಭಿವೃದ್ಧಿಗಾಗಿ ಸಾವಿರಾರು ಕೋಟಿ ಖರ್ಚಾಗುತ್ತಿದ್ದರೂ ಸ್ಮಾರಕಗಳು ಒಂದು, ಒಂದಾಗಿ ಉರುಳಿ ಬೀಳುತ್ತಿರುವುದು ಇಲಾಖೆಗಳು ನಿರ್ಲಕ್ಷ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಶುಕ್ರವಾರ ಕಮಲ ಮಹಲ್‌ನ ಹೊರ ಆವರಣದ ಗೋಡೆ ಕುಸಿದು ಬಿದ್ದಿರುವ ಪ್ರಕರಣವೇ ತಾಜಾ ಉದಾರಣೆಯಾಗಿದೆ. ಇದಕ್ಕೆ ಅಂಟಿಕೊಂಡಿರುವ ಕೋಟೆಯ ಕಾವಲುಗಾರ ಗೋಪುರದ ಹತ್ತಿರದ ಒಂದು ಭಾಗದ ಕೋಟೆ ಶಿಥಿಲವಾಗಿದ್ದು, ಅದು ಕೂಡ ಬೀಳುವ ಹಂತದಲ್ಲಿದೆ.

ಭೇಟಿ: ವಿಜಯನಗರ ಅರಸ ವಂಶಸ್ಥ ಶ್ರೀಕೃಷ್ಣ ದೇವರಾಯ ಹಾಗೂ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಉಪ ಅಧೀಕ್ಷಕ ಕಾಳಿಮುತ್ತು ಮತ್ತು ಸಿಬ್ಬಂದಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಜಾರರಾಮ ದೇವಾಲಯದ ಹಿಂಭಾಗದ ದಂಡನಾಯಕ ಕೋಟೆ, ಕಡಲೆಕಾಳು ಗಣಪತಿ

ದೇವಾಲಯದ ಹತ್ತಿರದ ಶಿವರಾಮಧೂತ ಮಠಕ್ಕೆ ಅಂಟಿಕೊಂಡಿರುವ ಕೋಟೆ ಸೇರಿದಂತೆ ಇತರೆ ಸ್ಮಾರಕಗಳು ಶಿಥಲಾವ್ಯಸ್ಥೆ ತಲುಪಿದ್ದು, ಬೀಳುವ ಮುನ್ನ ಇಲಾಖೆ ಕ್ರಮ ಕೈಗೊಳ್ಳಬೇಕಿದೆ.

ಸ್ಮಾರಕ ಕುಸಿತ: ವಿರೂಪಾಕ್ಷೇಶ್ವರ ದೇವಾಲಯದ ರಥ ಬೀದಿಯ ಸಾಲು ಕೆಲ ಸಾಲು ಮಂಟಪ, ವಿರೂಪಾಕ್ಷ ದೇವಾಲಯ ಹಿಂಭಾಗದಲ್ಲಿರುವ ಲೋಕಪಾವಣಿ ಪುಷ್ಕರಣಿ ಹತ್ತಿರ ಶಿವಾ ಮಂದಿರದ ಗೋಡೆ, ತುಲಾಭಾರ ಮಂಟಪದ ಬಲ ಭಾಗದಲ್ಲಿರುವ ಲಕ್ಷ್ಮೀನರಸಿಂಹ ಸ್ವಾಮಿ ದೇವಾಲಯದ ಮುಂದಿನ ಗೋಡೆ, ಕುದುರೆ ಮಂಟಪ, ಕೃಷ್ಣ ಬಜಾರ್‌ನ ಸಾಲು ಮಂಟಪ ಸೇರಿ ಅಪರೂಪದ ಸ್ಮಾರಕಗಳು ಕುಸಿದು ಬಿದ್ದಿವೆ. ಕೆಲವೆಡೆ ಜೀರ್ಣೋದ್ಧಾರ ಕಾರ್ಯ ಕೂಡ ನಡೆಯುತ್ತಿದೆ. ಕೆಲವೆಡೆ ನೆಲದ ಮೇಲೆ ಉರುಳಿ ಬಿದ್ದ ಅವಶೇಷಗಳು ಮೂಕ ವೇದನೆ ಅನುಭವಿಸುತ್ತಿವೆ.

ನಿಧಿಚೋರರ ದಾಳಿ: ನಿಧಿ ಚೋರರ ದಾಳಿಗೆ ಹಲವು ದೇವಾಲಯದ ಗರ್ಭಗೃಹಗಳನ್ನು ಅಗೆದು ಹಾನಿ ಮಾಡಲಾಗಿದೆ. ಕೆಲ ವಿಗ್ರಹಗಳನ್ನು ವಿರೂಪಗೊಳಿಸಲಾಗಿದೆ. ಈ ಹಿಂದೆ ನಿಧಿ ಆಸೆಗಾಗಿ ಮಲ್ಯಾವಂತ ರಘುನಾಥ ದೇವಾಲಯದ ಗಾಳಿಗೋಪುರವನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದರು. ಹಂಪಿ ಸ್ಮಾರಕಗಳು ಉರುಳಿ(ಹಾನಿ)ಬೀಳುವ ಮುನ್ನ ಅಧಿ ಕಾರಿಗಳು ಅವುಗಳ ಸಂರಕ್ಷಣೆ ಅಗತ್ಯ ಕ್ರಮ ಕೈಗೊಳ್ಳದಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಸ್ಮಾರಕ ಸಂರಕ್ಷಣೆಗೆ ಕ್ರಮ ಕೈಗೊಳ್ಳಬೇಕು ಎಂದು ವಿಜಯನಗರ ಸಂಸ್ಕೃತಿ ಸ್ಮಾರಕ ಸಂರಕ್ಷಣಾ ಸೇನೆ ಆಗ್ರಹಿಸಿದೆ.

ಪಿ. ಸತ್ಯನಾರಾಯಣ

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.