ಪಾಳುಬಿದ್ದ ಕಂಟೋನ್ಮೆಂಟ್‌ ರೈಲು ನಿಲ್ದಾಣಕ್ಕೆ ಹೊಸ ಕಳೆ

ಎಕ್ಸ್‌ಪ್ರೆಸ್‌ ರೈಲು ನಿಲುಗಡೆಗೂ ಜನರ ಒತ್ತಾಯ­! ನಿಲ್ದಾಣದಲ್ಲಿ ಫ್ಲಾಟ್‌ಫಾರ್ಮ್ ಸೇರಿ ಸ್ಕೈವಾಕ್‌ ನಿರ್ಮಾಣ

Team Udayavani, Mar 17, 2021, 8:07 PM IST

fgyhdrte

ಬಳ್ಳಾರಿ: ಅಕ್ರಮ ಚಟುವಟಿಕೆಗಳ ಆವಾಸ ಸ್ಥಾನವಾಗಿದ್ದ ನಗರದ ಕಂಟೋನ್ಮೆಂಟ್‌ ರೈಲು ನಿಲ್ದಾಣವನ್ನು ಕೊನೆಗೂ ಅಭಿವೃದ್ಧಿಪಡಿಸಲಾಗಿದೆ.

ಕಳೆದ ಎರಡು ದಶಕಗಳಿಂದ ಪಾಳುಬಿದ್ದ ಕೊಂಪೆಯಂತಾಗಿದ್ದ ಈ ರೈಲು ನಿಲ್ದಾಣ ಫ್ಲಾಟ್‌ಫಾರ್ಮ್, ಸ್ಕೈವಾಕ್‌ ಸುಣ್ಣಬಣ್ಣಗಳಿಂದ ಕಂಗೊಳಿಸುತ್ತಿದ್ದು ಪ್ರಯಾಣಿಕರ ಬಳಕೆಗೆ ಅಣಿಯಾಗಲಿದೆ. ನಗರದ ಕಂಟೋನ್ಮೆಂಟ್‌ ರೈಲು ನಿಲ್ದಾಣ ಬ್ರಿಟೀಷರ ಕಾಲದಲ್ಲಿ ನಿರ್ಮಾಣವಾಗಿತ್ತು. ಪ್ರಯಾಣಿಕರಿಗೆ ಟಿಕೆಟ್‌ ವಿತರಿಸಲು ಸಿಬ್ಬಂದಿಯೊಬ್ಬರನ್ನು ನಿಯೋಜಿಸಿದ್ದರೂ, ನಿರ್ಲಕ್ಷ್ಯಕ್ಕೆ ಒಳಗಾಗಿದ್ದ ಈ ನಿಲ್ದಾಣದಲ್ಲಿ ಎಲ್ಲೆಡೆ ಮುಳ್ಳುಕಂಟಿಗಳು ಬೆಳೆದಿದ್ದವು. ಪರಿಣಾಮ ಸ್ಥಳೀಯ ನಿವಾಸಿಗಳ ನಿತ್ಯ ಕರ್ಮಗಳಿಗೆ ಬಳಕೆಯಾಗುತ್ತಿತ್ತು. ರಾತ್ರಿ ವೇಳೆಯಲ್ಲಿ ಮದ್ಯವ್ಯಸನಿಗಳಿಗೆ ಮದ್ಯ ಸೇವಿಸುವ ಆವಾಸ ಸ್ಥಾನವಾಗಿತ್ತು. ಈ ನಿಲ್ದಾಣದ ಹಿನ್ನೆಲೆ, ಅವಶ್ಯಕತೆಯನ್ನು ಅರಿತಿದ್ದ ಸ್ಥಳೀಯ ನಿವೃತ್ತ ನೌಕರರೊಬ್ಬರು ಹಲವು ಬಾರಿ ರೈಲ್ವೆ ಇಲಾಖೆ ಮೇಲಧಿಕಾರಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಇದೀಗ ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ ರಾಜ್ಯದ ಹಲವು ನಿಲ್ದಾಣಗಳನ್ನು ಅಭಿವೃದ್ಧಿಪಡಿಸುತ್ತಿರುವ ರೈಲ್ವೆ ಇಲಾಖೆ, ಬಳ್ಳಾರಿಯ ಕಂಟೋನ್ಮೆಂಟ್‌ ರೈಲು ನಿಲ್ದಾಣವನ್ನು ಸುಸಜ್ಜಿತವಾಗಿ ಅಭಿವೃದ್ಧಿಪಡಿಸುತ್ತಿರುವುದು ನಗರದ ನಿವಾಸಿಗಳಲ್ಲಿ ಸಂತಸ ಮೂಡಿಸಿದೆ.

ನಿಲ್ದಾಣದಲ್ಲಿ ಏನೇನು ನಿರ್ಮಿಸಲಾಗಿದೆ: ಕಂಟೋನ್ಮೆಂಟ್‌ ರೈಲು ನಿಲ್ದಾಣದ ಮೂಲ ಕಟ್ಟಡವನ್ನು ಮರು ನಿರ್ಮಿಸಲಾಗಿದೆ. ಕಂಟೋನ್ಮೆಂಟ್‌ ರೈಲ್ವೆ ಗೇಟ್‌ನಿಂದ ಹಿಡಿದು ಸುಧಾಕ್ರಾಸ್‌ ರೈಲ್ವೆ ಗೇಟ್‌ ವರೆಗೆ ಎರಡು ಬದಿ ಪ್ಲಾಟ್‌ಫಾಮ್‌ಗಳನ್ನು ನಿರ್ಮಿಸಲಾಗಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಎರಡೂ ಫ್ಲಾಟ್‌ಫಾಮ್‌ಗಳಲ್ಲಿ ಮೇಲ್ಛಾವಣಿ ನಿರ್ಮಿಸಿ ನೆರಳಿನ ವ್ಯವಸ್ಥೆಯನ್ನು ಮಾಡಲಾಗಿದೆ. ಜತೆಗೆ ಒಂದು ಫ್ಲಾಟ್‌ಫಾಮ್‌ನಿಂದ ಮತ್ತೂಂದು ಫ್ಲಾಟ್‌ಫಾರ್ಮ್ ಗೆ ರೈಲ್ವೆ ಹಳಿಗಳ ಮೇಲೆ ಹೋಗದಂತೆ ಸ್ಕೈವಾಕ್‌ನ್ನು ನಿರ್ಮಿಸಲಾಗಿದ್ದು, ಪ್ರಯಾಣಿಕರ ಅನುಕೂಲಕ್ಕೆ ತಕ್ಕಂತೆ ನಿಲ್ದಾಣವನ್ನು ಸಹ ನಿರ್ಮಿಸಲಾಗಿದೆ.

ಎಲ್ಲ ವಿಧದ ರೈಲುಗಳು ನಿಲುಗಡೆ: ಕಂಟೋನ್ಮೆಂಟ್‌ ರೈಲು ನಿಲ್ದಾಣದಲ್ಲಿ 1993-94ರವರೆಗೆ ಪ್ಯಾಸೆಂಜರ್‌ ಸೇರಿ ಎಕ್ಸ್‌ಪ್ರೆಸ್‌ ರೈಲುಗಳು ನಿಲುಗಡೆಯಾಗುತ್ತಿದ್ದವು. ನಂತರ ಎಕ್ಸ್‌ಪ್ರೆಸ್‌ ರೈಲುಗಳ ನಿಲುಗಡೆಯನ್ನು ರದ್ದುಗೊಳಿಸಿ ಕೇವಲ ಪ್ಯಾಸೆಂಜರ್‌ ರೈಲು ನಿಲುಗಡೆಗೆ ಮಾತ್ರ ಅವಕಾಶ ಕಲ್ಪಿಸಲಾಯಿತು. ಪರಿಣಾಮ ಅಂದಿನಿಂದ ಹೊಸಪೇಟೆ-ಬೆಂಗಳೂರು, ಹುಬ್ಬಳ್ಳಿ-ಬಳ್ಳಾರಿ, ಹುಬ್ಬಳ್ಳಿ-ತಿರುಪತಿ, ವಿಜಯವಾಡ-ಹುಬ್ಬಳ್ಳಿ ಈ ಪ್ಯಾಸೆಂಜರ್‌ ರೈಲುಗಳು ಮಾತ್ರ ಇಲ್ಲಿ ನಿಲುಗಡೆಯಾಗುತ್ತಿದ್ದವು. ಬಳ್ಳಾರಿ ನಗರದ ಸಾಕಷ್ಟು ವಿಸ್ತಾರಗೊಂಡಿರುವುದರಿಂದ ಪ್ಯಾಸೆಂಜರ್‌ ರೈಲಿಗೆ ಬಂದ ಆ ಭಾಗದವರು, ಅಲ್ಲಿಯೇ ಇಳಿಯುತ್ತಿದ್ದರು. ಆದರೆ ಎಕ್ಸ್‌ಪ್ರೆಸ್‌ ರೈಲಲ್ಲಿ ಬಂದ ಪ್ರಯಾಣಿಕರು ಮುಖ್ಯ ರೈಲು ನಿಲ್ದಾಣಕ್ಕೆ ಬರುವುದು ಅನಿವಾರ್ಯವಾಗುತ್ತಿತ್ತು. ಇದೀಗ ನಿಲ್ದಾಣವನ್ನು ಅಭಿವೃದ್ಧಿಪಡಿಸುತ್ತಿರುವುದರಿಂದ ಎಲ್ಲ ಪ್ಯಾಸೆಂಜರ್‌, ಎಕ್ಸ್‌ಪ್ರೆಸ್‌ ಎಲ್ಲ ವಿಧದ ರೈಲುಗಳಿಗೂ ನಿಲುಗಡೆಗೆ ಅವಕಾಶ ಕಲ್ಪಿಸುವ ಸಾಧ್ಯತೆಯಿದೆ ಎನ್ನುತ್ತಾರೆ ರೈಲ್ವೆ ಇಲಾಖೆ ನೌಕರರ ಪ್ರವೀಣ್‌.

ಕಂಟೋನ್ಮೆಂಟ್‌ಗೆ ನಿಲ್ದಾಣ, ನಿಲುಗಡೆ ಅಗತ್ಯವಿದೆ: ಬಳ್ಳಾರಿ ನಗರ ದಿನೇದಿನೆ ವಿಸ್ತಾರಗೊಳ್ಳುತ್ತಿದೆ. ಬಳ್ಳಾರಿ ಮುಖ್ಯ ರೈಲು ನಿಲ್ದಾಣದಿಂದ ಕುವೆಂಪುನಗರ, ವಿನಾಯಕನಗರ, ವಿಎಸ್‌ಕೆ ವಿವಿ, ಗೌತಮ್‌ನಗರ, ಟಿಬಿ ಸ್ಯಾನಿಟೋರಿಯಂ ಪ್ರದೇಶದ ಸೇರಿ ಇನ್ನಿತರೆ ಏರಿಯಾ, ಬಡಾವಣೆಗಳು ಸುಮಾರು 6-7 ಕಿಮೀ ದೂರವಾಗಲಿವೆ. ಮುಖ್ಯ ನಿಲ್ದಾಣದಲ್ಲಿ ಇಳಿದ ಪ್ರಯಾಣಿಕರು ವಾಪಸ್‌ ತೆರಳಲು ಆಟೋಗಳಿಗೂ ದುಬಾರಿ ಬಾಡಿಗೆ ತೆತ್ತಬೇಕಾಗಲಿದೆ. ಮೇಲಾಗಿ ಕಂಟೋನ್ಮೆಂಟ್‌, ಕೌಲ್‌ಬಜಾರ್‌ ಪ್ರದೇಶದಲ್ಲಿ ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ (ವಿಮ್ಸ್‌) ಓಪಿಡಿ, 2 ಇಂಜಿನಿಯರಿಂಗ್‌ ಕಾಲೇಜು, ಟಿಬಿ ಸ್ಯಾನಿಟೋರಿಯಂ ಆಸ್ಪತ್ರೆ, ತುರ್ತು ಚಿಕಿತ್ಸಾ ವಿಭಾಗ ಟ್ರೋಮಾಕೇರ್‌ ಸೆಂಟರ್‌, ಎನ್‌ಸಿಸಿ (ಕರ್ನಾಟಕ 34 ಬೆಟಾಲಿಯನ್‌) ಸೇರಿ ಹಲವು ಪ್ರಮುಖ ಸಂಸ್ಥೆಗಳು ಇವೆ.

ಕಂಟೋನ್ಮೆಂಟ್‌ ರೈಲು ನಿಲ್ದಾಣದಲ್ಲಿ ಎಲ್ಲ ವಿಧದ ರೈಲುಗಳು ನಿಲುಗಡೆಯಾದಲ್ಲಿ ತುರ್ತು ಸಂದರ್ಭದಲ್ಲಿ ರೋಗಿಗಳು, ವಿದ್ಯಾರ್ಥಿಗಳು ಸೇರಿ ಪ್ರಯಾಣಿಕರಿಗೂ ತುಂಬಾ ಅನುಕೂಲವಾಗಲಿದೆ. ಹೀಗಾಗಿ ಕಂಟೋನ್ಮೆಂಟ್‌ ರೈಲು ನಿಲ್ದಾಣವನ್ನು ಅಭಿವೃದ್ಧಿಪಡಿಸಿರುವ ರೈಲ್ವೆ ಇಲಾಖೆಯವರು ಅಲ್ಲಿ ಎಲ್ಲ ವಿಧದ ರೈಲುಗಳನ್ನು ನಿಲ್ಲಿಸುವ ಮೂಲಕ ಈ ಭಾಗದ ಜನರಿಗೆ ಅನುಕೂಲ ಕಲ್ಪಿಸಬೇಕು ಎಂಬುದು ಸ್ಥಳೀಯ ನಿವಾಸಿಗಳದ್ದಾಗಿದೆ.

ವೆಂಕೋಬಿ ಸಂಗನಕಲ್ಲು

 

 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.