ಅಧಿಕಾರ-ಪ್ರಶಸ್ತಿಗೆ ಆಸೆ ಪಟ್ಟಿಲ್ಲ: ಮಂಜಮ್ಮ ಜೋಗತಿ

ಕನ್ನಡ ಸಾಹಿತ್ಯ ಸಮ್ಮೇಳನ ಮುಗಿದ ಬಳಿಕ ಜನವರಿ ತಿಂಗಳಿನಲ್ಲಿ ಮಾಡಲು ಸರ್ಕಾರ ಮುಂದಾಗಿದೆ.

Team Udayavani, Dec 8, 2022, 6:17 PM IST

ಅಧಿಕಾರ-ಪ್ರಶಸ್ತಿಗೆ ಆಸೆ ಪಟ್ಟಿಲ್ಲ: ಮಂಜಮ್ಮ ಜೋಗತಿ

ಹೊಸಪೇಟೆ: ನಾನು ಅಧಿಕಾರ, ಪ್ರಶಸ್ತಿಗಳಿಗಾಗಿ ಆಸೆ ಪಟ್ಟವಳಲ್ಲ. ಅವು ತಾನಾಗಿಯೇ ಹುಡುಕಿಕೊಂಡು ಬಂದಿವೆ ಎಂದು ಜಾನಪದ ಅಕಾಡೆಮಿ ಮಾಜಿ ಅಧ್ಯಕ್ಷೆ ಮಂಜಮ್ಮ ಜೋಗತಿ ಹೇಳಿದರು.

ನಗರದ ಥಿಯೋಸಾಪಿಕಲ್‌ ಕಾಲೇಜಿನ ಕಾರ್ಯಕ್ರಮದಲ್ಲಿ ಭಾಗವಹಿಸಲು ಬುಧವಾರ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ನಾನು ಯಾವುದಕ್ಕೂ ಆಸೆಪಟ್ಟಿಲ್ಲ. ನನಗೆ ಬಂದ ಪ್ರಶಸ್ತಿಗಾಗಿಯೂ ನಾನು ಆಸೆ ಪಟ್ಟವಳಲ್ಲ. ಅಧ್ಯಕ್ಷ ಸ್ಥಾನದ ಅಧಿಕಾರವೂ ತಾನಾಗಿಯೇ ಬಂದಿತ್ತು. ತಾನಾಗಿಯೇ ಅಂತಹ ಅವಕಾಶ ಬಂದರೆ ಮುಂದೆ ನೋಡೋಣ ಎಂದರು.

ಕಲಾವಿದರು ಯಾರ ಸ್ವತ್ತಲ್ಲ. ರಾಜಕೀಯಕ್ಕೆ ಬಂದರೆ ಒಂದು ಪಕ್ಷದ ಸ್ವತ್ತಾಗುತ್ತೇವೆ. ಚಲಾವಣೆ ಆಗುತ್ತಿರುವ ನಾಣ್ಯ ಒಂದೇ ಪಕ್ಷದಲ್ಲಿ ಚಲಾವಣೆಗೆ ಆಗುತ್ತೆ. ಅಂಥ ಅವಕಾಶ ಬಂದರೆ ಮುಂದೇ ನೋಡುತ್ತೇನೆ ಎಂದು ರಾಜಕೀಯ ಪ್ರವೇಶ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಹಂಪಿ ಉತ್ಸವ ನಡೆಸಲು ಸರ್ಕಾರದಿಂದ ದಿನ ನಿಗದಿ ಹಿನ್ನೆಲೆ ಮಾತನಾಡಿದ ಅವರು, ಜ 7, 8ರಂದು ಹಂಪಿ ಉತ್ಸವ ನಡೆಸಿದರೆ ಕಲಾವಿದರಿಗೆ ಅವಕಾಶ ಸಿಗುವುದಿಲ್ಲ. ಅ.ಭಾ. ಕನ್ನಡ ಸಾಹಿತ್ಯ ಸಮ್ಮೇಳನ ಮುಗಿದ ಬಳಿಕ ಜನವರಿ ತಿಂಗಳಿನಲ್ಲಿ ಮಾಡಲು ಸರ್ಕಾರ ಮುಂದಾಗಿದೆ.

ಆದರೆ ಹಂಪಿ ಉತ್ಸವದ ರೂವಾರಿ ಎಂ.ಪಿ ಪ್ರಕಾಶ ಅವರು ನವೆಂಬರ್‌ 3, 4, 5ರಂದು ಮಾಡುತ್ತಿದ್ದರು. ಹಾಗಾಗಿ ಹಂಪಿ ಉತ್ಸವವನ್ನು ಅದೇ ದಿನಾಂಕದಂದು ಮಾಡಬೇಕು. ಮೈಸೂರಿನಲ್ಲಿ ನಡೆದ ದಸರಾ ಮಾದರಿಯೇ ಹಂಪಿಯಲ್ಲಿ ಉತ್ಸವ ಮಾಡಬೇಕು. ಮೊದಲು ಮೈಸೂರಿನ ದಸರಾ ಹುಟ್ಟಿದ್ದೇ ಹಂಪಿಯ ಮಹಾನವಮಿ ದಿಬ್ಬದಲ್ಲಿ. ಹಂಪಿ ತುಂಬಾ ಹೆಸರು ಮಾಡಿದ ಸ್ಥಳ, ಅದೇ ಮಾದರಿ ಉತ್ಸವ ನಡೆಸಬೇಕು ಎಂದು ಒತ್ತಾಯಿಸಿದರು.

ಆರು ತಿಂಗಳು ಅವಕಾಶ ನೀಡಬೇಕಿತ್ತು:
ಜಾನಪದ ಅಕಾಡೆಮಿ ಅಧ್ಯಕ್ಷ ಅಧಿಕಾರ ನಿರ್ವಹಿಸಲು ಇನ್ನೂ ಆರು ತಿಂಗಳು ಬಿಡಬೇಕಿತ್ತು. ಯಾಕೆಂದರೆ ನಾನು ದೊಡ್ಡ ಯೋಜನೆಯೊಂದಕ್ಕೆ ಕೈಹಾಕಿದ್ದೆ. ಅಧಿಕಾರ ಮುಗಿದಿರುವುದರಿಂದ ಅದು ಈಗ ಅರ್ಧಕ್ಕೆ ನಿಂತಿದೆ. ಇನ್ನೇನು ಕನ್ನಡ ಸಂಸ್ಕೃತಿ ಇಲಾಖೆ ಸಚಿವರ ಸಹಿ ಆಗಿದ್ದರೆ ಅನುದಾನ ಬರುತ್ತಿತ್ತು ಎಂದರು. ಅಖಿಲ ಭಾರತ ಮಹಿಳಾ ಸಮಾವೇಶ, ಅಖಿಲ ಕರ್ನಾಟಕ ಸಾಹಿತ್ಯ ಸಮ್ಮೇಳನ, ತೃತೀಯ ಲಿಂಗಿಗಳ ಸಮ್ಮೇಳನ ಮಾಡಬೇಕೆಂಬ ಆಸೆ ಹಾಗೇ ಉಳಿದಿದ್ದು,
ಅಧಿಕಾರವಧಿ ಮುಗಿದಿರುವುದರಿಂದ ಅದ್ಯಾವುದನ್ನೂ ಮಾಡಲು ಆಗಿಲ್ಲ. ಕೊರೊನಾ ಬಂದಿದ್ದರಿಂದ ಅದ್ಯಾವುದು ಈಡೇರಲಿಲ್ಲ. ಅಕಾಡೆಮಿಗೆ ವರ್ಷಕ್ಕೆ ಒಂದು ಕೋಟಿ ರು. ಅನುದಾನ ಬರುತ್ತಿತ್ತು. ಕೊರೊನಾದಿಂದ ಅನುದಾನದಲ್ಲಿ ಸರ್ಕಾರ ಕಡಿತ ಮಾಡಿತು.

ದೊಡ್ಡಮಟ್ಟದ ಯಾವುದೇ ಕಾರ್ಯಕ್ರಮ ಮಾಡಲು ಆಗಲೇ ಇಲ್ಲ. ಕಳೆದ ಎರಡು ತಿಂಗಳಿನಿಂದ ಅಧ್ಯಕ್ಷ ಸ್ಥಾನ ಖಾಲಿ ಬಿಟ್ಟಿದ್ದಾರೆ. ಸರ್ಕಾರ ಆದಷ್ಟು ಬೇಗ ಅಧ್ಯಕ್ಷರನ್ನ ನೇಮಿಸಿ ಕಾರ್ಯಚಟುವಟಿಕೆ ನಡೆಯಲು ಮುಂದಾಗಬೇಕು. ನನ್ನೆಲ್ಲ ಆಸೆಗಳನ್ನ ಮುಂದೆ ಅಧ್ಯಕ್ಷರಾದವರು ಈಡೇರಿಸುತ್ತಾರೆ ಅನ್ನುವ ನಂಬಿಕೆಯಿದೆ ಎಂದರು.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.