ಕರ್ನಾಟಕ ಬಂದ್ ಗೆ ಬಳ್ಳಾರಿಯಲ್ಲಿ ನೀರಸ ಪ್ರತಿಕ್ರಿಯೆ: ಸಾರಿಗೆ ಸಂಚಾರ ಎಂದಿನಂತೆ
Team Udayavani, Dec 5, 2020, 8:43 AM IST
ಬಳ್ಳಾರಿ: ಮರಾಠಾ ಅಭಿವೃದ್ಧಿ ಪ್ರಾಧಿಕಾರ ರಚಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ವಿವಿಧ ಕನ್ನಡ ಪರ ಸಂಘಟನೆಗಳ ಒಕ್ಕೂಟ ಕರೆ ನೀಡಿದ್ದ ಕರ್ನಾಟಕ ಬಂದ್ ಗೆ ಗಣಿನಾಡು ಬಳ್ಳಾರಿಯಲ್ಲಿ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ.
ನಗರದಲ್ಲಿ ಯಾವುದೇ ವಾಹನ ಸಂಚಾರ ಎಂದಿನಂತೆ ಸಹಜವಾಗಿದೆ. ಸಾರಿಗೆ ಬಸ್ ಸಂಚಾರ ಆರಂಭಿಸಿವೆ. ಆಟೋಗಳ ಸಂಚಾರ ಎಂದಿನಂತೆ ಮುಂದುವರೆದಿದೆ. ಹೊಟೇಲ್, ವಾಣಿಜ್ಯ ಮಳಿಗೆಗಳು, ಪೆಟ್ರೋಲ್ ಬಂಕ್, ತರಕಾರಿ ಮಾರುಕಟ್ಟೆ ಎಲ್ಲವೂ ಚಾಲನೆಯಲ್ಲಿವೆ.
ಬಳ್ಳಾರಿಯಲ್ಲಿ 40ಕ್ಕೂ ಹೆಚ್ಚು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ ಬೆಂಬಲ ವ್ಯಕ್ತಪಡಿಸಿವೆ. ಆದರೆ, ಬಳ್ಳಾರಿಯಲ್ಲಿ ಬೆಳ್ಳಂಬೆಳಗ್ಗೆ ರಸ್ತೆಗಿಳಿದು ಯಾವುದೇ ಸಂಘಟನೆ ಬಂದ್ ನಡೆಸಿಲ್ಲ. ಈ ಹಿಂದಿನ ಬಂದ್ ಗಳಲ್ಲಿ ಗಡಗಿ ಚನ್ನಪ್ಪ ವೃತ್ತದಲ್ಲಿ ಟೈಯರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆಯನ್ನೂ ಮಾಡಿಲ್ಲ. ಕಳೆದ ವಾರವಷ್ಟೇ ಬಳ್ಳಾರಿ ವಿಭಜನೆ ಖಂಡಿಸಿ ಬಂದ್ ಆಚರಿಸಲಾಗಿತ್ತು. ಜನಜೀವನವೂ ಎಂದಿನಂತೆ ಸಹಜವಾಗಿದೆ. ಬಂದ್ ಸಾಂಕೇತಿಕ ಪ್ರತಿಭಟನೆಗಷ್ಟೇ ಸೀಮಿತವಾದಂತಾಗಿದೆ.
ಇದನ್ನೂ ಓದಿ:ಇಂದು ಕರ್ನಾಟಕ ಬಂದ್: ಬೆಂಗಳೂರಿನ ಹಲವೆಡೆ ಕಲ್ಲು ತೂರಾಟ, ಕರಾವಳಿಯಲ್ಲಿ ನೀರಸ ಪ್ರತಿಕ್ರಿಯೆ
10 ಗಂಟೆಗೆ ಪ್ರತಿಭಟನೆ
ಬೆಳಗ್ಗೆ 10 ಗಂಟೆಗೆ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿ ಜಿಲ್ಲಾಡಳಿತ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಿವೆ.
ಪೊಲೀಸ್ ಭದ್ರತೆ
ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಬಳ್ಳಾರಿ ನಗರದ ಗಡಗಿ ಚನ್ನಪ್ಪ ವೃತ್ತದಲ್ಲಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ನಿಯೋಜಿಸಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಸೂಕ್ತ ಬಂದೋ ಏರ್ಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ