ಜಾತಿ ಒಡೆಯುವ ರಾಜಕಾರಣ ಸಲ್ಲ


Team Udayavani, Jul 27, 2017, 1:35 PM IST

27-BLR-3.jpg

ಬಳ್ಳಾರಿ: ಕೋಮುವಾದ ಮತ್ತು ಪ್ರತ್ಯೇಕ ಧರ್ಮದ ಹೆಸರಿನಡಿ ಪ್ರಬಲ ಜಾತಿ ಸಮುದಾಯದ ಉಪಜಾತಿಗಳ
ನಡುವೆ ಬಿರುಕು ಮೂಡಿಸಲು ಬಿಜೆಪಿ ಮತ್ತು ಕಾಂಗ್ರೆಸ್‌ ನೇತೃತ್ವದ ಸರ್ಕಾರಗಳು ಹುನ್ನಾರ ನಡೆಸಿವೆ ಎಂದು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ಅಭಿಪ್ರಾಯಪಟ್ಟರು.

ನಗರದ ಡಾ| ರಾಜಕುಮಾರ್‌ ರಸ್ತೆಯಲ್ಲಿರುವ ರಾಘವ ಕಲಾ ಮಂದಿರದಲ್ಲಿ ಬುಧವಾರ ಜೆಡಿಎಸ್‌ ಜಿಲ್ಲಾ ಯುವ
ಘಟಕ ಏರ್ಪಡಿಸಿದ್ದ ಈ ಬಾರಿ ಕುಮಾರಣ್ಣ ಸರ್ಕಾರ ಎಂಬ ಘೋಷವಾಕ್ಯದಡಿ ಜಿಲ್ಲಾ ಮಟ್ಟದ ಯುವ ಸಮಾವೇಶ
ಉದ್ಘಾಟಿಸಿ ಅವರು ಮಾತನಾಡಿದರು. ಇಂತಹ ಸರ್ಕಾರಗಳಿಂದ ದೇಶ, ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ. ಹೀಗಾಗಿ, ಈ ಎರಡೂ ಸರ್ಕಾರಗಳನ್ನು ಬುಡ ಸಮೇತ ಕಿತ್ತೆಸೆಯಬೇಕು. ಅನಗತ್ಯ ಕೋಮು ಗಲಭೆ ಸೃಷ್ಟಿಸಿ, ಜಾತಿ ರಾಜಕಾರಣದ ಹೆಸರಿನಡಿ ಸಮಾಜಕ್ಕೆ ಬೆಂಕಿ ಹಚ್ಚುವ ಕಾರ್ಯಕ್ಕೆ ಆ ಎರಡೂ ಪಕ್ಷಗಳು ನಾಂದಿ ಹಾಡಿವೆ. ಅವುಗಳಿಗೆ ನಾವೆಲ್ಲರೂ ಸೇರಿಕೊಂಡು ಕೊನೆ ಹಾಡಬೇಕಿದೆ ಎಂದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೂಗು ಹಿಡಿದಾದರೂ ಮೊದಲೇ ಅವರು ಸಹಕಾರಿ ಸಂಘಗಳಲ್ಲಿನ ರೈತರ 50,000 ರೂ.ಗಳವರೆಗಿನ ಸಾಲ ಮನ್ನಾ ಮಾಡಿದ್ದಾರೆ. ಯಡಿಯೂರಪ್ಪನವರಿಗೆ ರಾಜ್ಯದ ರೈತರ ಕುರಿತು ಸ್ವಲ್ಪವಾದರೂ ಕಾಳಜಿ ಇದ್ದರೆ, ಪ್ರಧಾನಿ ನರೇಂದ್ರ ಅವರ
ಬಳಿ ಬಿಜೆಪಿ ಸಂಸದರ ನಿಯೋಗ ಕೊಂಡೊಯ್ದು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ರೈತರ ಸಂಪೂರ್ಣ ಸಾಲ ಮನ್ನಾ
ಮಾಡುವಂತೆ ಆಗ್ರಹಿಸಿದರು.  

ಕಾವೇರಿ, ಮಹಾದಾಯಿ ಹಾಗೂ ಕಳಸಾ ಬಂಡೂರಿ ನಾಲೆಯ ವಿವಾದ ಕುರಿತು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಚಲ ನಿಲುವು ತಾಳುತ್ತಿಲ್ಲ. ಕರ್ನಾಟಕದ ಗಡಿ, ನೆಲ, ಜಲ ಸಂರಕ್ಷಣೆ ಕುರಿತು ದೃಢವಾದ ನಿರ್ಧಾರ ತೆಗೆದುಕೊಳ್ಳಲು ಎದೆಗಾರಿಕೆ ಬೇಕು. ಆ ಎದೆಗಾರಿಕೆ ಈ ಸರ್ಕಾರಗಳಲ್ಲಿಲ್ಲ. ಆದ ಕಾರಣ ಪ್ರತಿಬಾರಿ ಜಲ ವಿವಾದಗಳಲ್ಲಿ ಕರ್ನಾಟಕ ಪಾಲುದಾರ ರಾಜ್ಯಗಳಿಗೆ ತಲೆ ಬಾಗುತ್ತಿದೆ. ಇಂತಹ ಧೈರ್ಯವಿಲ್ಲದ ಸರ್ಕಾರಗಳ ಆಡಳಿತ ನಮಗೆ ಬೇಕಾ? ಎಂದು ಮಧು ಬಂಗಾರಪ್ಪ ಪ್ರಶ್ನಿಸಿದರು. ರಾಜ್ಯದಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳ ಆಡಳಿತದ ಕಾರ್ಯ ವೈಖರಿಯನ್ನು ರಾಜ್ಯದ ಮತದಾರರು ಸೂಕ್ಷ್ಮವಾಗಿ ಗಮನಿಸಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷದ ಪರ್ವ ಆರಂಭವಾಗಲಿದೆ ಎಂದರು.

ಕಾರ್ಯಾಧ್ಯಕ್ಷ ಚಂದ್ರಶೇಖರ, ಜಿಲ್ಲಾ ಘಟಕದ ಅಧ್ಯಕ್ಷ ವೈ.ಗೋಪಾಲ, ಜಿಲ್ಲಾ ಕೋರ್‌ ಕಮಿಟಿ ಸದಸ್ಯರಾದ ಹೇಮಯ್ಯ, ಕೊಟ್ರೇಶ, ಲಕ್ಷ್ಮೀಕಾಂತರೆಡ್ಡಿ, ಪಿ.ಎಸ್‌. ಸೋಮಲಿಂಗನಗೌಡ, ಮೀನಳ್ಳಿ ತಾಯಣ್ಣ, ಮುಖಂಡರಾದ ಕುಡಿತಿನಿ ಶ್ರೀನಿವಾಸ, ಶಿವಶಂಕರ, ಎಚ್‌.ಎಂ.ಕಿರಣಕುಮಾರ, ರಫಿಕ್‌, ಕರ್ಚಿಗನೂರು ಯಲ್ಲನಗೌಡ, ವಿಜಯ ಕುಮಾರಿ,
ವೈ.ಗೌಸಿಯಾ ಬೀ, ಶರಭಯ್ಯ, ಪ್ರಶಾಂತ, ಕುಮಾರ, ಯಲ್ಲನಗೌಡ, ಬಂಡೇಗೌಡ, ಕಪ್ಪಗಲ್ಲು ರಸೂಲ್‌ಸಾಬ್‌,
ವೀರೇಶ, ಹೊನ್ನೂರಸ್ವಾಮಿ, ಪ್ರವೀಣಕುಮಾರ್‌, ಚಾಂದ್‌ ಬಾಷಾ, ಓಂಪ್ರಕಾಶಗೌಡ, ವಸಂತಕುಮಾರ, ಕಾರಪ್ಪ,
ವೆಂಕಣ್ಣ, ನಾಗಪ್ಪ ಸೇರಿದಂತೆ ನೂರಾರು ಕಾರ್ಯಕರ್ತರು ಹಾಜರಿದ್ದರು.

ಕಾವೇರಿ, ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲೆಯ ವಿವಾದ ಕುರಿತು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಚಲ ನಿಲುವು ತಾಳುತ್ತಿಲ್ಲ. ಕರ್ನಾಟಕದ ಗಡಿ, ನೆಲ, ಜಲ ಸಂರಕ್ಷಣೆ  ಕುರಿತು ದೃಢವಾದ ನಿರ್ಧಾರ ತೆಗೆದುಕೊಳ್ಳಲು ಎದೆಗಾರಿಕೆ ಬೇಕು. 

ಮಧು ಬಂಗಾರಪ್ಪ, ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.