ಜಿಂದಾಲ್ ಕಾರ್ಖಾನೆ ಲಾಕ್ಡೌನ್ಗೂ ಹಿಂಜರಿಯಲ್ಲ
Team Udayavani, Jun 28, 2020, 9:39 AM IST
ಬಳ್ಳಾರಿ: ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾದರೆ ಜಿಂದಾಲ್ ಕಾರ್ಖಾನೆ ಲಾಕ್ಡೌನ್ಗೂ ಹಿಂಜರಿಯುವುದಿಲ್ಲ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಸ್ಪಷ್ಟಪಡಿಸಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಗೆ ಜನರ ಪ್ರಾಣ ಮುಖ್ಯ. ಜನರ ಸುರಕ್ಷತೆಗಾಗಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು. ಮೂರನೇ ಹಂತ ತಲುಪಿಲ್ಲ: ಕೋವಿಡ್ ಸೋಂಕು ರಾಜ್ಯದಲ್ಲಿ ಮೂರನೇ ಹಂತ ತಲುಪಿಲ್ಲ. ಇನ್ನೂ 2ನೇ ಹಂತದಲ್ಲಿದೆ. ಕಾರಣ ಇದಕ್ಕಾಗಿ 10 ರೀತಿಯ ತಂಡಗಳನ್ನು ರಚಿಸಿಕೊಂಡು ಟೆಸ್ಟ್ ಮಾಡಲಾಗುತ್ತಿದೆ. ಈ ವರದಿಯಲ್ಲಿ ಸಮುದಾಯಕ್ಕೆ ವೈರಸ್ ಹರಡಿಲ್ಲ ಎಂದು ನಮಗೆ ತಿಳಿದು ಬಂದಿದೆ. ಕೆಲವೊಂದು ಕಡೆ ಸೋಂಕು ಹೇಗೆ ಬಂತು ಎಂದು ಪತ್ತೆ ಹಚ್ಚಲಾಗುತ್ತಿದೆ. ಇನ್ನು ಕೆಲವು ಕಡೆ ಪತ್ತೆ ಹಚ್ಚುವುದು ಕಷ್ಟವಾಗುತ್ತಿದೆ. ಇದಕ್ಕೆ ಜನರು ಸಹಕರಿಸಬೇಕು. ಎ ಸಿಸ್ಟಮ್ಯಾಟಿಕ್ ಪ್ರಕರಣಗಳು ಜಾಸ್ತಿಯಾಗುತ್ತಿದ್ದು, ಅಂತಹ ಸೋಂಕಿತರನ್ನು ಕೆಲವೊಂದು ಶಾದಿಮಹಲ್ ಗಳಲ್ಲಿ ಕ್ವಾರಂಟೈನ್ ಮಾಡಲಾಗುತ್ತಿದೆ. ಅವರನ್ನು ಚೆಕ್ ಮಾಡಿದಾಗ ಪಾಸಿಟಿವ್ ಬಂದರೆ ಕೂಡಲೇ ಚಿಕಿತ್ಸೆ ಕೊಡಲಾಗುತ್ತಿದೆ. ಅಲ್ಲದೇ, ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸರ್ವಪಕ್ಷಗಳ ಸಭೆಯನ್ನೂ ನಡೆಸಲಾಗಿದ್ದು, ಹಲವರು ಹಲವು ಸಲಹೆಗಳನ್ನು ನೀಡಿದ್ದಾರೆ ಎಂದರು.
ರಾಜ್ಯದಲ್ಲಿ ಕೋವಿಡ್ ಸೋಂಕಿನ ಆತಂಕದ ನಡುವೆಯೂ ವಿದ್ಯಾರ್ಥಿಗಳು ಧೈರ್ಯದಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಸೋಂಕು ಹರಡದಂತೆ ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಕೆಲವೊಂದು ರಾಜ್ಯಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದುಪಡಿಸಲಾಗಿದೆ. ಆದರೆ, ರಾಜ್ಯದಲ್ಲಿ ವಿದ್ಯಾರ್ಥಿಗಳು ಧೈರ್ಯದಿಂದ ಬರೆಯುತ್ತಿದ್ದು, ಎಲ್ಲ ವಿದ್ಯಾರ್ಥಿಗಳಿಗೆ ಒಳ್ಳೆಯದಾಗಲಿ ಎಂದು ಹಾರೈಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?