ಗಮನಸೆಳೆದ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ
Team Udayavani, Dec 10, 2019, 1:28 PM IST
ಕಂಪ್ಲಿ: ಪಟ್ಟಣದ ಷಾಮಿಯಾಚಂದ್ ಕಾಲೇಜಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬಳ್ಳಾರಿ ಇವರ ಸಹಯೋಗದಲ್ಲಿ ಆಯೋಜಿಸಿದ್ದ ಕಲಾವಿದೆ ಡಿ. ಉಮಾದೇವಿ ಅವರ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಶಾಸಕ ಜೆ.ಎನ್. ಗಣೇಶ್ ಕಾರ್ಯಕ್ರಮದ ಉದ್ಘಾಟಿಸಿ ಮಾತನಾಡಿ, ಕರ್ನಾಟಕದಲ್ಲಿ ಐತಿಹಾಸಿಕ ವಿಜಯನಗರ ಸಾಮ್ರಾಜ್ಯ ಸೇರಿದಂತೆ ವಿವಿಧ ಕಲಾ ವೈಭೋಗವನ್ನು ಚಿತ್ರಕಲೆಗಳಲ್ಲಿ ಕಾಣಬಹುದಾಗಿದೆ. ಕಲೆಗೆ ಕಲೆಯೇ ಸಾಟಿ ಎಂಬಂತೆ ಚಿತ್ರಕಲೆ ರೂಢಿಸಿಕೊಂಡರೆ ಜೀವನದಲ್ಲಿ ಸಾಧನೆಗೆ ಮಹತ್ವ ಸಿಗುತ್ತದೆ. ಇಂದಿನ ದಿನದಲ್ಲಿ ವಿದ್ಯಾರ್ಥಿಗಳು ದುಶ್ಚಟಗಳಿಗೆ ಮಾರು ಹೋಗದೇ ತಮ್ಮಲ್ಲಿರುವ ಅಪ್ರತಿಮ ಕಲೆಗಳೊಂದಿಗೆ ಉತ್ತಮ ಜೀವನದ ಕಡೆ ಸಾಗಬೇಕು ಎಂದರು.
ಎಸ್ಎಂಜಿಜಿ ಪ್ರೌಢಶಾಲೆ ಪ್ರಭಾರಿ ಉಪ ಪ್ರಾಚಾರ್ಯ ಷಣ್ಮುಖಪ್ಪ ಚಿತ್ರಗಾರ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿ, ಚಿತ್ರಕಲೆಗಳ ಅಭಿರುಚಿಯನ್ನು ವಿದ್ಯಾರ್ಥಿಗಳು ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕು. ಜಗತ್ತಿನಲ್ಲಿ ಚಿತ್ರಕಲೆಗೆ ಹೆಚ್ಚಿನ ಮಹತ್ವವಿದೆ. ಹೀಗಾಗಿ ವಿದ್ಯಾರ್ಥಿಗಳು ಕಲಿಕಾ ಹಂತದಲ್ಲಿ ಕಲೆಗಳಲ್ಲಿ ಒಂದಾದ ಚಿತ್ರಕಲೆಯನ್ನು ರೂಢಿಸಿಕೊಳ್ಳಬೇಕು ಎಂದರು. ಇದೇ ಸಂದರ್ಭದಲ್ಲಿ ಶಾಸಕ ಗಣೇಶ್ ಹಾಗೂ ಮುಖಂಡರು ಚಿತ್ರಕಲಾ ಪ್ರದರ್ಶನಕ್ಕೆ ಚಾಲನೆ ನೀಡಿದರು. ಕಲಾವಿದೆ ಡಿ. ಉಮಾದೇವಿ ಅವರು ಬಿಡಿಸಿರುವ ವಿವಿಧ ಚಿತ್ರಕಲೆಗಳು ನೋಡುಗರ ಗಮನ ಸೆಳೆದವು.
ಈ ಕಾರ್ಯಕ್ರಮದಲ್ಲಿ ಕನ್ನಡ ಹಿತರಕ್ಷಕ ಸಂಘದ ಗೌರವಾಧ್ಯಕ್ಷ ಕೆ.ಎಂ. ಹೇಮಯ್ಯಸ್ವಾಮಿ, ವೀರಶೈವ ಸಂಘದ ಅಧ್ಯಕ್ಷ ಪಿ. ಮೂಕಯ್ಯಸ್ವಾಮಿ, ಕನ್ನಡ ಹಿತರಕ್ಷಕಸಂಘದ ಅಧ್ಯಕ್ಷ ಬಿ. ಅಂಬಣ್ಣ, ವಾಸವಿ ವಿದ್ಯಾಸಂಸ್ಥೆ ಅಧ್ಯಕ್ಷ ಶ್ರೀಧರ್ ಶ್ರೇಷ್ಠಿ, ಪುರಸಭೆ ಸದಸ್ಯ ವೀರಾಂಜಿನೇಯಲು, ಕರ್ನಾಟಕ ರಾಜ್ಯ ಸ.ನೌ. ಸಂಘದ ತಾಲ್ಲೂಕು ಅಧ್ಯಕ್ಷ ಕೆ.ಸಿ. ಭೀಮಣ್ಣ, ಕಾಲೇಜು ಉಪನ್ಯಾಸಕ ಸತ್ಯನಾರಾಯಣರಾವ್, ಡಿ.ಎಸ್. ರಾಜಕುಮಾರ, ಶಿಕ್ಷಕ ವಿರೇಶ್, ಸಂಗೀತಾ ಶಿಕ್ಷಕ ಶ್ರೀನಿವಾಸ್, ಶಿಕ್ಷಕ ವೈ. ವಿರೇಶ್, ಮಾರೆಮ್ಮ ಸಂಘದ ಅಧ್ಯಕ್ಷ ಜಾಲಗಾರ್ ಹನುಮಂತಪ್ಪ ಹಾಗೂ ಕಲಾವಿದೆ ಡಿ. ಉಮಾದೇವಿ ಸೇರಿದಂತೆ ಮುಖಂಡರು, ಶಿಕ್ಷಕರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ