ಸದಸ್ಯರ ಪ್ರಶ್ನೆಗಳಿಗೆ ಚಡಪಡಿಸಿದ ಅಧಿಕಾರಿಗಳು!


Team Udayavani, Jan 11, 2018, 3:17 PM IST

11-34.jpg

ಹೊಸಪೇಟೆ: ನಗರಸಭೆ ಆಸ್ತಿ ರಕ್ಷಣೆ, ಕುಡಿವ ನೀರಿನ ತೆರಿಗೆ ಹೆಚ್ಚಳ, ಆರೋಪ ಪಟ್ಟಿಯಲ್ಲಿರುವ ಸದಸ್ಯರ ಸದಸ್ಯತ್ಯ ರದ್ದತಿ, ಮುನ್ಸಿಪಲ್‌ ಹೈಸ್ಕೂಲ್‌ ಮೈದಾನದಲ್ಲಿನ ಕಾರ್ಯಕ್ರಮಗಳಿಗೆ ಹೆಚ್ಚಿನ ದರ ನಿಗದಿ, ಕಟ್ಟಡ ಪರವಾನಗಿ ಮಂಜೂರಾತಿಗೆ ದರ ಪರಿಷ್ಕರಣೆ, ಮೂರು ವರ್ಷದ ಹಳೆ ಬಿಲ್‌ ಗಳಿಗೆ ಮತ್ತು ವಿತರಿಸಲಾದ ಚಕ್‌ಗಳಿಗೂ ಸದಸ್ಯರ ಅನುಮೋದನೆ ಪಡೆಯುವುದು, ಅಜೆಂಡಾದಲ್ಲಿ ವಿಷಯ ತರಲು ಅರ್ಜಿ ನೀಡಿದರೂ ವಿಷಯ ಪರಿಗಣಿಸುತ್ತಿಲ್ಲ… ಹೀಗೆ ಪ್ರಶ್ನೆ ಮೇಲೆ ಪ್ರಶ್ನೆ ಕೇಳುವ ಮೂಲಕ ಸದಸ್ಯರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನಗರಸಭೆ ಸಭಾಂಗಣದಲ್ಲಿ ಬುಧವಾರ ಅಧ್ಯಕ್ಷೆ ನಾಗಲಕ್ಷ್ಮಮ್ಮ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಸದಸ್ಯರ ಅನೇಕ ಪ್ರಶ್ನೆಗಳಿಗೆ ಅಧಿಕಾರಿಗಳ ಮೌನವೇ ಉತ್ತರವಾಗಿತ್ತು. ಅನಂತಶಯನಗುಡಿಯಲ್ಲಿ ನಗರಸಭೆ ಆಸ್ತಿಯಲ್ಲಿದ್ದ ಸಾರ್ವಜನಿಕ ಗ್ರಂಥಾಲಯದ ಸ್ಥಳ 
ಅತಿಕ್ರಮಗೊಂಡಿದೆ. ಆಸ್ತಿ ರಕ್ಷಣೆ ಮಾಡಬೇಕೆಂದು ಅರ್ಜಿ ಸಲ್ಲಿಸಿ ಮೂರು ವರ್ಷವಾದರೂ ಅಧಿಕಾರಿಗಳು ಸ್ಥಳ ಪರಿಶೀಲನೆಗೂ ಮುಂದಾಗಿಲ್ಲ ಎಂದು ಸದಸ್ಯ ಕುಲ್ಲಾಯಪ್ಪ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡರು. ಇನ್ನುಳಿದ ಸದಸ್ಯರು ಧ್ವನಿಗೂಡಿಸಿ ಸಿಬ್ಬಂದಿಗಳ ವಿರುದ್ಧ ಹರಿಹಾಯ್ದರು.  ನಾಳೆಯೇ ಸ್ಥಳ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ಎಇಇ ಮನ್ಸೂರ್‌ ಅಹ್ಮದ್‌ ಭರವಸೆ ನೀಡಿದರು. 

ನಗರಸಭೆಗೆ ಆದಾಯ ಕುಂಠಿತಗೊಂಡಿದೆ. ಕುಡಿವ ನೀರಿನ ದರ ಹೆಚ್ಚಿಸಬೇಕೆಂದು ಪೌರಾಯುಕ್ತರು ಪ್ರಸ್ತಾಪಿಸುತ್ತಿದ್ದಂತೆ ಸದಸ್ಯ ಕೆ.ಗೌಸ್‌ ಮಾತನಾಡಿ, ಮೊದಲು ಜನರಿಗೆ ಕುಡಿವ ನೀರು ಸರಿಯಾಗಿ ಕೊಡಿ. ನೀರು ಸಿಗದಿದ್ದರೂ ಫಾರಂ-3ಗಾಗಿ ಜನರು ನೀರಿನ ಟ್ಯಾಕ್ಸ್‌ ಕಟ್ಟಬೇಕಾದ ಪರಿಸ್ಥಿತಿ ನಿರ್ಮಾಣಗೊಂಡಿದೆ. ಅಲ್ಲದೆ ತಿಂಗಳಿಗೆ 200 ರೂ. ದರ ನಿಗದಿಗೊಳಿಸಿರುವುದು ಅವೈಜ್ಞಾನಿಕವಾಗಿದೆ ಎಂದು ಆರೋಪಿಸಿದರು. ಧ್ವನಿಗೂಡಿಸಿದ ಸದಸ್ಯರು, ಅನಧಿಕೃತವಾಗಿ ನೀರಿನ ಸಂಪರ್ಕಕ್ಕೆ ಕಡಿವಾಣ ಹಾಕಬೇಕು. ಬಿಲ್‌ ಕಲೆಕ್ಟರ್‌ಗಳ ಗಮನಕ್ಕೆ ಇಲ್ಲದೆ ಅನಧಿಕೃತ ಕನೆಕ್ಷನ್‌ ನಡೆಯುವುದಿಲ್ಲ. ಪೂರ್ಣ ಪ್ರಮಾಣದಲ್ಲಿ ಕರ ವಸೂಲಿ ಮಾಡಿದರೆ ನಗರಸಭೆಗೆ ಆದಾಯದ ಕೊರತೆ ಎದುರಾಗುವುದಿಲ್ಲ ಎಂದರು.

ನಗರದ ಮುನ್ಸಿಫ‌ಲ್‌ ಗ್ರೌಂಡ್‌ನ‌ಲ್ಲಿ ನಡೆಯುವ ವಾಣಿಜ್ಯ ಮೇಳಕ್ಕೆ 5000 ರೂ., ವಸ್ತು ಪ್ರದರ್ಶನಕ್ಕೆ 1000 ರೂ., ಟಿವಿ ಕಾರ್ಯಕ್ರಮಕ್ಕೆ 25000 ರೂ., ರಾಜಕೀಯ ಕಾರ್ಯಕ್ರಮಗಳಿಗೆ 25000 ರೂ. ನಿಗದಿಪಡಿಸಬಹುದು ಎಂದು ಸದಸ್ಯರು ಸಲಹೆ ನೀಡಿದರು.

ನಗರದಲ್ಲಿನ ಕಟ್ಟಡ ಪರವಾನಗಿ ಪಡೆಯುವ ದರ ಅತಿ ಕಡಿಮೆಯಾಗಿದೆ. ವಸತಿಗಾಗಿ ಪ್ರತಿ ಚ.ಅಡಿಗೆ 2 ರೂ.ರ ಬದಲಾಗಿ 4 ರೂ., ಕೈಗಾರಿಕೆಗೆ
2 ರೂ. ಬದಲಾಗಿ 5 ರೂ. ಮತ್ತು ವಾಣಿಜ್ಯಕ್ಕೆ 2 ರೂ. ಬದಲಾಗಿ 6 ರೂ. ನಿಗದಿಗೊಳಿಸಲು ಚರ್ಚೆ ನಡೆಯಿತು. ನಗರಸಭೆ ಉಪಾಧ್ಯಕ್ಷೆ ಸುಮಂಗಳ
ಸೇರಿದಂತೆ ಸದಸ್ಯರು ಇದ್ದರು. 

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.