ಆನಂದ ಸಿಂಗ್ ಗೆ ಡಿಸಿಎಂ ಸ್ಥಾನಕ್ಕಾಗಿ ಆನ್ ಲೈನ್ ಅಭಿಯಾನ
Team Udayavani, Jul 31, 2021, 11:58 AM IST
ಹೊಸಪೇಟೆ: ರಾಜ್ಯದಲ್ಲಿ ನೂತನ ಸಿಎಂ ಆಯ್ಕೆ ನಡೆದು ಈಗ ಸಚಿವ ಸಂಪುಟ ಸರ್ಕಸ್ ನಡೆಯುತ್ತಿದೆ. ಯಾರಿಗೆಲ್ಲ ಸಂಪುಟದಲ್ಲಿ ಅವಕಾಶ ಸಿಗಬಹುದು ಎಂಬ ಕುತೂಹಲ ಮೂಡಿದೆ. ಇದರ ಬೆನ್ನಲ್ಲೇ ಬಸವರಾಜ ಬೊಮ್ಮಾಯಿ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡುತ್ತಿದ್ದಂತೆ ಮಾಜಿ ಸಚಿವ ಆನಂದ ಸಿಂಗ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನವೊಂದು ಆರಂಭವಾಗಿದೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರದಿಂದಲೇ ಆನಂದ ಸಿಂಗ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಅವರ ಅಭಿಮಾನಿ ಹಾಗೂ ಬೆಂಬಲಿಗರು ಆನ್ಲೈನ್ ಕ್ಯಾಂಪೇನ್ ಆರಂಭಿಸಿದ್ದು ಇದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಈ ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಲು ಆನಂದ ಸಿಂಗ್ ಕಾರಣೀಕರ್ತರಾಗಿದ್ದಾರೆ. ಮೊದಲು ಆನಂದ್ ಸಿಂಗ್ ರಾಜೀನಾಮೆ ಸಲ್ಲಿಸಿದ ಬಳಿಕ ಉಳಿದವರು ರಾಜೀನಾಮೆ ಸಲ್ಲಿಸಿದ್ದರು. ಇದರಿಂದಾಗಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನವಾಗಿ ಯಡಿಯೂರಪ್ಪನವರಿಗೆ ಸುಲಭವಾಗಿ ಮುಖ್ಯಮಂತ್ರಿ ಗಾದಿ ಒಲಿದು ಬರಲು ಕಾರಣವಾಯಿತು. ಹೀಗಾಗಿ ಆನಂದಸಿಂಗ್ ಅವರಿಗೆ ಡಿಸಿಎಂ ಸ್ಥಾನ ನೀಡಬೇಕು ಎಂಬ ಸಂದೇಶ ರವಾನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ