ಹೊರಗುತ್ತಿಗೆ ನೌಕರರ ಪ್ರತಿಭಟನೆ
Team Udayavani, Oct 15, 2019, 3:58 PM IST
ಹೂವಿನಹಡಗಲಿ: ಪಟ್ಟಣದಲ್ಲಿ ಸಣ್ಣ ಏತನೀರಾವರಿ ಯೋಜನೆ ಹಾಗೂ ನಿರ್ವಾಹಕರು, ನೀರು ಗಂಟಿ, ಹೊರ ಗುತ್ತಿಗೆದಾರ ನೌಕರರು ತಮ್ಮ ವಿವಿಧ ಬೇಡಿಕೆ ಈಡೇರಿಕಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಎಚ್.ಎಂ. ಕೊಟ್ರೇಶ್ ಕಳೆದ 25 ವರ್ಷಗಳಿಂದಲೂ ನೀರು ಗಂಟಿಗಳು ಯಾವುದೇ ಸೇವಾ ಭದ್ರತೆ ಇಲ್ಲದೆ ಅಲ್ಪ ಸಂಬಳದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಕೂಡಲೇ ಇಪಿಎಸ್, ಇವಿಎಸ್ಪಿ ಸೌಲಭ್ಯ ಒದಗಿಸಬೇಕು. ಅಲ್ಲದೇ ಹೆಚ್ಚುವರಿ ವೇತನ ನೀಡಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಸಂಘದ ಉಪಾಧ್ಯಕ್ಷ ಎಚ್. ರುದ್ರಪ್ಪ, ಖಜಾಂಜಿ ಕೆ. ಭೀಮಪ್ಪ, ಕಾರ್ಯದರ್ಶಿ ಕೆ. ಷಣ್ಮೂಖ, ಸಹಕಾರ್ಯದರ್ಶಿ ಟಿ. ಹನುಮಂತಪ್ಪ ಮತ್ತಿತರರಿದ್ದರು. ಸಣ್ಣ ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಆಭಿಯಂತರ ಪ್ರಭಾಕರರಿಗೆ ಬೇಡಿಕೆಗಳ ಮನವಿ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ