ಪಾಕಿಸ್ತಾನಕೆ ಯುದ್ಕ ಮಾಡೋ ಸಾಮರ್ಥ್ಯವಿಲ್ಲ


Team Udayavani, Mar 3, 2019, 11:42 AM IST

bell-2.jpg

ಹರಪನಹಳ್ಳಿ: ಭಾರತದ ಎದುರು ಯುದ್ಧ ಮಾಡುವ ಸಾಮರ್ಥ್ಯ ಪಾಕಿಸ್ತಾನಕ್ಕೆ ಇಲ್ಲ. ಪ್ರಧಾನಿ ನರೇಂದ್ರ ಮೋದಿ ಜಾಗತಿಕ ಮಟ್ಟದಲ್ಲಿ ಒತ್ತಡ ಹಾಕಿ, ಪಾಕಿಸ್ತಾನದ ಜುಟ್ಟು ಹಿಡಿದ ಪರಿಣಾಮ ಯುದ್ಧಕ್ಕೆ ಹೆದರಿ ವಿಂಗ್‌ ಕಮಾಂಡರ್‌ ಅಭಿನಂದನ್‌ ಅವರನ್ನು ಬೇಷರತ್‌ ಬಿಡುಗಡೆ ಮಾಡಿದೆ ಎಂದು ಟೀಮ್‌ ಮೋದಿ ಸಂಸ್ಥಾಪಕ ಚಕ್ರವರ್ತಿಸೂಲಿಬೆಲೆ ಹೇಳಿದರು.

ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಅವರಣದಲ್ಲಿ ಟೀಂ ಮೋದಿ ತಂಡದವತಿಯಿಂದ ಹಮ್ಮಿಕೊಂಡಿಕೊಂಡಿದ್ದ ದೇಶಕ್ಕಾಗಿ ಮೋದಿ, ಮೋದಿಗಾಗಿ ನಾವು ಕಾರ್ಯಕ್ರಮ ಮತ್ತು ಪ್ರಧಾನಮಂತ್ರಿ ಅವರ ಸಾಧನೆ ಹಾಗೂ ಕೇಂದ್ರ ಸರ್ಕಾರದಿಂದ ಜಾರಿಯಾಗಿರುವ ಯೋಜನೆಗಳ ಕುರಿತ ಜನಜಾಗೃತಿ ಸಮಾವೇಶದಲ್ಲಿ ಅವರು ಮಾತನಾಡಿದರು.

ಪಾಕಿಸ್ತಾನ ನಿಜವಾಗಿಯೂ ಶಾಂತಿ ಬಯಸುವುದಾದರೆ ಮೊದಲು ಭಾರತದ ಸಾವಿರಾರು ಜನರ ಹತ್ಯೆಗೆ ಕಾರಣರಾದ ಭೂಗತ ಪಾತಕಿ ದಾವೂದ್‌ ಇಬ್ರಾಹಿಂ, ಉಗ್ರಗಾಮಿ ಸಂಘಟನೆ ಮುಖಂಡರನ್ನು ಹಸ್ತಾಂತರಿಸಬಹುದಿತ್ತು. ಪಾಕಿಸ್ತಾನಕ್ಕೆ ಶೇ.70ರಷ್ಟು ಇಂಧನ ಜಲಮಾರ್ಗದ ಮೂಲಕ ಸರಬರಾಜು ಆಗುತ್ತಿದೆ. ಪಾಕಿಸ್ತಾನಕ್ಕೆ ಬರುವ ಇಂಧನದ ಹಡಗನ್ನು ಭಾರತದ ನೌಕಾಪಡೆ ತಡೆದರೆ ನಾಲ್ಕು ದಿನಗಳಲ್ಲಿ ಅಲ್ಲಿ ಇಂಧನ ಕ್ಷಾಮ ಉಂಟಾಗಲಿದೆ. ನಮ್ಮ ನೌಕಾಪಡೆಯನ್ನು ತಡೆಯುವ ಶಕ್ತಿ ಸದ್ಯಕ್ಕೆ ಇರುವುದು ಅಮೆರಿಕ ಮತ್ತು ರಷ್ಯಾಕ್ಕೆ ಮಾತ್ರ. ಈ ಬೆಳವಣಿಗೆಯಲ್ಲಿ ಈ ಎರಡೂ ರಾಷ್ಟ್ರಗಳು ಭಾರತದ ಬೆಂಬಲಕ್ಕೆ ನಿಂತಿವೆ. ನೌಕಾಪಡೆ ಕಾರ್ಯಾಚರಣೆಗೆ ಇಳಿದರೆ ನಾಲ್ಕು ದಿನಗಳಲ್ಲಿ ಪಾಕಿಸ್ತಾನ ಮಂಡಿಯೂರಿ ಭಾರತದ ಮುಂದೆ ಕುಳಿತುಕೊಳ್ಳಬೇಕಾಗುತ್ತದೆ ಎಂದರು.

ರಫೇಲ್‌ ಯುದ್ಧ ವಿಮಾನ ಬಂದರೆ ಪಾಕಿಸ್ತಾನವಷ್ಟೇ ಅಲ್ಲ; ಚೀನಾವನ್ನೂ ಗುರಾಯಿಸಿ ನೋಡುವ ಶಕ್ತಿ ನಮಗೆ ಬರಲಿದೆ. ಮೂರು ವರ್ಷಗಳಲ್ಲಿ 36 ರಫೇಲ್‌ ಯುದ್ಧ ವಿಮಾನಗಳು ಬರಲಿದ್ದು, ಆಗ ನಮ್ಮ ವಾಯುಪಡೆಯ ತಾಕತ್ತು ಹೇಗಿರುತ್ತದೆ ಎಂದು ನೋಡಬೇಕು. ಅಣುಬಾಂಬ್‌ ಇರುವ ದೇಶದ ಮೇಲೆಯೂ ನಿರ್ದಿಷ್ಟ ದಾಳಿ ನಡೆಸುವ ಮೂಲಕ ಮೋದಿ ಪಾಕಿಸ್ತಾನದ ಮಿಲಿಟರಿ ಹಾಗೂ ರಾಜಕೀಯ ನಾಯಕತ್ವದ ಶಕ್ತಿ ದುರ್ಬಲವಾಗಿದೆ ಎಂಬುದನ್ನು ಜಗತ್ತಿಗೆ ತೋರಿಸಿಕೊಟ್ಟಿದ್ದಾರೆ. ರಾಹುಲ್‌ ಗಾಂಧಿ , ಪ್ರಕಾಶ್‌ರಾಜ್‌ ಅವರಂತವರ ಬಗ್ಗೆ ಜನ ತಲೆಕೆಡಿಸಿಕೊಳ್ಳಬೇಕಾಗಿಲ್ಲ. ಮೋದಿಯನ್ನು ಮತ್ತೂಮ್ಮೆ ಅಧಿಕಾರಕ್ಕೆ ತನ್ನಿ ಎಂದು ಮನವಿ ಮಾಡಿದರು.

ಸ್ಥಳೀಯ ತೆಗ್ಗಿನಮಠ ಸಂಸ್ಥಾನದ ಪೀಠಾಧ್ಯಕ್ಷ ವರಸದ್ಯೋಜಾತ ಸ್ವಾಮೀಜಿ ಮಾತನಾಡಿ, ಧಾರ್ಮಿಕತೆಯ ದೇಶವಾದ ಭಾರತವನ್ನು ಕೇವಲ ಬಲಾಡ್ಯ ಆರ್ಥಿಕ ಶಕ್ತಿಯನ್ನಾಗಿ ಬಿಂಬಿಸದೇ ಒಂದು ಆಧ್ಯಾತ್ಮಿಕ ಕೇಂದ್ರವನ್ನಾಗಿ ಪ್ರಧಾನಿ ಮೋದಿ ಮಾಡಿದ್ದಾರೆ. ಅಂತಾರಾಷ್ಟ್ರೀಯ ಯೋಗ ದಿನಾಚರಣೆ ವಿಶ್ವದ ಅನೇಕ ರಾಷ್ಟ್ರಗಳ ಮನ್ನಣೆಗೆ ಮುನ್ನುಡಿ ಬರೆದಿದ್ದಾರೆ ಎಂದರು. ನರೇಂದ್ರ ಮೋದಿಯವರು ವಿದ್ಯಾರ್ಥಿಗಳ ಜೊತೆ ಸಂವಾದ, ಬಡಜನರ ಸಹಾಯಕ್ಕೆ ಮೊದಲ ಅದ್ಯತೆ ನೀಡಿ, ಮನ್‌ ಕೀ ಬಾತ್‌ನಂತಹ ಹಲವಾರು ಯೋಜನೆಗಳು ಜನರ ಮನ-ಮನೆಗಳಲ್ಲಿ ಮನೆ ಮಾಡಿವೆ. ಹಲವಾರು ಯೋಜನೆಗಳನ್ನು ಸಮಾಜದ ಮಡಿಲಿಗೆ ಹಾಕಿ ಹಿಂದೆಂದೂ ಕಾಣದ ಅಭಿವೃದ್ಧಿಗೆ ಅಭಯದ ಮಾರ್ಗ ತೋರಿದ ಮೋದಿಯವರನ್ನು ಯಾರು ಮರೆಯುವಂತಿಲ್ಲ ಎಂದರು. ಟೀ ಮೋದಿ ತಾಲೂಕು ಸಂಚಾಲಕ ಲಿಂಗನಗೌಡ ಇತರರಿದ್ದರು.

ಟಾಪ್ ನ್ಯೂಸ್

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.