ಮಾಸ್ಕ್ ಧರಿಸದ ಸವಾರರಿಗೆ ದಂಡ
Team Udayavani, Jul 21, 2020, 10:35 AM IST
ಹರಪನಹಳ್ಳಿ: ಕೋವಿಡ್ ಸೋಂಕು ದಿನದಿಂದ ದಿನಕ್ಕೆ ತನ್ನ ಕೆನ್ನಾಲಿಗೆ ಚಾಚುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಪುರಸಭೆ ವತಿಯಿಂದ ಪಟ್ಟಣದಲ್ಲಿ ಮಾಸ್ಕ್ ಧರಿಸಿದ ಸಂಚರಿಸುವ ವಾಹನ ಸವಾರರಿಗೆ ದಂಡ ವಿಧಿಸಿದರು.
ಪಟ್ಟಣದಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರರನ್ನು ತಡೆದು ಅವರಿಗೆ ಕೊರೊನಾ ಕುರಿತು ಜಾಗೃತಿ ಮೂಡಿಸುವುದರ ಜೊತೆಗೆ ದಂಡ ಕೂಡ ವಸೂಲಿ ಮಾಡಲಾಯಿತು. ಇದಲ್ಲದೇ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೇ ಸಾಮಾಜಿಕ ಅಂತರ ಕಾಯ್ದುಕೊಳ್ಳದ ವಿವಿಧ ಅಂಗಡಿಗಳ ಮಾಲೀಕರಿಗೂ ಸಹ 100ರೂ ದಂಡ ವಿ ಸಲಾಯಿತು. ಪುರಸಭೆಯಿಂದ ಕೋವಿಡ್ ಸೋಂಕು ತಡೆಗಟ್ಟುವ ಕುರಿತು ಜಾಗೃತಿ ಮೂಡಿಸಿದ್ದೇವೆ. ಪಟ್ಟಣದಲ್ಲಿ ಆಟೋದ ಧ್ವನಿವರ್ಧಕ ಮೂಲಕ ಮತ್ತು ಫ್ಲೆಕ್ಸ್ಗಳ ಮೂಲಕ ಜಾಗೃತಿ ಕಾರ್ಯ ಮಾಡಿದ್ದೇವೆ. ಪ್ರತಿಯೊಬ್ಬರೂ ಸ್ವತ್ಛತೆ ಕಾಪಾಡಿಕೊಳ್ಳುವುದರ ಜೊತೆಗೆ ಮನೆಯಿಂದ ಹೊರಗೆ ಬರುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ತಿಳಿಸಿದರೂ ಸಹ ವಾಹನ ಸವಾರರು ಮಾಸ್ಕ್ ಇಲ್ಲದೇ ಬೀದಿಗೆ ಬರುತ್ತಿದ್ದಾರೆ. ಅಂತವರಿಗೆ ದಂಡ ವಿಧಿಸುವ ಮೂಲಕ ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದೇವೆ ಎಂದು ಪುರಸಭೆ ಮುಖ್ಯಾಧಿಕಾರಿ ಬಿ.ಆರ್.ನಾಗರಾಜನಾಯ್ಕ ತಿಳಿಸಿದರು.
ಪುರಸಭೆ ಹಿರಿಯ ಆರೋಗ್ಯ ನಿರೀಕ್ಷಕ ಪಿ. ಮಂಜುನಾಥ, ಸಮುದಾಯ ಸಂಘಟನಾಧಿಕಾರಿ ಸಿ. ಲೋಕ್ಯನಾಯ್ಕ, ಕಚೇರಿ ವ್ಯವಸ್ಥಾಪಕ ಅಶೋಕ್, ಗೌಡಪ್ಪ ಹಾಗೂ ಪೌರ ಕಾರ್ಮಿಕ ಸಿಬ್ಬಂದಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ