ಪಿಎಫ್ಐ ಶಸ್ತ್ರಾಸ್ತ್ರ ತರಬೇತುದಾರ ಸೆರೆ;  ಬಳ್ಳಾರಿಯಲ್ಲಿ ಆರೋಪಿ ಯೂನುಸ್‌ ಬಂಧನ

ಆಂಧ್ರದ ನಂದ್ಯಾಲದಿಂದ ಬಂದು ತಲೆಮರೆಸಿದ್ದ

Team Udayavani, Jun 15, 2023, 7:21 AM IST

ಪಿಎಫ್ಐ ಶಸ್ತ್ರಾಸ್ತ್ರ ತರಬೇತುದಾರ ಸೆರೆ;  ಬಳ್ಳಾರಿಯಲ್ಲಿ ಆರೋಪಿ ಯೂನುಸ್‌ ಬಂಧನ

ಬಳ್ಳಾರಿ/ಹೊಸದಿಲ್ಲಿ: ನಿಷೇಧಿತ ಪಾಪ್ಯುಲರ್‌ ಫ್ರಂಟ್‌ ಆಫ್ ಇಂಡಿಯಾ (ಪಿಎಫ್ ಐ) ಸಂಘಟನೆಯ “ಪ್ರಮುಖ ಶಸ್ತ್ರಾಸ್ತ್ರ ತರಬೇತುದಾರ’ (ಮಾಸ್ಟರ್‌ ವೆಪನ್‌ ಟ್ರೈನರ್‌)ನೊಬ್ಬ ಬಳ್ಳಾರಿಯಲ್ಲಿ ಸೆರೆ ಸಿಕ್ಕಿದ್ದಾನೆ.

ನಗರದ ಕೌಲ್‌ಬಜಾರ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ತಲೆಮರೆಸಿಕೊಂಡಿದ್ದ ಈತನನ್ನು ಹೈದರಾಬಾದ್‌ ಪೊಲೀಸರು ಇತ್ತೀಚೆಗೆ ಬಂಧಿಸಿ ಕರೆದೊಯ್ದಿದ್ದು ತಡವಾಗಿ ಬೆಳಕಿಗೆ ಬಂದಿದೆ. ನೆರೆಯ ಆಂಧ್ರಪ್ರದೇಶದ ನಂದ್ಯಾಲ ಮೂಲದ ನೋಸ್ಸಮ್‌ ಮೊಹಮ್ಮದ್‌ ಯೂನುಸ್‌ (33) ಎಂಬಾತನೇ ಬಂಧಿತ ಆರೋಪಿ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬುಧವಾರ ತಿಳಿಸಿದೆ. ಕಳೆದ ವರ್ಷದ ಜುಲೈ 4ರಂದು ತೆಲಂಗಾಣ ಪೊಲೀಸರು ಈ ಪ್ರಕರಣಕ್ಕೆ ಸಂಬಂಧಿಸಿ ಕೇಸು ದಾಖಲಿಸಿಕೊಂಡಿದ್ದರು. ಬಳಿಕ ತನಿಖೆಯ ಹೊಣೆಯನ್ನು ಎನ್‌ಐಎ ವಹಿಸಿಕೊಂಡಿತ್ತು.

ಯೂನುಸ್‌ ಬಂಧನದ ಮೂಲಕ ವಿವಿಧ ಸಮುದಾಯಗಳ ನಡುವೆ ಕೋಮುಭಾವನೆ ಕೆರಳಿಸುವ ಹಾಗೂ ಅಮಾಯಕ ಮುಸ್ಲಿಂ ಯುವಕರನ್ನು ಬಳಸಿಕೊಂಡು ದೇಶದ ಶಾಂತಿ ಮತ್ತು ಸಾಮರಸ್ಯ ಹಾಳು ಮಾಡುವ ಪಿಎಫ್ಐ ಸಂಚನ್ನು ಮತ್ತೂಮ್ಮೆ ಎನ್‌ಐಎ ಬಯಲಿಗೆ ಎಳೆದಂತಾಗಿದೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆಯ ವಕ್ತಾರರು  ಹೇಳಿದ್ದಾರೆ.

ಆಂಧ್ರದಿಂದ ಬಳ್ಳಾರಿಗೆ ಸ್ಥಳಾಂತರ
ನಿಜಾಮಾಬಾದ್‌ ಉಗ್ರ ಸಂಚು ಪ್ರಕರಣದಲ್ಲಿ ಈತ ಹೈದರಾಬಾದ್‌ ಪೊಲೀಸರಿಗೆ ಬೇಕಾಗಿದ್ದ. ಯುವಕರನ್ನು ಉಗ್ರ ಸಂಘಟನೆಗೆ ನೇಮಿಸಿಕೊಂಡು, ಅವರಿಗೆ ತರಬೇತಿ ನೀಡಿ, ವಿಧ್ವಂಸಕ ಕೃತ್ಯಗಳಿಗೆ ಸಿದ್ಧಗೊಳಿಸಲು ಪಿಎಫ್ಐ ನಡೆಸಿದ್ದ ಸಂಚು ಇದಾಗಿತ್ತು. 2022ರ ಸೆಪ್ಟಂಬರ್‌ನಲ್ಲಿ ಈತನ ಮನೆಯಲ್ಲಿ ಶೋಧ ಕಾರ್ಯ ನಡೆಸಿದ್ದಾಗ, ಈತ ತನ್ನ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ಪರಾರಿಯಾಗಿದ್ದ.  ಬಳಿಕ ಆತನ ಸುಳಿವೇ ಇರಲಿಲ್ಲ. ಇತ್ತೀಚೆಗೆ ಯೂನುಸ್‌ ತನ್ನ ಇಡೀ ಕುಟುಂಬವನ್ನು ಆಂಧ್ರಪ್ರದೇಶದಿಂದ ಕರ್ನಾಟಕಕ್ಕೆ ಸ್ಥಳಾಂತರಿಸಿರುವ ಬಗ್ಗೆ ಮಾಹಿತಿ ಸಿಕ್ಕಿತ್ತು. ಈ ಕುರಿತು ತನಿಖೆ ನಡೆಸಿದಾಗ, ಆತ ಬಳ್ಳಾರಿ ಜಿಲ್ಲೆಯ ಕೌಲ್‌ಬಜಾರ್‌ ಬಜಾರ್‌ ಠಾಣೆ ವ್ಯಾಪ್ತಿಯ ಜಾಗೃತಿ ನಗರದಲ್ಲಿ ವಾಸವಿರುವುದು ತಿಳಿದುಬಂತು.

ಹೆಸರು ಬದಲಾಯಿಸಿಕೊಂಡಿದ್ದ
ಬಳ್ಳಾರಿಗೆ ಬಂದು ತಲೆಮರೆಸಿಕೊಂಡಿದ್ದ ಯೂನುಸ್‌ ತನ್ನ ಗುರುತನ್ನು  ಮರೆಮಾಚಲು ಹೆಸರನ್ನು “ಬಶೀರ್‌’ ಎಂದು ಬದಲಾಯಿಸಿ ಪ್ಲಂಬರ್‌ ವೃತ್ತಿಯನ್ನು ಆರಂಭಿಸಿದ್ದ. ಈಗ ಮೊಬೈಲ್‌ ಲೊಕೇಷನ್‌ ಮೂಲಕ ಆತ ತಲೆಮರೆಸಿಕೊಂಡಿದ್ದ ಸ್ಥಳವನ್ನು ಪತ್ತೆ ಹಚ್ಚಿದ್ದ ಹೈದರಾಬಾದ್‌ ಪೊಲೀಸರು, ಎರಡು ದಿನಗಳ ಹಿಂದೆ ಬಂದು ಬಂಧಿಸಿ ಕರೆದೊಯ್ದಿದ್ದಾರೆ.

ಶಸ್ತ್ರಾಸ್ತ್ರ ತರಬೇತಿ ನೀಡುತ್ತಿದ್ದ!
ಯೂನುಸ್‌ ಪಿಎಫ್ಐನ ಶಸ್ತ್ರಾಸ್ತ್ರ  ತರಬೇತಿಯ ಮಾಸ್ಟರ್‌ ಆಗಿದ್ದ. ಆಂಧ್ರ ಪ್ರದೇಶ ಮತ್ತು ತೆಲಂಗಾಣದಿಂದ ಪಿಎಫ್ಐ ನೇಮಕ ಮಾಡುತ್ತಿದ್ದ ಯುವಕರಿಗೆ ಈತನೇ ಶಸ್ತ್ರಾಸ್ತ್ರಗಳ ಬಳಕೆಯ ತರಬೇತಿ ನೀಡುತ್ತಿದ್ದ. ನಿಜಾಬಾಮಾದ್‌ ಪಿಎಫ್ಐ ಪ್ರಕರಣದಲ್ಲೂ ಈತ ಉಗ್ರರಿಗೆ ದೈಹಿಕ ಶಿಕ್ಷಣ ತರಬೇತಿಯ ರಾಜ್ಯ ಸಮನ್ವಯಕಾರನಾಗಿ ಕೆಲಸ ಮಾಡಿದ ಆರೋಪ ಎದುರಿಸುತ್ತಿದ್ದ. ಈತನನ್ನು ವಿಚಾರಣೆ ನಡೆಸಿದಾಗ, ಶೇಖ್‌ ಅಲಿಯಾಸ್‌ ಅಹ್ಮದ್‌ ಎಂಬಾತ ಪಿಎಫ್ಐ ಶಸ್ತ್ರಾಸ್ತ್ರ ತರಬೇತಿಯ ಸಂಚಿನಲ್ಲಿ ಭಾಗಿಯಾಗಿದ್ದಾಗಿ ಬಾಯಿಬಿಟ್ಟಿದ್ದಾನೆ. ಆದರೆ ಶೇಖ್‌ ಈಗ ತಲೆಮರೆಸಿಕೊಂಡಿದ್ದಾನೆ ಎಂದು ಎನ್‌ಐಎ ತಿಳಿಸಿದೆ.

 

ಟಾಪ್ ನ್ಯೂಸ್

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.