ಮುಂದಿನ ಬಾರಿ ಹಂಪಿ ಉತ್ಸವಕ್ಕೆ ಪ್ರಧಾನಿ ಮೋದಿಗೆ ಆಹ್ವಾನ: ಸಿ.ಟಿ.ರವಿ
ಐತಿಹಾಸಿಕ ಹಿನ್ನೆಲೆ ಪರಿಗಣಿಸಿ ಉತ್ಸವಕ್ಕೆ ನಿರ್ದಿಷ್ಟ ದಿನಾಂಕ ನಿರ್ಧಾರ
Team Udayavani, Jan 10, 2020, 7:15 PM IST
ಹಂಪಿ (ಬಳ್ಳಾರಿ):ಮುಂದಿನ ಹಂಪಿ ಉತ್ಸವ ಆಚರಣೆವರೆಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜವಾಬ್ದಾರಿಯನ್ನು ಮುಖ್ಯಮಂತ್ರಿಗಳು ನನಗೇ ವಹಿಸಿದಲ್ಲಿ ಪ್ರಧಾನಿ ಮೋದಿ ಅವರನ್ನು ಆಹ್ವಾನಿಸಿ ವೈಭವವಾಗಿ ಹಂಪಿ ಉತ್ಸವ ಆಚರಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ, ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಕೇಂದ್ರದ ಪ್ರವಾಸೋದ್ಯಮ ಸಚಿವರಾದ ಪ್ರಹ್ಲಾದ್ಸಿಂಗ್ ಪಟೇಲರನ್ನು ಉತ್ಸವಕ್ಕೆ ಆಹ್ವಾನಿಸಲಾಗಿತ್ತು. ಆದರೆ ಅನಿವಾರ್ಯ ಕಾರಣಗಳಿಂದ ಅವರು ಪಾಲ್ಗೊಳ್ಳುತ್ತಿಲ್ಲ. ವಿಜಯನಗರ ಸಾಮ್ರಾಜ್ಯ ನಮ್ಮ ಹೆಮ್ಮೆ. ಅಂದಿನ ಕಾಲಘಟ್ಟದಲ್ಲಿ ನಮ್ಮ ಸನಾತನ ಕಲೆ, ಸಂಸ್ಕೃತಿ ಪರಂಪರೆಗಳು ವೈಭವದ ಪರಾಕಾಷ್ಠೆಗೆ ತಲುಪಿದ್ದವು. ಹಾಗಾಗಿ ವಿಜಯನಗರ ಸಾಮ್ರಾಜ್ಯ, ರಾಜ್ಯ-ದೇಶದ ಹೆಮ್ಮೆಯಾಗಿದ್ದು, ಇನ್ನೂ ಹೆಚ್ಚಿ ಸಂಖ್ಯೆಯಲ್ಲಿ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದ ಪ್ರವಾಸಿಗಳನ್ನು ಸೆಳೆಯುವಂತಾಗಬೇಕು ಎಂಬ ಹಂಬಲ ನಮ್ಮದಾಗಿದ್ದು, ಈ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸಲಾಗುವುದು ಎಂದರು. ಹಂಪಿ ಉತ್ಸವ ಆಚರಣೆಗೆ ಸಂಬಂ ಧಿಸಿದಂತೆ ದಿನಾಂಕ ನಿಗದಿಪಡಿಸುವ ಕುರಿತು ಇತೀ¤ಚೆಗೆ ಚರ್ಚಿಸಲಾಗಿದೆ.
ಉತ್ಸವದ ಧಾರ್ಮಿಕ, ಐತಿಹಾಸಿಕ ಹಿನ್ನೆಲೆ ಪರಿಗಣಿಸಿ ಒಂದು ದಿನಾಂಕ ನಿಶ್ಚಯಿಸಲಾಗುವುದು. ಜತೆಗೆ ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಇಲಾಖೆಯ ವಾರ್ಷಿಕ ಕಾರ್ಯಕ್ರಮಗಳ ಪಟ್ಟಿಯಲ್ಲಿ ಹಂಪಿ ಉತ್ಸವವನ್ನು ಸೇರಿಸಲಾಗುವುದು. ಆಗ ಯಾವುದೇ ಗೊಂದಲ ಇರಲ್ಲ. ಜತೆಗೆ ನಿಶ್ಚಿತ ಅನುದಾನ ದೊರಕುವ ಯೋಜನೆಯನ್ನು ಸಹ ರೂಪಿಸಲಾಗುವುದು.
ವಿಜಯನಗರ ಜಿಲ್ಲೆ ಘೋಷಣೆಗೆ ಸಂಬಂಧಿ ಸಿದಂತೆ ಸಿಎಂ ಯಡಿಯೂರಪ್ಪನವರು ನಿರ್ಣಯ ಕೈಗೊಳ್ಳಲಿದ್ದಾರೆ. ವಿಜಯನಗರ ಜಿಲ್ಲೆ ಘೋಷಣೆಯಾಗಲಿದೆ ಎಂಬುದು ಕ್ಷೇತ್ರದ ಶಾಸಕರ ಹಂಬಲವಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ
MUST WATCH
ಹೊಸ ಸೇರ್ಪಡೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ