ಪೊಲೀಸರ ಕಾಯಕ ನಿಷ್ಠೆ ಶ್ಲಾಘನೀಯ


Team Udayavani, Oct 22, 2020, 5:54 PM IST

Ballary-tdy-2

ಬಳ್ಳಾರಿ: ಕೋವಿಡ್‌ ಲಾಕ್‌ಡೌನ್‌ ಸಂದರ್ಭದಲ್ಲಿ ಕುಟುಂಬ, ಮಕ್ಕಳೆನ್ನದೇ ಜನರ ಸೇವೆಗಾಗಿ ಕರ್ತವ್ಯದಲ್ಲಿ ನಿರತರಾಗಿದ್ದ ಪೊಲೀಸರ ತ್ಯಾಗ, ಸೇವಾ ಮನೋಭಾವ ಶ್ರೇಷ್ಠವಾದುದಾಗಿದ್ದು, ಅದು ಎಲ್ಲರಿಂದಲೂ ಸಾಧ್ಯವಿಲ್ಲ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಕೃಷ್ಣ ಬಿ.ಅಸೋಡೆ ಹೇಳಿದರು.

ನಗರದ ಡಿಎಆರ್‌ ಮೈದಾನದಲ್ಲಿ ಜಿಲ್ಲಾ ಪೊಲೀಸ್‌ ಇಲಾಖೆ ವತಿಯಿಂದ ಬುಧವಾರ ಏರ್ಪಡಿಸಲಾಗಿದ್ದ ಪೊಲೀಸ್‌ ಹುತಾತ್ಮರ ದಿನಾಚರಣೆ ನಿಮಿತ್ತ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಹುತಾತ್ಮರಾದಪೊಲೀಸರಿಗೆ ಪುಷ್ಪಗುತ್ಛ ಗೌರವ ನಮನ ಸಲ್ಲಿಸಿ ಅವರು ಮಾತನಾಡಿದರು. ಪೊಲೀಸ್‌ ಇಲಾಖೆ ಸಿಬ್ಬಂದಿ ಸಮಯದ ನಿಗದಿ ಇಲ್ಲದಂತೆ ಕೆಲಸ ಮಾಡುತ್ತಾರೆ. ನ್ಯಾಯಾಲಯದಲ್ಲಿ ನಾವು ಹೊರೆ ಇರುವುದನ್ನು ಪಾಲಿಸುವುದು ಪೊಲೀಸರು ಎಂದರು.

ಇದೇ ವೇಳೆ ಪೊಲೀಸರು ಸಹ ನ್ಯಾಯಾಧೀಶರೇ ಎಂದು ಸಂಬೋಧಿಸಿದ ನ್ಯಾಯಾಧಿಧೀಶ ಅಸೋಡೆ ಅವರು ಜನರಿಗೆ ತಮಗೆ ಸಮಸ್ಯೆಯಾದರೆ ಮೊದಲು ಪೊಲೀಸರನ್ನೇ ನೆನಪಿಸಿಕೊಂಡು ಅವರ ಹತ್ತಿರ ಬರುತ್ತಾರೆ ಎಂದರು. ಜನಸಾಮಾನ್ಯರ ಆಸ್ತಿ ಪಾಸ್ತಿ ಸುಭದ್ರವಾಗಿರಲು ಕಾರಣ ಪೊಲೀಸರು. ಜನಸಾಮಾನ್ಯರೂ ಕೂಡ ಪೊಲೀಸರನ್ನು ಗೌರವಿಸಿ, ಅಗತ್ಯ ಸೇವೆಗಳನ್ನು ಪಡೆದುಕೊಳ್ಳಬೇಕು ಎಂದರು.

ಕುಖ್ಯಾತರನ್ನು ಬಂಧಿಸಲು ಬಹಳಷ್ಟು ಬಾರಿ ಪ್ರಾಣ ಕಳೆದುಕೊಂಡ ಪ್ರಸಂಗಗಳು ನಡೆದಿವೆ. ಪೊಲೀಸರ ತ್ಯಾಗ ಮತ್ತು ಬಲಿದಾನಗಳು ಎಂದಿಗೂ ವ್ಯರ್ಥವಾಗಬಾರದು. ಹುತಾತ್ಮರಿಗೆ ಸರಿಯಾದ ಪರಿಹಾರ ನೀಡಿ, ಅವರ ಕುಟುಂಬಕ್ಕೆ ನೆರವಾಗಬೇಕು. ಹಿರಿಯ ಅಧಿಕಾರಿಗಳು ಹುತಾತ್ಮ ಕುಟುಂಬಗಳಿಗೆ ಶೀಘ್ರ ಪರಿಹಾರ ನೀಡಲು ಕ್ರಮವಹಿಸಬೇಕು ಎಂದರು. ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಲಾವಣ್ಯ ಮಾತನಾಡಿ, ಭಾರತದಲ್ಲಿ ಈ ವರ್ಷ 264 ಪೊಲೀಸರು ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿಯೇ ಮರಣಹೊಂದಿದ್ದು, ಅದರಲ್ಲಿ ಕರ್ನಾಟಕದ 17 ಜನರು ಇದ್ದಾರೆ ಎಂದರು.

ಕೋವಿಡ್‌ ಎಂಬ ಸಾಂಕ್ರಾಮಿಕ ರೋಗದ ಸಂದರ್ಭದಲ್ಲಿ ಕೋವಿಡ್‌ ವಾರಿಯರ್ಸ್‌ ಆಗಿ ತಮ್ಮ ಅಮೂಲ್ಯ ಸೇವೆ ಸಲ್ಲಿಸಿದ್ದಾರೆ. ಅನೇಕರು ಕರ್ತವ್ಯ ಸಂದರ್ಭದಲ್ಲಿಯೇ ಸೋಂಕು ತಗುಲಿ ಮರಣಹೊಂದಿದ್ದಾರೆ. ಬಳ್ಳಾರಿಯಲ್ಲಿಯೂ ಸಹ 9 ಜನ ಪೊಲೀಸ್‌ ಸಿಬ್ಬಂದಿ ಮರಣಹೊಂದಿದ್ದಾರೆ ಎಂದರು. ಇದೇ ವೇಳೆ ಹುತಾತ್ಮರಾದ ಪೊಲೀಸರ ಹೆಸರುಗಳನ್ನು ಸ್ಮರಿಸಲಾಯಿತು. ಈ ಸಂದರ್ಭದಲ್ಲಿ ಪೊಲೀಸ್‌ ಹುತಾತ್ಮರಿಗೆ ಗೌರವ ನಮನ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಡಿವೈಎಸ್ಪಿಗಳು, ಸಿಪಿಐಗಳು ಸೇರಿದಂತೆ ಪೊಲೀಸ್‌ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.