ಪೊಲೀಸರ ಕಾಯಕ ನಿಷ್ಠೆ ಶ್ಲಾಘನೀಯ


Team Udayavani, Oct 22, 2020, 5:54 PM IST

Ballary-tdy-2

ಬಳ್ಳಾರಿ: ಕೋವಿಡ್‌ ಲಾಕ್‌ಡೌನ್‌ ಸಂದರ್ಭದಲ್ಲಿ ಕುಟುಂಬ, ಮಕ್ಕಳೆನ್ನದೇ ಜನರ ಸೇವೆಗಾಗಿ ಕರ್ತವ್ಯದಲ್ಲಿ ನಿರತರಾಗಿದ್ದ ಪೊಲೀಸರ ತ್ಯಾಗ, ಸೇವಾ ಮನೋಭಾವ ಶ್ರೇಷ್ಠವಾದುದಾಗಿದ್ದು, ಅದು ಎಲ್ಲರಿಂದಲೂ ಸಾಧ್ಯವಿಲ್ಲ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಕೃಷ್ಣ ಬಿ.ಅಸೋಡೆ ಹೇಳಿದರು.

ನಗರದ ಡಿಎಆರ್‌ ಮೈದಾನದಲ್ಲಿ ಜಿಲ್ಲಾ ಪೊಲೀಸ್‌ ಇಲಾಖೆ ವತಿಯಿಂದ ಬುಧವಾರ ಏರ್ಪಡಿಸಲಾಗಿದ್ದ ಪೊಲೀಸ್‌ ಹುತಾತ್ಮರ ದಿನಾಚರಣೆ ನಿಮಿತ್ತ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಹುತಾತ್ಮರಾದಪೊಲೀಸರಿಗೆ ಪುಷ್ಪಗುತ್ಛ ಗೌರವ ನಮನ ಸಲ್ಲಿಸಿ ಅವರು ಮಾತನಾಡಿದರು. ಪೊಲೀಸ್‌ ಇಲಾಖೆ ಸಿಬ್ಬಂದಿ ಸಮಯದ ನಿಗದಿ ಇಲ್ಲದಂತೆ ಕೆಲಸ ಮಾಡುತ್ತಾರೆ. ನ್ಯಾಯಾಲಯದಲ್ಲಿ ನಾವು ಹೊರೆ ಇರುವುದನ್ನು ಪಾಲಿಸುವುದು ಪೊಲೀಸರು ಎಂದರು.

ಇದೇ ವೇಳೆ ಪೊಲೀಸರು ಸಹ ನ್ಯಾಯಾಧೀಶರೇ ಎಂದು ಸಂಬೋಧಿಸಿದ ನ್ಯಾಯಾಧಿಧೀಶ ಅಸೋಡೆ ಅವರು ಜನರಿಗೆ ತಮಗೆ ಸಮಸ್ಯೆಯಾದರೆ ಮೊದಲು ಪೊಲೀಸರನ್ನೇ ನೆನಪಿಸಿಕೊಂಡು ಅವರ ಹತ್ತಿರ ಬರುತ್ತಾರೆ ಎಂದರು. ಜನಸಾಮಾನ್ಯರ ಆಸ್ತಿ ಪಾಸ್ತಿ ಸುಭದ್ರವಾಗಿರಲು ಕಾರಣ ಪೊಲೀಸರು. ಜನಸಾಮಾನ್ಯರೂ ಕೂಡ ಪೊಲೀಸರನ್ನು ಗೌರವಿಸಿ, ಅಗತ್ಯ ಸೇವೆಗಳನ್ನು ಪಡೆದುಕೊಳ್ಳಬೇಕು ಎಂದರು.

ಕುಖ್ಯಾತರನ್ನು ಬಂಧಿಸಲು ಬಹಳಷ್ಟು ಬಾರಿ ಪ್ರಾಣ ಕಳೆದುಕೊಂಡ ಪ್ರಸಂಗಗಳು ನಡೆದಿವೆ. ಪೊಲೀಸರ ತ್ಯಾಗ ಮತ್ತು ಬಲಿದಾನಗಳು ಎಂದಿಗೂ ವ್ಯರ್ಥವಾಗಬಾರದು. ಹುತಾತ್ಮರಿಗೆ ಸರಿಯಾದ ಪರಿಹಾರ ನೀಡಿ, ಅವರ ಕುಟುಂಬಕ್ಕೆ ನೆರವಾಗಬೇಕು. ಹಿರಿಯ ಅಧಿಕಾರಿಗಳು ಹುತಾತ್ಮ ಕುಟುಂಬಗಳಿಗೆ ಶೀಘ್ರ ಪರಿಹಾರ ನೀಡಲು ಕ್ರಮವಹಿಸಬೇಕು ಎಂದರು. ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಲಾವಣ್ಯ ಮಾತನಾಡಿ, ಭಾರತದಲ್ಲಿ ಈ ವರ್ಷ 264 ಪೊಲೀಸರು ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿಯೇ ಮರಣಹೊಂದಿದ್ದು, ಅದರಲ್ಲಿ ಕರ್ನಾಟಕದ 17 ಜನರು ಇದ್ದಾರೆ ಎಂದರು.

ಕೋವಿಡ್‌ ಎಂಬ ಸಾಂಕ್ರಾಮಿಕ ರೋಗದ ಸಂದರ್ಭದಲ್ಲಿ ಕೋವಿಡ್‌ ವಾರಿಯರ್ಸ್‌ ಆಗಿ ತಮ್ಮ ಅಮೂಲ್ಯ ಸೇವೆ ಸಲ್ಲಿಸಿದ್ದಾರೆ. ಅನೇಕರು ಕರ್ತವ್ಯ ಸಂದರ್ಭದಲ್ಲಿಯೇ ಸೋಂಕು ತಗುಲಿ ಮರಣಹೊಂದಿದ್ದಾರೆ. ಬಳ್ಳಾರಿಯಲ್ಲಿಯೂ ಸಹ 9 ಜನ ಪೊಲೀಸ್‌ ಸಿಬ್ಬಂದಿ ಮರಣಹೊಂದಿದ್ದಾರೆ ಎಂದರು. ಇದೇ ವೇಳೆ ಹುತಾತ್ಮರಾದ ಪೊಲೀಸರ ಹೆಸರುಗಳನ್ನು ಸ್ಮರಿಸಲಾಯಿತು. ಈ ಸಂದರ್ಭದಲ್ಲಿ ಪೊಲೀಸ್‌ ಹುತಾತ್ಮರಿಗೆ ಗೌರವ ನಮನ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಡಿವೈಎಸ್ಪಿಗಳು, ಸಿಪಿಐಗಳು ಸೇರಿದಂತೆ ಪೊಲೀಸ್‌ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

Bellary; ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

ರಾಮೇಶ್ವರಂ ಕೆಫೆ ಪ್ರಕರಣ: ಮತ್ತೊಮ್ಮೆ ಬಳ್ಳಾರಿ ನಗರಕ್ಕೆ ಬಂದ NIA ಅಧಿಕಾರಿಗಳು

ರಾಮೇಶ್ವರಂ ಕೆಫೆ ಪ್ರಕರಣ: ಬಳ್ಳಾರಿಯಲ್ಲಿ NIA ಅಧಿಕಾರಿಗಳ ಶೋಧ, ಓರ್ವ ವಶಕ್ಕೆ

Bellary; “ಬ್ರದರ್ಸ್‌’ ವಿಧಾನಸೌಧಕ್ಕೇ ಬಾಂಬ್‌ ಇಡ್ತಾರೆ: ಶ್ರೀರಾಮುಲು

Bellary; “ಬ್ರದರ್ಸ್‌’ ವಿಧಾನಸೌಧಕ್ಕೇ ಬಾಂಬ್‌ ಇಡ್ತಾರೆ: ಶ್ರೀರಾಮುಲು

Bellary; ಕಾಂಗ್ರೆಸ್ ಗ್ಯಾರಂಟಿ ಬಳಿಕ ಮೋದಿ ಗ್ಯಾರಂಟಿ ಬಂದಿದೆ: ಸಚಿವ ನಾಗೇಂದ್ರ ವಾಗ್ದಾಳಿ

Bellary; ಕಾಂಗ್ರೆಸ್ ಗ್ಯಾರಂಟಿ ಬಳಿಕ ಮೋದಿ ಗ್ಯಾರಂಟಿ ಬಂದಿದೆ: ಸಚಿವ ನಾಗೇಂದ್ರ ವಾಗ್ದಾಳಿ

Rameshwaram Cafe Case; ಬಾಂಬರ್‌ ವೇಷ ತೊಡಿಸಿ ಪತ್ತೆ ಹಚ್ಚಲು ಶತಪ್ರಯತ್ನ

Rameshwaram Cafe Case; ಬಾಂಬರ್‌ ವೇಷ ತೊಡಿಸಿ ಪತ್ತೆ ಹಚ್ಚಲು ಶತಪ್ರಯತ್ನ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

8-wenlock

Wenlockನಲ್ಲಿ ಮೂಲಸೌಕರ್ಯ ಕೊರತೆ; ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಪೊಲೀಸ್‌ಗೆ ದೂರು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

7-mng

ಚೆಂಡೆ ಬಡಿಯುತ್ತ ಬಂದು ತಂಡದಿಂದ ಪ್ರಶ್ನೆ: ಚಕಮಕಿ, ದೂರು ದಾಖಲು

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

6-mng

Nandini Brand: 50 ಐಸ್‌ ಕ್ರೀಂ ಮಾರುಕಟ್ಟೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.