ಶಾಲಾ ಮಕ್ಕಳಿಗೆ ಪೊಲೀಸ್ ಠಾಣೆ ಮಾಹಿತಿ
Team Udayavani, Jan 19, 2019, 7:35 AM IST
ಹಗರಿಬೊಮ್ಮನಹಳ್ಳಿ : ಮಕ್ಕಳಿಗೆ ಪೊಲೀಸ್ ಠಾಣೆಯ ಬಗ್ಗೆ ಇರುವ ಭಯವನ್ನು ಹೋಗಲಾಡಿಸಲು ಸರಕಾರ ತೆರೆದಮನೆ ಕಾರ್ಯಕ್ರಮವನ್ನು ಆಯೋಜಿಸಿದ್ದು, ಮಕ್ಕಳಿಗೆ ದೂರು ಸಲ್ಲಿಸುವುದು, ಪೊಲೀಸ್ ಸಾಧನಗಳ, ಮಾಹಿತಿ ಪುಸ್ತಕ ಸೇರಿ ವಿವಿಧ ಮಾಹಿತಿಗಳನ್ನು ತಿಳಿಸಿಕೊಡಲಾಗುವುದು ಎಂದು ತಂಬ್ರಹಳ್ಳಿ ಪಿಎಸ್ಐ ಪಿ.ಸರಳಾ ತಿಳಿಸಿದರು.
ತಾಲೂಕಿನ ತಂಬ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ತೆಲುಗೋಳಿ ಪ್ರೌಢಶಾಲೆ ಮಕ್ಕಳಿಗೆ ಆಯೋಜಿಸಿದ್ದ ತೆರೆದಮನೆ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಮಾಹಿತಿ ನೀಡಿದ ನಂತರ ಮಾತನಾಡಿದ ಅವರು, ಪೊಲೀಸ್ ವ್ಯವಸ್ಥೆ ಜನಸಮುದಾಯದೊಂದಿಗೆ ಮುನ್ನಡೆಯಬೇಕು ಎಂಬ ಉದ್ದೇಶದಿಂದ ಕಾರ್ಯಕ್ರಮ ಹಾಕಿಕೊಳ್ಳಲಾಗಿದೆ. ಠಾಣೆಯ ಬಗ್ಗೆ ಭಯ ಪಡುವ ಅಗತ್ಯವಿಲ್ಲ, ತಪ್ಪ್ಪುಗಳು ನಡೆದದ್ದು ಕಂಡು ಬಂದಲ್ಲಿ ಮಕ್ಕಳು ನೇರವಾಗಿ ಠಾಣೆಗೆ ಬಂದು ದೂರು ಸಲ್ಲಿಸಬಹುದು. ತಪ್ಪಿತಸ್ಥರನ್ನು ವಿಚಾರಣೆಗೆ ಒಳಪಡಿಸಲಾಗುವುದು. ದೂರು ಅರ್ಜಿಗಳ ವಿಚಾರಣೆ, ಗುಪ್ತ ಮಾಹಿತಿ ಸಂಗ್ರಹ, ಬರಹಗಾರರ ಕೆಲಸ, ನ್ಯಾಯಾಲಯದ ಕಾರ್ಯ, ಅಪರಾಧ ತನಿಖೆ ಕುರಿತು ಮಕ್ಕಳಿಗೆ ಸಮಗ್ರ ಮಾಹಿತಿ ನೀಡಿದರು.
ಶಾಲೆಯ ಸುತ್ತಮುತ್ತ ವಿದ್ಯಾರ್ಥಿನಿಯರಿಗೆ ಕಿರುಕುಳ ಕೊಡುವವರ ಮಾಹಿತಿ ನೀಡಿದರೆ ಅಂತವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಪೇದೆಗಳಾದ ರಂಗನಾಥ, ಸುರೇಶನಾಯ್ಕ, ಕೊಟ್ರೇಶ ಮಕ್ಕಳಿಗೆ ಠಾಣೆಯ ಬಗ್ಗೆ ಹಾಗೂ ಸಾಧನಗಳ ಕುರಿತು ಮಾಹಿತಿ ನೀಡಿದರು. ಎಎಸ್ಐ ಸಿದ್ದಲಿಂಗಪ್ಪ, ಶಿಕ್ಷಕರಾದ ರಂಗನಾಥ, ಬಸವೇಶ್ವರ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ