ಮೇಯರ್‌ ಚುನಾವಣೆ; ʼಕೈʼಯಿಂದ ವೀಕ್ಷಕರ ನೇಮಕ


Team Udayavani, Sep 26, 2021, 11:57 AM IST

political news

ಬಳ್ಳಾರಿ: ಬಳ್ಳಾರಿ ಮಹಾನಗರ ಪಾಲಿಕೆಯಮೇಯರ್‌-ಉಪಮೇಯರ್‌ ಆಯ್ಕೆಗೆ ಸಂಬಂಧಿಸಿದಂತೆ ಕೆಪಿಸಿಸಿ ವತಿಯಿಂದ ಶೀಘ್ರದಲ್ಲೇಅಬjರ್ವರ್‌ ಆಗಮಿಸಲಿದ್ದಾರೆ. ಬೆಂಗಳೂರಿನ ಕೆಪಿಸಿಸಿಕಚೇರಿಯಲ್ಲಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್‌ ನೇತೃತ್ವದಲ್ಲಿ ಶನಿವಾರ ನಡೆದ ಸಭೆಯಲ್ಲಿ ಈನಿರ್ಣಯ ಕೈಗೊಳ್ಳಲಾಗಿದ್ದು, ಅಬjರ್ವರ್‌ಗಳೇಸದಸ್ಯರು, ಮುಖಂಡರರು, ಪಕ್ಷದ ಜನಪ್ರತಿನಿಧಿಗಳ ಅಭಿಪ್ರಾಯ ಸಂಗ್ರಹಿಸಿ ಸೂಕ್ತ ಅಭ್ಯರ್ಥಿಗಳನ್ನುಆಯ್ಕೆ ಮಾಡಲಿದ್ದಾರೆ.

ಇಲ್ಲಿನ ಬಳ್ಳಾರಿ ಮಹಾನಗರ ಪಾಲಿಕೆಗೆಮತದಾನ-ಮತ ಎಣಿಕೆ ನಡೆದು ಈಗಾಗಲೇ ಐದುತಿಂಗಳು ಕಳೆದಿವೆ. ಕೋವಿಡ್‌ ಸೋಂಕು ಸೇರಿ ಹಲವುಕಾರಣಗಳಿಂದ ಮೇಯರ್‌-ಉಪಮೇಯರ್‌ಆಯ್ಕೆ ಚುನಾವಣೆಯನ್ನು ಮುಂದೂಡಿದ್ದ ರಾಜ್ಯಸರ್ಕಾರ, ಈಚೆಗೆ ಬೆಳಗಾವಿ, ಹುಬ್ಬಳ್ಳಿ-ಧಾರವಾಡ,ಕಲುºರ್ಗಿ ಮಹಾನಗರ ಪಾಲಿಕೆಗಳಿಗೂ ಚುನಾವಣೆನಡೆದ ಹಿನ್ನೆಲೆಯಲ್ಲಿ ಎಲ್ಲ ಪಾಲಿಕೆಗಳಿಗೂ ಮೇಯರ್‌-ಉಪಮೇಯರ್‌ ಆಯ್ಕೆ ಚುನಾವಣೆ ನಡೆಸಲು ಈಚೆಗೆ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಿದೆ.

ಇದರ ಬೆನ್ನಲ್ಲೇ ಪಾಲಿಕೆ ಚುನಾವಣೆಯಲ್ಲಿಬಹುಮತ (21 ಸದಸ್ಯ) ಸಾಧಿಸಿರುವ ಕಾಂಗ್ರೆಸ್‌ಪಕ್ಷದಲ್ಲಿ ರಾಜಕೀಯ ಚಟುವಟಿಕೆ ಬಿರುಸುಪಡೆದುಕೊಂಡಿವೆ. ಸಾಮಾನ್ಯಕ್ಕೆ ಮೇಯರ್‌,ಹಿಂದುಳಿದ ವರ್ಗ ಅ ಮಹಿಳೆಗೆ ಉಪಮೇಯರ್‌ಸ್ಥಾನ ಮೀಸಲಾಗಿದ್ದು, ಹಲವು ಆಕಾಂಕ್ಷಿಗಳ ನಡುವೆ ಪೈಪೋಟಿ ಏರ್ಪಟ್ಟಿದೆ. ಮಧ್ಯ ಪ್ರವೇಶಿಸಿರುವ ಕೆಪಿಸಿಸಿ ವೀಕ್ಷಕರನ್ನು ನಿಯೋಜಿಸಿ ಸೂಕ್ತ ಅಭ್ಯರ್ಥಿಗಳನ್ನುಆಯ್ಕೆ ಮಾಡಲು ಮುಂದಾಗಿದ್ದು, ಚುನಾವಣೆ ಘೋಷಣೆಯಾಗುವುದೊಂದೆ ಬಾಕಿಯಿದೆ.
ಕೆಪಿಸಿಸಿ ಕಚೇರಿಯಲ್ಲಿ ಸಭೆ: ಬಳ್ಳಾರಿ ಮಹಾನಗರಪಾಲಿಕೆಗೆ ಸಂಬಂಧಿಸಿದಂತೆ ಬೆಂಗಳೂರಿನ ಕೆಪಿಸಿಸಿಕಚೇರಿಯಲ್ಲಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್‌ನೇತೃತ್ವದಲ್ಲಿ ಶನಿವಾರ ಸಭೆ ನಡೆದಿದ್ದು, ಸಭೆಯಲ್ಲಿಕಾರ್ಯಧ್ಯಕ್ಷರಾದ ಈಶ್ವರಖಂಡ್ರೆ, ಸಲೀಂಅಹಮ್ಮದ್‌, ವಿಧಾನ ಪರಿಷತ್‌ ಸದಸ್ಯರಾದ ಕೆ.ಸಿ.ಕೊಂಡಯ್ಯ, ಅಲ್ಲಂ ವೀರಭದ್ರಪ್ಪ, ರಾಜ್ಯಸಭೆ ಸದಸ್ಯಡಾ| ಸೈಯದ್‌ ನಾಸೀರ್‌ ಹುಸೇನ್‌, ಗ್ರಾಮೀಣಶಾಸಕ ಬಿ. ನಾಗೇಂದ್ರ, ಮಾಜಿ ಸಂಸದ ಉಗ್ರಪ್ಪ,ನಗರ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಜಿ.ಎಸ್‌. ಮಹಮ್ಮದ್‌ರಫೀಕ್‌ ಸೇರಿ ಹಾಲಿ ಸದಸ್ಯರು, ಪರಾಜಿತಅಭ್ಯರ್ಥಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಸಭೆಯಲ್ಲಿ ಮೇಯರ್‌-ಉಪಮೇಯರ್‌ ಆಯ್ಕೆಗೆಚುನಾವಣೆ ಘೋಷಣೆಯಾಗಿಲ್ಲ.  ದಿನಾಂಕ ನಿಗದಿಯಾಗಿಲ್ಲ. ಈ ನಡುವೆ ಆಕಾಂಕ್ಷಿಗಳಲ್ಲಿಪೈಪೋಟಿ ಏರ್ಪಟ್ಟು ಗೊಂದಲಕ್ಕೀಡಾಗುವುದುಬೇಡ. ಚುನಾವಣೆ ಘೋಷಣೆಯಾದಾಕ್ಷಣ ಕೆಪಿಸಿಸಿವತಿಯಿಂದಲೇ ವೀಕ್ಷಕರನ್ನು ನೇಮಿಸಲಾಗುವುದು.ಅವರು ಬಳ್ಳಾರಿಗೆ ಬಂದು ಹಾಲಿ ಸದಸ್ಯರು,ವಿಧಾನ ಪರಿಷತ್‌ ಸದಸ್ಯರು, ಶಾಸಕರು, ಪರಾಜಿತಅಭ್ಯರ್ಥಿಗಳು, ಹಿರಿಯ ಮುಖಂಡರು ಸೇರಿ ಪಕ್ಷದಎಲ್ಲ ಕಾರ್ಯಕರ್ತರನ್ನು ಸಂಪರ್ಕಿಸಿ ಅಭಿಪ್ರಾಯಸಂಗ್ರಹಿಸಲಿದ್ದಾರೆ. ಬಳಿಕ ವೀಕ್ಷಕರು ನೀಡುವ ವರದಿಆಧರಿಸಿ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ,ಚುನಾವಣೆಯಂದು ಹೆಸರುಗಳನ್ನು ಬಹಿರಂಗಪಡಿಸಲಿದ್ದು, ಸೂಚಿಸಿದ ಅಭ್ಯರ್ಥಿಗಳು ನಾಮಪತ್ರಸಲ್ಲಿಸಲಿದ್ದಾರೆ ಎಂಬುದು ಸೇರಿ ಇನ್ನಿತರೆ ವಿಷಯಗಳಕುರಿತು ಸಭೆಯಲ್ಲಿ ಚರ್ಚೆಯಾಗಿವೆ ಎಂದು ಬಲ್ಲಮೂಲಗಳಿಂದ ತಿಳಿದು ಬಂದಿದೆ.

ಮಹಾನಗರ ಪಾಲಿಕೆ ಐದು ವರ್ಷದ ಅವಧಿಯದ್ದಾಗಿದೆ. ಈ ಅವಧಿಯಲ್ಲಿ ಐದು ಮೇಯರ್‌,ಐದು ಉಪಮೇಯರ್‌ ಸೇರಿ 10 ಜನರಿಗೆ ಅವಕಾಶದೊರೆಯಲಿದೆ. ಪ್ರತಿವರ್ಷ ನಾಲ್ಕು ಸ್ಥಾಯಿಸಮಿತಿಗಳಿಗೆ ನಾಲ್ವರಂತೆ ಐದು ವರ್ಷಗಳಲ್ಲಿ 20ಸದಸ್ಯರಿಗೆ ಸ್ಥಾಯಿ ಸಮಿತಿ ಅವಕಾಶ ದೊರೆಯಲಿದೆ.ಎಲ್ಲರೂ ಆಕಾಂಕ್ಷಿಗಳಾಗುವುದು ಸಾಮಾನ್ಯ. ಹಾಗಂತಎಲ್ಲರಿಗೂ ಅವಕಾಶ ನೀಡಲಾಗದು. ಬಿಜೆಪಿಯವರುಹಬ್ಬಿಸುವ ಗಾಳಿ ಸುದ್ದಿಗಳಿಗೆ ಕಿವಿಗೊಡದೆ, ಅವಕಾಶಸಿಕ್ಕಿಲ್ಲ ಎಂದು ಅಸಮಾಧಾನಕ್ಕೊಳಗಾಗದೆ ಎಲ್ಲರೂ ಒಗ್ಗಟ್ಟಾಗಿರಬೇಕು. ಮುಂಬರುವ ವಿಧಾನಸಭೆ ಚುನಾವಣೆಗೆ ಇನ್ನು 18 ತಿಂಗಳು ಮಾತ್ರ ಉಳಿದಿದ್ದು,ಈ ನಡುವೆ ಯಾವುದೇ ಗೊಂದಲಕ್ಕೆ ಒಳಗಾಗಬಾರದುಎಂದು ಡಿಕೆಶಿ ಸದಸ್ಯರಿಗೆ ಕಿವಿಮಾತು ಹೇಳಿದ್ದಾರೆ ಎನ್ನಲಾಗಿದೆ.

ವೆಂಕೋಬಿ ಸಂಗನಕಲ್ಲು

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

bellary

Bellary: ತಡರಾತ್ರಿ ಸರಣಿ ಕಳ್ಳತನ; ಎಂಟು ಮನೆಗಳಿಗೆ ನುಗ್ಗಿದ ಕಳ್ಳರು

ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

Bellary; ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.