ಸಾಂಕ್ರಾಮಿಕ ರೋಗ ಹರಡದಂತೆ ಮುನ್ನೆಚ್ಚರಿಕೆ ವಹಿಸಿ


Team Udayavani, Aug 30, 2017, 4:04 PM IST

30-BLR-1.jpg

ಮರಿಯಮ್ಮನಹಳ್ಳಿ: ಶಂಕಿತ ಡೆಂಘೀ ಸೇರಿದಂತೆ ವಿವಿಧ ಜ್ವರಗಳಿಂದ 47ಕ್ಕೂ ಹೆಚ್ಚು ಜನ ಬಳಲುತ್ತಿರುವ ಡಣಾಪುರ ಗ್ರಾಮಕ್ಕೆ ತಹಶೀಲ್ದಾರ್‌ ಎಚ್‌.ವಿಶ್ವನಾಥ್‌, ತಾಪಂ ಇಒ ವೆಂಕೋಬಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಗ್ರಾಮದಲ್ಲಿ ಸಾಂಕ್ರಾಮಿಕ ರೋಗಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆರೋಗ್ಯ ತಪಾಸಣೆ, ನೈರ್ಮಲ್ಯ, ಕುಡಿವ ನೀರಿನ ತೊಟ್ಟಿಗಳನ್ನು ಪರಿಶೀಲನೆ ನಡೆಸಿದರು. ತೀವ್ರ ಜ್ವರದಿಂದ ಬಳಲುತ್ತಿದ್ದ ನಾಲ್ವರನ್ನು ಹೆಚ್ಚಿನ ಚಿಕಿತ್ಸೆಗೆ ಹೊಸಪೇಟೆ ನೂರು ಹಾಸಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮದಲ್ಲಿ ಒಟ್ಟು 47ಕ್ಕೂ ಹೆಚ್ಚಿನ ಜನರಿಗೆ ತೀವ್ರ ಜ್ವರ ಕಾಣಿಸಿಕೊಂಡಿದೆ. ಗ್ರಾಮದಲ್ಲಿ ಹಲವು ದಿನಗಳಿಂದ ನೂರಕ್ಕೂ ಹೆಚ್ಚು ಜನ ಜ್ವರದಿಂದ ಬಳಲುತ್ತಿದ್ದಾರೆ. ಭಾನುವಾರ ಶಂಕಿತ ಡೆಂಘೀ ಜ್ವರದಿಂದ ಮೂರೂವರೆ ವರ್ಷದ ಬಾಲಕ ಮೃತಪಟ್ಟಿದ್ದ. ಗ್ರಾಮದಲ್ಲಿ ಜ್ವರದಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದ ವೈದ್ಯರ ತಂಡ ಗ್ರಾಮದಲ್ಲಿ ಬೀಡು ಬಿಟ್ಟಿದೆ. 225 ಜನರಿಗೆ ತಪಾಸಣೆ ಮಾಡಿದ್ದು, ಇವರಲ್ಲಿ 47 ಜನರಿಗೆ ಜ್ವರಬಾಧೆ ಇರುವುದು ಕಂಡು ಬಂದಿದೆ. ಅವರ ರಕ್ತದ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ.

ಆರೋಗ್ಯ ಇಲಾಖೆ ನಿರ್ಲಕ್ಷೆ: ಶಂಕಿತ ಡೆಂಘೀ, ಮಲೇರಿಯಾ, ವೈರಲ್‌ ಫಿವರ್‌ ಸೇರಿದಂತೆ ಹಲವು ಜ್ವರದಿಂದ ಗ್ರಾಮದ 100ಕ್ಕೂ ಹೆಚ್ಚು ಜನರು ಹಾಸಿಗೆ ಹಿಡಿದಿದ್ದಾರೆ. ಒಂದು ತಿಂಗಳಿಂದ ಆರೋಗ್ಯ ಇಲಾಖೆ ಹಾಗೂ ಗ್ರಾಪಂ ಆಡಳಿತಕ್ಕೆ ಮನವಿ ಮಾಡಿದರೂ, ಗ್ರಾಮದಲ್ಲಿನ ಸಮಸ್ಯೆಗಳ ಬಗ್ಗೆ ಕಾಳಜಿ ತೋರಿಸಲಿಲ್ಲ. ಅಲ್ಲದೆ ಕುಡಿವ ನೀರಿನ ತೊಟ್ಟಿಗಳು ಅಸ್ವಚ್ಛತೆಯಿಂದ ಕೂಡಿರುವ ಕಾರಣ ಸೊಳ್ಳೆಗಳ ಉತ್ಪತ್ತಿ ತಾಣಗಳಾಗಿ ಮಾರ್ಪಟ್ಟಿದೆ. ಚರಂಡಿಗಳಿಗೆ ಬ್ಲೀಚಿಂಗ್‌ ಪೌಡರ್‌ ಸಿಂಪಡಿಸಿಲ್ಲ. ಫಾಗಿಂಗ್‌ ಮಾಡಿಲ್ಲ ಎಂದು ಸಾರ್ವಜನಿಕರು ತಹಶೀಲ್ದಾರ್‌ ಎಚ್‌.ವಿಶ್ವನಾಥ್‌ ಅವರ ಮುಂದೆ ಸಮಸ್ಯೆಗಳ ಸುರಿಮಳೆ ಹರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಡಿಎಚ್‌ಒ ಡಾ| ರಮೇಶ್‌ ಬಾಬು, ಗ್ರಾಮದ ಹಲವರಿಗೆ ಜ್ವರದ ಸೋಂಕು ತಗುಲಿದ್ದು,
ತಾತ್ಕಾಲಿಕವಾಗಿ ತಪಾಸಣೆ ಕೇಂದ್ರ ತೆರೆಯಲಾಗಿದೆ. ಗ್ರಾಮದ ಪ್ರತಿಯೊಬ್ಬರನ್ನೂ ತಪಾಸಣೆ ಮಾಡಲಾಗುತ್ತಿದೆ. ಈಗಾಗಲೇ 47 ಜನರಲ್ಲಿ ಜ್ವರಬಾಧೆ ಇರುವುದು ಕಂಡು ಬಂದಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಪ್ರತಿ ಮನೆಯಲ್ಲೂ ಲಾರ್ವಾ ಸರ್ವೆ ಹಾಗೂ ಕುಡಿವ ನೀರಿನ ಮಾದರಿ, ಕೆಲವರ ರಕ್ತದ ಮಾದರಿ ಪಡೆದು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಮಾಹಿತಿ ನೀಡಿದರು. 

ದಿಢೀರ್‌ ಪ್ರತಿಭಟನೆ: ಶಂಕಿತ ಡೆಂಘೀ ಜ್ವರದಿಂದ ಭಾನುವಾರ ಮೂರೂವರೆ ವರ್ಷದ ಬಾಲಕ ಮೃತಪಟ್ಟ ಹಿನ್ನೆಲೆಯಲ್ಲಿ ಗ್ರಾಮಸ್ಥರು ಗ್ರಾಪಂ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ಜಿಲಾ ಆರೋಗ್ಯಾಧಿಕಾರಿ ಡಾ| ರಮೇಶ್‌ ಬಾಬು, ತಹಶೀಲ್ದಾರ್‌ ಎಚ್‌.ವಿಶ್ವನಾಥ್‌, ತಾಪಂ ಇಒ ಟಿ.ವೆಂಕೋಬಪ್ಪ ಅವರಿಗೆ ಮನವಿ ಸಲ್ಲಿಸಿದರು. ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ| ಓಂಪ್ರಕಾಶ್‌ ಕಟ್ಟಿಮನಿ, ತಾಲೂಕು ವೈದ್ಯಾಧಿಕಾರಿ ಡಾ| ಸತೀಶ್‌ಚಂದ್ರ, ಡಾ| ನಾಗೇಂದ್ರಕುಮಾರ್‌, ಡಾ| ವಿನೋದ್‌, ಪ್ರಯೋಗಾಲಯ ತಜ್ಞರಾದ ಶ್ರೀಧರಮೂರ್ತಿ, ಶ್ಯಾಮ್‌ ಸಿಂಘ ಧರ್ಮನಗೌಡ, ಎಂ.ಪಿ. ದೊಡ್ಮನಿ, ಪ್ರಶಾಂತ್‌ ಕುಮಾರ್‌ ಹಾಜರಿದ್ದರು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.