ಕೋವಿಡ್ ಸೋಂಕಿತ ಗರ್ಭಿಣಿ ಮಹಿಳೆಯರಿಗೆ ಕೋವಿಡ್ ಆಸ್ಪತ್ರೆಯಲ್ಲೇ ಹೆರಿಗೆ


Team Udayavani, Jun 25, 2020, 4:04 PM IST

ಕೋವಿಡ್ ಸೋಂಕಿತ ಗರ್ಭಿಣಿ ಮಹಿಳೆಯರಿಗೆ ಕೋವಿಡ್ ಆಸ್ಪತ್ರೆಯಲ್ಲೇ ಹೆರಿಗೆ

ಬಳ್ಳಾರಿ: ನಗರದ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಸೋಂಕಿತ ಇಬ್ಬರು ಗರ್ಭಿಣಿಯರಿಗೆ ಹೆರಿಗೆಯಾಗಿದ್ದು, ತಾಯಿ ಮತ್ತು ಮಕ್ಕಳು ಆರೋಗ್ಯವಾಗಿದ್ದಾರೆ. ಆಸ್ಪತ್ರೆಯಲ್ಲಿ ಇನ್ನೂ ಎಂಟು ಜನ ಗರ್ಭಿಣಿ ಸೊಂಕಿತ ಮಹಿಳೆಯರಿದ್ದು, ಅವರ ಮೇಲೂ ವಿಶೇಷ ನಿಗಾವಹಿಸಲಾಗಿದೆ.

ಬಳ್ಳಾರಿ ನೆಹರು ಕಾಲೋನಿಯ 29 ವಯಸ್ಸಿನ ಪಿ-6416 ಮಹಿಳೆಗೆ ಗುರುವಾರ ಬೆಳಗ್ಗೆ 5ಕ್ಕೆ ನುರಿತ ವೈದ್ಯರ ತಂಡ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಿದ್ದು, ಮಹಿಳೆಯ ಆರೋಗ್ಯವಾಗಿದೆ. ಗಂಡು ಮಗು ಹುಟ್ಟಿದ್ದು 2.8ಕೆಜಿ ತೂಕವಿದ್ದು ಆರೋಗ್ಯವಾಗಿದೆ.

ಇವರ ಪತಿ ಎರಡು ದಿನಗಳ ಹಿಂದೆಯೇ ಕೋವಿಡ್ ನಿಂದ ಗುಣಮುಖರಾಗಿ ಮನೆಗೆ ತೆರಳಿದ್ದರು. ಈ ಮಹಿಳೆಯಲ್ಲಿ ಕೋವಿಡ್ ಪಾಸಿಟಿವ್ ಇದ್ದರೂ ಸಹ ಯಾವುದೇ ರೀತಿಯ ಸೋಂಕಿನ ಲಕ್ಷಣಗಳು ಇಲ್ಲ. ಈ ಮಹಿಳೆಗೆ ಇದು ಮೂರನೇ ಮಗು ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ ಅವರು ತಿಳಿಸಿದ್ದಾರೆ.

ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಬುಧವಾರ ರಾತ್ರಿ ಕೋವಿಡ್ ಪಾಸಿಟಿವ್ ಆಗಿ ಆಸ್ಪತ್ರೆಯಲ್ಲಿದ್ದ ರಾಯದುರ್ಗದ 28 ವಯಸ್ಸಿನ ಪಿ-7094 ಗರ್ಭಿಣಿ ಮಹಿಳೆಗೆ ಸಾಮಾನ್ಯ ಹೆರಿಯಾಗಿದ್ದು, ತಾಯಿ, ಮಗು ಆರೋಗ್ಯವಾಗಿದ್ದಾರೆ. ಗಂಡು ಮಗು ಹುಟ್ಟಿದ್ದು, 3.2ಕೆಜಿ ತೂಕವಿದೆ. ಈ ಮಹಿಳೆಯಲ್ಲಿ ಕೋವಿಡ್-19 ಪಾಸಿಟಿವ್ ಇದ್ದರೂ ಸಹ ಯಾವುದೇ ರೀತಿಯ ಸೋಂಕಿನ ಲಕ್ಷಣಗಳು ಇಲ್ಲ. ಈ ಮಹಿಳೆಗೂ ಸಹ ಇದು ಮೂರನೇ ಮಗು ಎಂದು ವೈದ್ಯರು ತಿಳಸಿದ್ದಾರೆ.

ಇವರ ಪತಿಯಿಂದ ಈ ಮಹಿಳೆಗೆ ಸೋಂಕು ಹರಡಿದ ಹಿನ್ನೆಲೆಯಿದ್ದು, ಅವರು ಸಹ ಕೆಲದಿನಗಳ ಹಿಂದೆ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ಮಕ್ಕಳ ಆರೋಗ್ಯ ನೋಡಿಕೊಂಡು ಸ್ವ್ಯಾಬ್ ಟೆಸ್ಟ್ ಮಾಡಿಸುವುದಕ್ಕೆ ಸಂಬಂಧಿಸಿದಂತೆ ಸಮಿತಿ ನಿರ್ಣಯದ ಅನುಸಾರ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ ಅವರು ತಿಳಿಸಿದ್ದಾರೆ.

ಆಸ್ಪತ್ರೆಯಲ್ಲಿ ಇನ್ನೂ ಎಂಟು ಗರ್ಭಿಣಿ ಸೋಂಕಿತ ಮಹಿಳೆಯರಿದ್ದು,ಅವರ ಮೇಲೂ ವಿಶೇಷ ನಿಗಾವಹಿಸಲಾಗಿದೆ.

ನುರಿತ ತಜ್ಞ ವೈದ್ಯರಾದ ಡಾ.ಸುಯಗ್ನ ಜೋಶಿ, ಡಾ.ವಿಜಯಲಕ್ಷ್ಮೀ, ಡಾ.ಸರಸ್ವತಿ, ಡಾ.ರಾಜೇಶ್ವರಿ, ಡಾ.ಮಲ್ಲಣ್ಣ, ಡಾ.ಸತೀಶ್, ಡಾ.ಭಾಸ್ಕರ್, ಡಾ.ನಿತೀಶ್, ಡಾ.ವೀರಶಂಕರ್, ಡಾ.ಸುನೀಲ್, ಡಾ.ಜಯಲಕ್ಷ್ಮಿ , ಡಾ.ಸಂಪತ್‌ ಹಾಗೂ ಒಟಿ ವಿಭಾಗದ ಸಿಬ್ಬಂದಿಗಳು ಈ ಹೆರಿಗೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಟಾಪ್ ನ್ಯೂಸ್

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.