ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಕಲ ಸಿದ್ದತೆ: ಡಾ| ಅಕ್ಕಿ
Team Udayavani, Mar 27, 2022, 2:30 PM IST
ಸಂಡೂರು: ಕೋವಿಡ್ ನಂತರ ಮೊದಲ ಬಾರಿ ವಿದ್ಯಾರ್ಥಿಗಳು ಉತ್ಸಾಹದಿಂದ ಪರೀಕ್ಷೆಯನ್ನು ಸವಾಲಾಗಿ ತೆಗೆದುಕೊಂಡು ಪರೀಕ್ಷೆಗಳನ್ನು ಬರೆಯಲು ಸಜ್ಜಾಗಿದ್ದಾರೆ.
ವಿದ್ಯಾರ್ಥಿಗಳ ಮಾನಸಿಕ ಸ್ಥಿತಿ ಗಮನದಲ್ಲಿಟ್ಟುಕೊಂಡು ಮಾ. 28ರಿಂದ ನಡೆಯುವ ಪರೀಕ್ಷೆಗೆ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಡಾ| ಐ.ಆರ್. ಅಕ್ಕಿ ತಿಳಿಸಿದರು.
ಅವರು ಕಚೇರಿಯಲ್ಲಿ ವಿಶೇಷ ಸಭೆ ನಡೆಸಿ ಮಾತನಾಡಿ, 28ರಂದು ಆರಂಭವಾಗಲಿರುವ ಪರೀಕ್ಷೆ ವೇಳೆ ಹಿಜಾಬ್ಗ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ಆದೇಶಗಳನ್ನು ಜಾರಿಗೊಳಿಸಲು ಸರ್ಕಾರ ಮುಂದಾಗಿದ್ದು, ಹೈಕೋರ್ಟ್ ಆದೇಶವನ್ನು ಸರ್ವರು ಪಾಲಿಸಬೇಕಾದುದು ನಮ್ಮೆಲ್ಲರ ಕರ್ತವ್ಯವಾಗಿದೆ. ಅಕ್ರಮ ತಡೆಗಟ್ಟಲು ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಟಿವಿ ಕಾಮೆರಾ ಅಳವಡಿಸಲಾಗಿದೆ. ಸಿಸಿಟಿವಿ ದೃಶ್ಯಾವಳಿಗಳನ್ನು ಜಿಲ್ಲಾಮಟ್ಟದ ಸಮಿತಿಗಳಿಗೆ ಪ್ರತಿದಿನ ಸಲ್ಲಿಸಬೇಕಾಗಿದೆ. ವಿದ್ಯಾರ್ಥಿಗಳು ಅನಗತ್ಯ ಗೊಂದಲಗಳನ್ನು ಸೃಷ್ಟಿಸದೇ ಪರೀಕ್ಷೆ ಬರೆಯಲು ಮನವಿ ಮಾಡಿದರು.
ತಾಲೂಕಿನಾದ್ಯಂತ ಒಟ್ಟು 57 ಪ್ರೌಢಶಾಲೆಗಳಿದ್ದು, 2003 ಬಾಲಕರು, 1939 ಬಾಲಕಿಯರು ಒಟ್ಟು 3942 ವಿದ್ಯಾರ್ಥಿಗಳು 8 ಕೇಂದ್ರಗಳಲ್ಲಿ ಪರೀಕ್ಷೆಗಾಗಿ ನೋಂದಾಯಿಸಿಕೊಂಡಿದ್ದಾರೆ. ಮುಖ್ಯ ಅಧಿಧೀಕ್ಷಕರು 8, ಕೊಠಡಿ ಮೇಲ್ವಿಚಾರಕರು 299, ಸ್ಥಾನಿಕ ಜಾಗೃತ ದಳದವರು 8, 16ಜನ ಪೊಲೀಸರನ್ನು ನಿಯೋಜಿಸಲಾಗಿದೆ.
ವಿಶೇಷ ಸೋಂಕಿತ ಲಕ್ಷಣಗಳಿರುವ ಮಕ್ಕಳಿಗಾಗಿ 8 ಕೊಠಡಿಗಳು, 20 ಪ್ರೌಢಶಾಲೆ, 7 ಸಮಾಜ ಕಲ್ಯಾಣ ಇಲಾಖೆ ಶಾಲೆ, 10 ಅನುದಾನಿತ ಪ್ರೌಢಶಾಲೆ, 20 ಅನುದಾನ ರಹಿತ ಪ್ರೌಢಶಾಲೆಗಳಿವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ತಾಲೂಕು ದೈಹಿಕ ಪರಿವೀಕ್ಷಕ ಶಿಕ್ಷಕ ಎಸ್.ಡಿ. ಸಂತಿ, ಇಸಿಒಗಳಾದ ಬಸವರಾಜ, ಪಾಲಾಕ್ಷಪ್ಪನವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ