ಜಾಗ ಅತಿಕ್ರಮಣ ಖಂಡಿಸಿ ಪ್ರತಿಭಟನೆ


Team Udayavani, Nov 26, 2019, 11:43 AM IST

ballary-tdy-1

ಹರಪನಹಳ್ಳಿ: ತಾಲೂಕಿನ ಕನಕನಬಸಾಪುರ ಗ್ರಾಮದಲ್ಲಿ ಶ್ರೀಉಡಸಲಾಂಬಿಕ ದೇವಸ್ಥಾನಕ್ಕೆ ಸೇರಿದ ಜಾಗವನ್ನು ಅತಿಕ್ರಮಣ ಮಾಡಿಕೊಂಡಿದ್ದು ಅದಕ್ಕೆ ಪಂಚಾಯ್ತಿಯಲ್ಲಿ ಇ-ಸ್ವತ್ತಿಗೆ ಸೇರ್ಪಡೆ ಮಾಡಿರುವುದನ್ನು ವಿರೋಧಿ ಸಿ ಗ್ರಾಮಸ್ಥರು ಪಟ್ಟಣದ ತಾಲೂಕು ಪಂಚಾಯ್ತಿ ಆವರಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ ತಾಪಂ ಇಒ ಅವರಿಗೆ ಮನವಿ ಸಲ್ಲಿಸಿದರು.

ನಿಚ್ಚವ್ವನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಒಳಪಡುವ ಕನಕನಬಸಾಪುರ ಗ್ರಾಮದಲ್ಲಿ ಶ್ರೀ ಉಡಸಲಾಂಬಿಕ ದೇವಸ್ಥಾನಕ್ಕೆ ಸೇರಿದ ಜಾಗ ಹಾಗೂ ರಸ್ತೆ ಜಾಗವನ್ನು ಕೆ. ಹಾಲಮ್ಮ ಗಂಡ ಕೆ. ವೀರಪ್ಪ ಎಂಬುವವರು ಆಶ್ರಯ ಯೋಜನೆಯ ಮನೆ ನಿರ್ಮಿಸಲು ಅಕ್ರಮಿಸಿಕೊಂಡು ಇ ಸ್ವತ್ತಿನಲ್ಲಿ ಸೇರ್ಪಡೆ ಮಾಡಿಕೊಂಡಿರುತ್ತಾರೆ. ಆದರೆ ಸದರಿ ಜಾಗ ಸಾರ್ವಜನಿಕರ ಆಸ್ತಿಯಾಗಿದ್ದು, 2012-13ನೇ ಸಾಲಿನಲ್ಲಿ ತಕರಾರು ನೀಡಿದಾಗ ಅಂದಿನ ಗ್ರಾಪಂ ಅಧ್ಯಕ್ಷರು, ಪಿಡಿಒ ಸಮ್ಮುಖದಲ್ಲಿ ಸಭೆ ನಡೆದು ಸಾರ್ವಜನಿಕ ರಸ್ತೆಯ 10 ಅಡಿ ಜಾಗವನ್ನು ಹೊರತುಪಡಿಸಿ ಮನೆ ಕಟ್ಟಿಕೊಳ್ಳುವಂತೆ ತೀರ್ಮಾನಿಸಲಾಗಿತ್ತು. ಗ್ರಾಮ ಸಭೆಯಲ್ಲಿ ಈ ಕುರಿತು ಠರಾವು ಮಾಡಲಾಗಿತ್ತು. ಠರಾವು ಉಲ್ಲಂಘಿಸಿ ಸದರಿ ಜಾಗದಲ್ಲಿ ಮನೆ ನಿರ್ಮಿಸುತ್ತಿದ್ದಾರೆ ಎಂದು ದೂರಿದರು.

ಸದರಿ ರಸ್ತೆಯಲ್ಲಿ ಗ್ರಾಮದ ರೈತಾಪಿ ಜನರು ಎತ್ತಿನ ಬಂಡಿಗಳು, ಟ್ರ್ಯಾಕ್ಟರ್‌, ಬೇಸಾಯ ಪರಿಕರಗಳು ತೆಗೆದುಕೊಂಡು ಹೋಗಲು ಅನುಕೂಲವಾಗಿದೆ. ಆದರೆ ಇದೀಗ ಈ ಜಾಗದಲ್ಲಿ ಮನೆ ನಿರ್ಮಾಣ ಮಾಡುತ್ತಿರುವುದರಿಂದ ಸಾರ್ವಜನಿಕರಿಗೆ ಓಡಾಡಲು ತುಂಬಾ ಅನಾಕೂಲವಾಗುತ್ತಿದೆ. ಗ್ರಾಪಂ ಪಿಡಿಒ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸದೇ ಮತ್ತು ಸುತ್ತಲಿನ ಜನರ ಅಭಿಪ್ರಾಯ ಹಾಗೂ ಸಹಿ ಪಡೆಯದೇ ಹಾಲಮ್ಮ ಹೆಸರಿಗೆ ಇ-ಸ್ವತ್ತಿಗೆ ಸೇರ್ಪಡೆ ಮಾಡಿದ್ದಾರೆ. ಕಾನೂನುಬಾಹಿರವಾಗಿ ಸೇರ್ಪಡೆ ಮಾಡಿರುವ ಇ-ಸ್ವತ್ತನ್ನು ಕೂಡಲೇ ರದ್ದುಪಡಿಸಬೇಕು. ಕೂಡಲೇ ತಾವು ಸ್ಥಳಕ್ಕೆ ಆಗಮಿಸಿ ಸಮಸ್ಯೆ ಇತ್ಯರ್ಥಪಡಿಸಬೇಕು ಎಂದು ಇಒ ಅವರಿಗೆ ಒತ್ತಾಯಿಸಿದರು. ನ. 29ರಂದು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತೇನೆ.  ತಕ್ಷಣವೇ ಇ-ಸ್ವತ್ತು ರದ್ದುಪಡಿಸುವಂತೆ ಪಿಡಿಒ ಅವರಿಗೆ ಸೂಚನೆ ನೀಡಲಾಗುವುದು.

ಸ್ಥಳಕ್ಕೆ ಆಗಮಿಸಿ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಿ ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ಇಒ ಪಿ.ಎಸ್‌.ಅನಂತರಾಜು ಅವರು ಭರವಸೆ ನೀಡಿದ ನಂತರ ಪ್ರತಿಭಟನೆ ಅಂತ್ಯಗೊಂಡಿತು. ಈ ಸಂದರ್ಭದಲ್ಲಿ ತಾಪಂ ಸದಸ್ಯರಾದ ಚಿಗಟೇರಿ ಬಸವನಗೌಡ, ಕಂಚಿಕೇರಿ ಈರಣ್ಣ, ಸ್ವಾಸ್ವಿಹಳ್ಳಿ ಪ್ರಕಾಶ್‌, ಮೈದೂರು ರಾಮಪ್ಪ, ಹುಲಿಕಟ್ಟಿ ಚಂದ್ರಪ್ಪ, ಮುಖಂಡರಾದ ನೀಲಗುಂದ ವಾಗೀಶ್‌, ಕನಕನಬಸಾಪುರ ಮಂಜುನಾಥ, ಉದಯಶಂಕರ್‌, ನಿಚ್ಚವ್ವನಹಳ್ಳಿ ಆನಂದ್‌, ನೀಲಗುಂದ ಮಂಜುನಾಥ್‌, ಜೀಷಾನ್‌, ಹರಿಯಮ್ಮನಹಳ್ಳಿ ಮಹಾಂತೇಶ್‌, ಕೆ.ವಿರುಪಾಕ್ಷಪ್ಪ, ಅಂಜಿನಪ್ಪ, ದುರುಗಪ್ಪ, ರಾಜಪ್ಪ, ಮಂಜುನಾಥ್‌, ಶ್ರೀಕಾಂತ್‌ ಇತರರು ಇದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.