ಹೊಸಪೇಟೆ: ಕನ್ನಯ್ಯಲಾಲ್ ಹತ್ಯೆ ಖಂಡಿಸಿ ಪ್ರತಿಭಟನೆ ; ಲಘು ಲಾಠಿ ಪ್ರಹಾರ, ಹಲವರು ವಶಕ್ಕೆ
Team Udayavani, Jul 2, 2022, 2:07 PM IST
ಹೊಸಪೇಟೆ: ಟೈಲರ್ ಕನ್ನಯ್ಯ ಲಾಲ್ ಹತ್ಯೆ ಖಂಡಿಸಿ, ಶ್ರೀರಾಮಸೇನೆ ನೇತೃತ್ವದಲ್ಲಿ ಹಿಂದುಪರ ಸಂಘಟನೆಗಳು ಪೊಲೀಸರು ಅವಕಾಶ ನೀಡದೆ ಪ್ರತಿಭಟನೆ ನಡೆಸಿದರಿಂದ ಲಾಠಿ ಚಾರ್ಜ್ ನಡೆಸಿ ಚದುರಿಸಿದ ಘಟನೆ ಶನಿವಾರ ನಗರದಲ್ಲಿ ನಡೆಯಿತು.
ಕನ್ನಯ್ಯ ಲಾಲ್ ಹತ್ಯೆ ಖಂಡಿಸಿ, ಶ್ರೀರಾಮಸೇನೆ ನೇತೃತ್ವದಲ್ಲಿ ಹಿಂದುಪರ ಸಂಘಟನೆಗಳು ನಗರದ ಪಾದಗಟ್ಟೆ ಆಂಜನೇಯ ದೇವಸ್ಥಾನದ ಹತ್ತಿರ ಬಹಿರಂಗ ಸಭೆ ನಡೆಸಲು ಮುಂದಾಗುತ್ತಿದ್ದಂತೆ, ಪೊಲೀಸರು ಅಡ್ಡಿಪಡಿಸಿ, ಲಾಠಿ ಚಾರ್ಜ್ ನಡೆಸಿ ಗುಂಪು ಚದುರಿಸಿದರು. ಶ್ರೀರಾಮಸೇನೆ ಮುಖಂಡರಾದ ಗಂಗಾಧರ್ ಕುಲಕರ್ಣಿ, ಸಂಜೀವ ಮರಡಿ ಸೇರಿದಂತೆ 14 ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದರು. ಈ ಸಂದರ್ಭದಲ್ಲಿ ಸಂಘಟಕರು ಮತ್ತು ಪೊಲೀಸರ ನಡುವೆ ಮಾತಿನ ಚಕಮುಕಿ ನಡೆಯಿತು. ಸ್ಥಳದಲ್ಲಿ ಬಿಗುವಿನ ವಾತವರಣ ನಿರ್ಮಾಣವಾಗಿತ್ತು.
ಪೊಲೀಸರ ಕ್ರಮ ಖಂಡಿಸಿ, ಹಿರೇಹಡಗಲಿ ಹಾಲಸ್ವಾಮಿ ಮಠದ ಅಭಿನವ ಹಾಲಸ್ವಾಮಿ, ನೇತೃತ್ವದಲ್ಲಿ ನಗರದ ಗಾಂಧಿ ಚೌಕ್ನಲ್ಲಿ ಬಾಯಿಗೆ ಕೆಂಪು ವಸ್ತ್ರಧರಿಸಿ, ಕಾರ್ಯಕರ್ತರು ಮೌನ ಪ್ರತಿಭಟನೆ ನಡೆಸಿದರು. ಇಲ್ಲಿಯೂ ಕೂಡ ಪೊಲೀಸರು ಅವಕಾಶ ನೀಡದೇ ಹಾಲಸ್ವಾಮಿ ಮಠದ ಅಭಿನವ ಹಾಲಸ್ವಾಮಿ ಸೇರಿದಂತೆ ಹಲವರನ್ನು ವಶಕ್ಕೆ ಪಡೆದರು.
ನಗರದ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರತಿಭಟನಾಕಾರರನ್ನು ಬಂಧನದಲ್ಲಿ ಇಡಲಾಯಿತು. ಈ ವೇಳೆ ಪೊಲೀಸರ ಕ್ರಮವನ್ನು ಖಂಡಿಸಿ ಅಲ್ಲಿಯೂ ಪ್ರತಿಭಟನೆ ನಡೆಸಿದರು. ಸರ್ಕಾರದ ಸುತ್ತೋಲೆ ಹಿನ್ನಲೆಯಲ್ಲಿ ಪ್ರತಿಭಟನೆ ಅನುಮತಿ ಇರಲ್ಲಿಲ್ಲ.
ಈ ಹಿನ್ನೆಲೆಯಲ್ಲಿ ಹೊಸಪೇಟೆ ಬಂದ್ ಅಥಾವ ಪ್ರತಿಭಟನೆ ಪೊಲೀಸ್ ಇಲಾಖೆ ಅವಕಾಶ ನಿಡಿರಲ್ಲಿಲ್ಲ. ತಹಶೀಲ್ದಾರರಿಗೆ ಮನವಿ ನೀಡಲು ಮಾತ್ರ ಅವಕಾಶ ನೀಡಿತ್ತು. ಆದರೆ, ಪಾದಗಟ್ಟೆ ಆಂಜನೇಯ ದೇವಸ್ಥಾನದ ಹತ್ತಿರ ಸಂಘಟಕರು ವೇದಿಕೆ ನಿರ್ಮಾಣ ಮಾಡಿ ಬಹಿರಂಗ ಸಭೆಗೆ ನಡೆಸಲು ಮುಂದಾದರು. ಈ ವೇಳೆ ಲಘು ಲಾಠಿ ಪ್ರಹಾರ ನಡೆಸಿ, ಗುಂಪು ಚದುರಿಸಿ, ಹಲವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಎಸ್ಪಿ ಡಾ.ಅರುಣ್ ಕೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ