ಆರೋಗ್ಯ ಕ್ಷೇತ್ರ ಬಲಪಡಿಸಲು ಒತ್ತಾಯಿಸಿ ಪ್ರತಿಭಟನೆ
Team Udayavani, Jul 24, 2020, 12:32 PM IST
ಬಳ್ಳಾರಿ: ಸಾರ್ವಜನಿಕ ಆರೋಗ್ಯ ಕ್ಷೇತ್ರವನ್ನು ಬಲಪಡಿಸಬೇಕೆಂದು ಒತ್ತಾಯಿಸಿ ನಗರದ ತಹಸೀಲ್ದಾರ್ ಕಚೇರಿ ಎದುರು ಅಖೀಲ ಭಾರತ ಜನವಾದಿ ಮಹಿಳಾ ಸಂಘಟನೆ ವತಿಯಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು.
ದೇಶಾದ್ಯಂತ ಕೋವಿಡ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಜನಸಾಮಾನ್ಯರು, ಮಹಿಳೆಯರು ತೀವ್ರ ತೊಂದರೆಗೆ ಒಳಗಾಗಿದ್ದಾರೆ. ಕೋವಿಡ್ ಬಾಧೆಯ ಜೊತೆಗೆ ಕೊವಿಡೇತರ ಸಮಸ್ಯೆಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ಈಗ ಸರ್ಕಾರವು ಗಂಭೀರವಾದ ಕ್ರಮಗಳನ್ನು ಕೈಗೊಳ್ಳದಿದ್ದರೆ ಬಹು ಸಂಖ್ಯಾತ ಮಹಿಳೆಯರು ತೀವ್ರವಾದ ಆರೋಗ್ಯ ಸಮಸ್ಯೆಗಳಿಗೆ ತುತ್ತಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಅಖೀಲ ಭಾರತ ಜನವಾದಿ ಮಹಿಳಾ ಸಂಘಟನೆಯು ಜುಲೈ 23ರಂದು ರಾಷ್ಟ್ರೀಯ ಬೇಡಿಕೆ ದಿನವನ್ನಾಗಿ ಆಚರಿಸುತ್ತಿದೆ ಎಂದು ಸಂಘಟನೆಯ ಅಧ್ಯಕ್ಷ ಚಂದ್ರಕುಮಾರಿ ತಿಳಿಸಿದ್ದಾರೆ.
ಕೋವಿಡ್ ಚಿಕಿತ್ಸೆಗಳನ್ನು ಉಚಿತವಾಗಿ ಸಾರ್ವತ್ರಿಕವಾಗಿ ನೀಡಬೇಕು. ಕೋವಿಡೇತರ ಆರೋಗ್ಯದ ಸಮಸ್ಯೆಗಳ ಚಿಕಿತ್ಸೆಗೆ ಪರ್ಯಾಯ ವ್ಯವಸ್ಥೆ ಮಾಡಬೇಕು. ಕೋವಿಡ್ ಚಿಕಿತ್ಸೆ ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮಕೈಗೊಳ್ಳಬೇಕು. ಪ್ರದೇಶವಾರು ವೈದ್ಯಕೀಯ ಸೌಲಭ್ಯಕ್ಕಾಗಿ ಸಂಚಾರಿ ಆರೋಗ್ಯ ವ್ಯವಸ್ಥೆ ಕಲ್ಪಿಸಬೇಕು. ವೈದ್ಯಕೀಯ ಸಿಬ್ಬಂದಿಗಳು ಮತ್ತು ಮುಂಚೂಣಿಯ ಕೋವಿಡ್ ವಾರಿಯರ್ಸ್ ಗಳಿಗೆ ಸುರಕ್ಷಾ ಸೌಲಭ್ಯ ನೀಡಬೇಕು.
ಆಶಾ, ಅಂಗನವಾಡಿ ಸಿಬ್ಬಂದಿಗಳಿಗೆ ಸೂಕ್ತ ವ್ಯವಸ್ಥೆ ಮತ್ತು ವಿಶೇಷ ವೇತನ ನೀಡಬೇಕು. ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವೈದ್ಯಕೀಯ ಸಿಬ್ಬಂದಿ ನೇಮಕ ಮಾಡಬೇಕು. ಗರ್ಭಿಣಿ, ಬಾಣಂತಿಯರು ಮಕ್ಕಳ ಪಾಲನೆಗೆ ಅಗತ್ಯವಾದ ಮಾತೃಶ್ರೀ ಯೋಜನೆಯನ್ನು ಮುಂದುವರೆಸಬೇಕು. ಮಹಿಳೆಯರ ಹೆರಿಗೆ ಸಂಬಂಧಿತ ಸಮಸ್ಯೆಗಳಿಗೆ ಪ್ರತ್ಯೇಕ ಅಂಬ್ಯುಲೆನ್ಸ್ ವ್ಯವಸ್ಥೆ ಮಾಡಬೇಕು. ಸುರಕ್ಷಿತ ಸಂಚಾರಿ ಕೋವಿಡ್ ಟೆಸ್ಟ್ ವ್ಯವಸ್ಥೆ ಮಾಡಬೇಕು. ಸುರಕ್ಷಾ ಕ್ರಮಗಳನ್ನು ಅನುಸರಿಸಿ ಪೌಷ್ಟಿಕ ಆಹಾರ ಪೂರೈಕೆ ಮಾಡಬೇಕು ಎಂದವರು ಒತ್ತಾಯಿಸಿದರು. ಬಳಿಕ ತಾಲೂಕು ಆಡಳಿತಕ್ಕೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಸಂಘಟನೆಯ ಸದಸ್ಯರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು
ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು
Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು
Bellary: ತಡರಾತ್ರಿ ಸರಣಿ ಕಳ್ಳತನ; ಎಂಟು ಮನೆಗಳಿಗೆ ನುಗ್ಗಿದ ಕಳ್ಳರು
Bellary; ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು
MUST WATCH
ಹೊಸ ಸೇರ್ಪಡೆ
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ