ಮೂಲ ಸೌಕರ್ಯಕ್ಕಾಗಿ ನಗರಸಭೆ ಎದುರು ಪ್ರತಿಭಟನೆ


Team Udayavani, Aug 4, 2019, 12:39 PM IST

ballary-tdy1

ಹೊಸಪೇಟೆ: ಮೂಲಭೂತ ಸೌಲಭ್ಯಗಳಿಗಾಗಿ ಆಗ್ರಹಿಸಿ, ಏಳನೇ ವಾರ್ಡ್‌ ನಿವಾಸಿಗಳು ನಗರಸಭೆ ಎದುರು ಪ್ರತಿಭಟನೆ ನಡೆಸಿದರು.

ಹೊಸಪೇಟೆ: ಮೂಲಭೂತ ಸೌಲಭ್ಯಗಳಿಗಾಗಿ ಆಗ್ರಹಿಸಿ ಡಿವೈಎಫ್ಐ ತಾಲೂಕು ಘಟಕದ ನೇತೃತ್ವದಲ್ಲಿ ಏಳನೇ ವಾರ್ಡು ನಿವಾಸಿಗಳು ನಗರಸಭೆ ಎದುರು ಶನಿವಾರ ಪ್ರತಿಭಟನೆ ನಡೆಸಿದರು.

ಪಾಂಡುರಂಗ ಕಾಲೋನಿ, ಅನಂತಶಯನಗುಡಿ, ಎಂ.ಪಿ.ಪ್ರಕಾಶ ನಗರ, ಸಾಯಿ ಕಾಲೋನಿ, ಶ್ರೀರಾಮ ನಗರ ಪ್ರದೇಶಗಳಲ್ಲಿ ಸಮರ್ಪಕ ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಕೂಡಲೇ ಈಡೇರಿಸಬೇಕು ಎಂದು ಒತ್ತಾಯಿಸಿದರು. ನಿವೇಶನರಹಿತರಿಗೆ ನಗರಸಭೆ ಕೂಡಲೇ ನಿವೇಶನ ನೀಡಬೇಕು. ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿದ ವಿವರ ಪ್ರಕಟಣೆ ಹೊರಡಿಸಬೇಕು. ನಿವೇಶನಕ್ಕಾಗಿ ಅರ್ಜಿ ಹಾಕದೇ ಉಳಿದ ಅರ್ಜಿದಾರ ಅರ್ಜಿ ಸ್ವೀಕಾರ ಮಾಡಬೇಕು. ಎಸ್‌ಸಿ, ಎಸ್‌ಟಿ ಹಾಗೂ ಓಬಿಸಿ ಅಶ್ರಯ ಯೋಜನೆ ಫ‌ಲಾನುಭವಿಗಳಿಗೆ ಸಹಾಯಧನ ಬಿಡುಗಡೆ ಮಾಡಬೇಕು. ಪಾಂಡುರಂಗ ಕಾಲೋನಿ, ಅನಂತಶಯನಗುಡಿ, ಎಂ.ಪಿ.ಪ್ರಕಾಶ ನಗರ, ಸಾಯಿ ಕಾಲೋನಿ, ಶ್ರೀರಾಮ ನಗರ ಪ್ರದೇಶಗಳಿಗೆ ಡ್ಯಾಂ ನೀರು ಪೂರೈಕೆಗಾಗಿ ನಿರಂತರ ಕುಡಿಯುವ ನೀರು ಯೋಜನೆ ಅನುಷ್ಠಾನ ಹಾಗೂ ಕಸ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು. ನಗರದಲ್ಲಿ ನಡೆಯುತ್ತಿರುವ ಯುಜಿಡಿ ಕಾಮಗಾರಿಯಿಂದ ಅಗೆದು ಬಿಟ್ಟ ರಸ್ತೆಗಳನ್ನು ಮರು ದುರಸ್ತಿಗೊಳಿಸಲು ಕ್ರಮ ಕೈಗೊಳ್ಳಬೇಕು.

ಈ ಕುರಿತು ಗುತ್ತಿಗೆದಾರರ ವಿರುದ್ಧ ಕ್ರಮ ಜರುಗಿಸಬೇಕು. 2017-18 ನೇ ಸಾಲಿನಲ್ಲಿ ಆಶ್ರಯ ಯೋಜನೆಯಡಿಯಲ್ಲಿ ಅರ್ಜಿ ಹಾಕಿದ ಪಲಾನುಭವಿಗಳಿಗೆ ಮನೆ ನಿರ್ಮಿಸಿಕೊಳ್ಳಲು ಅನುಮತಿ ಪತ್ರ ನೀಡಬೇಕು.ಅನಂತಶಯನ ಗುಡಿ ಹಾಗೂ ನಾಗೇನಹಳ್ಳಿ ರಸ್ತೆಯಲ್ಲಿರುವ ಸಾಮೂಹಿಕ ಶೌಚಾಲಯ ದುರಸ್ತಿಗೊಳಿಸಬೇಕು. ಪಾಂಡುರಂಗ ಕಾಲೋನಿ ಮಹಿಳಾ ಶೌಚಾಲಯಕ್ಕೆ ನೀರಿನ ವ್ಯವಸ್ಥೆ ಮಾಡಬೇಕು. ಪಾರಂ-3 ಗಾಗಿ ನಾಗರಿಕರನ್ನು ಅಲೆದಾಡಿಸದೇ ನಿಗದಿತ ಸಮಯದಲ್ಲಿ ಒದಗಿಸಬೇಕು.ಹಂದಿ-ಬೀದಿ ನಾಯಿಗಳ ಹಾವಳಿ ನಿಯಂತ್ರಣ ಮಾಡಬೇಕು. ಅನಂತಶಯನ ಗುಡಿ ಬೈಪಾಸ್‌ ರಸ್ತೆ ಬೀದಿ ದೀಪಗಳನ್ನು ಸರಿಪಡಿಸಬೇಕು.ಸಾರ್ವಜನಿಕ ರುದ್ರಭೂಮಿ ಸ್ವಚ್ಛಗೊಳಿಸಬೇಕು. ಅಂಗನವಾಡಿ ಕೇಂದ್ರಗಳಿಗೆ ಶೌಚಾಲಯ ಹಾಗೂ ನೀರಿನ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು. ಡಿವೈಎಫ್ಐ ತಾಲ್ಲೂಕು ಘಟಕದ ಮುಖಂಡರಾದ ಬಿಸಾಟಿ ಮಹೇಶ್‌, ಕಲ್ಯಾಣಯ್ಯ, ಕಿನ್ನಾಳ್‌ ಹನುಮಂತಪ್ಪ, ಈ ಮಂಜುನಾಥ, ಬಂಡೆ ತಿರುಕಪ್ಪ, ಹನುಮಾನಾಯ್ಕ, ರಾಜಚಂದ್ರಶೇಖರ್‌, ಸೂರ್ಯಕಿರಣ ಹಾಗೂ ನಿಂಗಪ್ಪ ಇನ್ನಿತರರಿದ್ದರು.

ಟಾಪ್ ನ್ಯೂಸ್

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.