ಬ್ಯಾಲಾಳು ಕೆರೆ ಪ್ರದೇಶದಲ್ಲಿ ಕೆಲಸಕ್ಕೆ ಆಗ್ರಹಿಸಿ ಪ್ರತಿಭಟನೆ


Team Udayavani, Apr 13, 2018, 12:53 PM IST

bell-3.jpg

ಹಗರಿಬೊಮ್ಮನಹಳ್ಳಿ: ಕಡ್ಲಬಾಳು ಗ್ರಾ.ಪಂ.ವ್ಯಾಪ್ತಿಯ ಕೂಲಿಕಾರ್ಮಿಕರು ಬ್ಯಾಲಾಳು ಕೆರೆ ಪ್ರದೇಶದ ಹೂಳು ಎತ್ತುವ ಕಾಮಗಾರಿ ಕೆಲಸ ನೀಡಬೇಕು ಎಂದು ಒತ್ತಾಯಿಸಿ ಗುರವಾರ ಕಡ್ಲಬಾಳು ಗ್ರಾಪಂ ಮುಂಭಾಗ ಪ್ರತಿಭಟನೆ ನಡೆಸಿದರು.

ಉದ್ಯೋಗ ಖಾತ್ರಿ ಹೋರಾಟ ಸಮಿತಿ ತಾಲೂಕು ಕಾರ್ಯದರ್ಶಿ ಕೊಟಿಗಿ ಮಲ್ಲಿಕಾರ್ಜುನ ಮಾತನಾಡಿ, ಕೂಲಿ ಕಾರ್ಮಿಕರಿಗೆ ಮಗಿಮಾವಿನಹಳ್ಳಿ ಕೆರೆ ಪ್ರದೇಶ ದೂರವಾಗುವುದರಿಂದ ಹತ್ತಿರದ ಬ್ಯಾಲಾಳು ಕೆರೆ ಪ್ರದೇಶದಲ್ಲಿಯೇ ಕೆಲಸ ನೀಡಬೇಕು. 190 ಎಕರೆ ವಿಸ್ತೀರ್ಣ ಇರುವ ಬ್ಯಾಲಾಳು ಕೆರೆ ಪ್ರದೇಶದಲ್ಲಿ ಊಳು ತೆಗೆಯಲು ಸಾಕಷ್ಟು ಸ್ಥಳವಕಾಶವಿರುವಿದ್ದರೂ ಮಗಿಮಾವಿನಹಳ್ಳಿ ಕೆರೆ ಹೂಳೆತ್ತಲು ಕಳುಹಿಸುತ್ತಿರುವುದು ಕೂಲಿ ಕಾರ್ಮಿಕರಿಗೆ ವಿನಕಾರಣ ಹೊರೆ ಮಾಡಿದಂತಾಗುತ್ತಿದೆ ಎಂದು ದೂರಿದರು. ಮಗಿಮಾವಿನಹಳ್ಳಿ ಕೆರೆ ಪ್ರದೇಶದ ಮಣ್ಣು ಅತ್ಯಂತ ಗಟ್ಟಿಯಾಗಿರುವುದರಿಂದ ಬಿಸಿಲಿನಲ್ಲಿ ಹೂಳೆತ್ತುವುದು ಕೂಲಿ ಕಾರ್ಮಿಕರಿಗೆ ಅತ್ಯಂತ ತ್ರಾಸದಾಯಕವಾಗಿದೆ.

ಇದೇ ಕೆರೆಯಲ್ಲಿಯೇ ಬ್ಯಾಸಿಗಿದೇರಿ, ಬಾಚಿಗೊಂಡನಹಳ್ಳಿ ಕೂಲಿ ಕಾರ್ಮಿಕರಿಗೂ ಕೆಲಸ ನೀಡಿರುವುದರಿಂದ ಅಲ್ಲಿಯ ಕೂಲಿ ಕಾರ್ಮಿಕರು ಕೂಡ ನೋವನ್ನು ಅನುಭವಿಸುತ್ತಿದ್ದಾರೆ ಎಎಂದು ಆಕ್ರೋಶ ವ್ಯಕ್ತಪಡಿಸಿದರು.

ಈಗಾಗಲೇ ಬ್ಯಾಲಾಳು ಕೆರೆ ಪ್ರದೇಶದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯವರು ಕೆರೆಯ 5 ಎಕರೆ ಪ್ರದೇಶದಲ್ಲಿ ಉಚಿತವಾಗಿ ಜೆಸಿಬಿ ಯಂತ್ರ ಮೂಲಕ ಹೂಳೆತ್ತುತ್ತಿದ್ದಾರೆ. ಯೋಜನೆಯವರು ಯಂತ್ರದ ಮೂಲಕ ಮಾಡುತ್ತಿರುವುದರಿಂದ ಅವರಿಗೆ ಕೆರೆಯ ಗಟ್ಟಿ ಪ್ರದೇಶ ಹೂಳೆತ್ತಲು ತಾಲೂಕು ಆಡಳಿತ ಸೂಚಿಸಬೇಕು ಎಂದು ಒತ್ತಾಯಿಸಿದರು.  ಇದೇ ವೇಳೆ ತಾಲೂಕಿನ ಕ್ಯಾತಯನಮರಡಿ, ಓಬಳಪುರ, ಕಡ್ಲಬಾಳು ಗ್ರಾಮದ ಕೂಲಿಕಾರರು ಒಂದು ತಿಂಗಳಿಂದ ಎನ್‌ಎಂಆರ್‌ಗಾಗಿ (ಹಾಜರಾತಿ) ಹೋರಾಟ ಮಾಡುತ್ತಾ ಬಂದಿದ್ದ ಫಲವಾಗಿ ಕಡ್ಲಬಾಳು ಗ್ರಾಪಂನವರು ಕೂಲಿ ಕಾರ್ಮಿಕರಿಗೆ ಎನ್‌ಎಂಆರ್‌ ನೀಡಿದರು.

ಈ ಸಂದರ್ಭದಲ್ಲಿ ಕೂಲಿ ಕಾರ್ಮಿಕರಾದ ಕಡ್ಲಬಾಳು ಗ್ರಾಮದ ಟಿ. ಹನುಮಂತ, ಮಂಜುನಾಥ, ಸಣ್ಣ ದುರುಗಪ್ಪ, ಕ್ಯಾತ್ಯಾಯನಮರಡಿ ತಿಂದಪ್ಪ, ನಾಗರಾಜ ದೇವಪ್ಪ, ನಿಂಗಪ್ಪ ಇತರರು ಪಾಲ್ಗೊಂಡಿದ್ದರು.  

ಟಾಪ್ ನ್ಯೂಸ್

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.