ರೈತರಿಂದ ನೀರಾವರಿ ಇಲಾಖೆ ಕಚೇರಿ ಮುಂದೆ ಪ್ರತಿಭಟನೆ
ಸಿಂಗಟಾಲೂರು ಏತ ನೀರಾವರಿ ಯೋಜನೆಯಿಂದ ಭೂಮಿ ಕಳೆದುಕೊಂಡ ರೈತರು
Team Udayavani, Aug 20, 2019, 2:11 PM IST
ಹೂವಿನಹಡಗಲಿ: ಸಿಂಗಟಾಲೂರು ಏತ ನೀರಾವರಿ ಯೋಜನೆಯಲ್ಲಿ ಕಾಲುವೆಗೆ ಭೂಮಿ ಕಳೆದುಕೊಂಡ ರೈತರು ಪರಿಹಾರಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.
ಹೂವಿನಹಡಗಲಿ: ತಾಲೂಕಿನ ಸಿಂಗಟಾಲೂರು ಏತ ನೀರಾವರಿ ಯೋಜನೆಯಿಂದಾಗಿ ಕಾಲುವೆಗೆ ಭೂಮಿ ಕಳೆದುಕೊಂಡ ರೈತರು ಪರಿಹಾರಕ್ಕೆ ಒತ್ತಾಯಿಸಿ ನೀರಾವರಿ ಇಲಾಖೆ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಕಳೆದ 10 ವರ್ಷಗಳ ಹಿಂದೆ ಭೂಮಿ ಕಳೆದುಕೊಂಡಿದ್ದೇವೆ. ಆದರೆ ಸರ್ಕಾರದಿಂದ ಈತನಕ ಪರಿಹಾರ ದೊರಕಿಲ್ಲ. ಅಧಿಕಾರಿಗಳನ್ನು ಕೇಳಿದರೆ ಮೇಲಧಿಕಾರಿಗಳಿಗೆ ಬರೆದಿದ್ದೇವೆ ಇಂದು ಬರುತ್ತೆ, ನಾಳೆ ಬರುತ್ತೆ, ಹೀಗೆ ಹತ್ತಾರು ಕಾರಣಗಳನ್ನು ಹೇಳುತ್ತ ರೈತರನ್ನು ಯಾಮಾರಿಸುತ್ತಿದ್ದಾರೆ ಎಂದು ಅಳಲು ತೋಡಿಕೊಂಡರು.
ನಮ್ಮ ಹೊಲದ ತುಂಬೆಲ್ಲ ಓಡಾಡಿ ಕಾಲುವೆ ಮಾಡಿ ಹೋಗಿ ಹತ್ತು ವರ್ಷವಾಯಿತು. ನಿಮಗೆ ಪರಿಹಾರ ಕೊಡಬೇಕು ಎನ್ನುವ ಅಲೋಚನೆ ಸಹ ಇಲ್ಲದಾಗಿದೆಯಲ್ಲ. ನಿಮಗೆ ಒಂದು ತಿಂಗಳು ಸಂಬಳ ಇಲ್ಲದಿದ್ದರೆ ಹೇಗೆ ಒದ್ದಾಡುತ್ತಿರಿ ನೋಡಿ ನಾವು ಕಳೆದ ಹತ್ತು ವರ್ಷದಿಂದಲೂ ಇರುವ ಅಲ್ಪ ಸ್ವಲ್ಪ ಹೊಲ ಕಳೆದುಕೊಂಡು ಕುಂತೀವಿ ನಮ್ಮ ಕಷ್ಟ ನಿಮಗೆ ಅರ್ಥವಾಗುವುದಿಲ್ಲವೇ ಎಂದು ಅಧಿಕಾರಿಗಳನ್ನು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡರು. ಪರಿಹಾರ ಕೊಡೋ ತನಕ ಕಚೇರಿ ಬಿಟ್ಟು ಕದಲುವುದಿಲ್ಲೆ ಂದು ಕಚೇರಿಗೆ ಮುತ್ತಿಗೆ ಹಾಕಿದರು.
ಈ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗಿದೆ. ಯೋಜನೆಯಿಂದಾಗಿ ಕಾಲುವೆಗಾಗಿ ಭೂಸ್ವಾಧೀನಪಡಿಸಿಕೊಂಡಿರುವ ಭೂಮಿಯಲ್ಲಿ ಈಗ 602 ಎಕರೆ ಪ್ರದೇಶದಲ್ಲಿನ ರೈತರಿಗೆ ಪರಿಹಾರ ಧನ 27 ಕೋಟಿ ರೂಗಳನ್ನು ವಿತರಣೆ ಮಾಡಬೇಕಾಗಿದೆ. ಈ ವರೆಗೂ ಸಾಕಷ್ಟು ಭಾರಿ ಮೇಲಧಿಕಾರಿಗಳಿಗೆ ವಿಷಯ ತಿಳಿಸಲಾಗಿದೆ. ಮೇಲಾಗಿ ಬರವಣಿಗೆಗಳ ಮೂಲಕವಾಗಿ ಸಮಸ್ಯೆ ಮನವರಿಕೆ ಮಾಡಲಾಗಿದೆ. ಸಾಧ್ಯವಾದಷ್ಟು ಬೇಗ ಪರಿಹಾರ ವಿತರಣೆ ಮಾಡಲಾಗುತ್ತದೆ ಎಂದು ಪ್ರಭಾರಿ ಕಾರ್ಯಪಾಲಕ ಅಭಿಯಂತರ ಈಟಿ ನಾಗರಾಜ್ ತಿಳಿಸಿದರು.
ಪ್ರತಿಭಟನೆಯಲ್ಲಿ ಹೊಳಗುಂದಿ, ಮುದೇನೂರು, ಹಡಗಲಿ ಪಟ್ಟಣದ ರೈತರು ಭಾಗವಹಿಸಿದ್ದರು. ಶಿವಪ್ರಕಾಶ್ ಸ್ವಾಮಿ, ಲಕ್ಷ್ಮಣ, ಶ್ರೀಧರನಾಯ್ಕ, ಹಕ್ಕಂಡಿ ಈರಪ್ಪ, ತಳವಾರ ಈಶಣ್ಣ, ಹಳ್ಳಿ ಅನಂದ, ಮಂಜುಳಾ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ