ಟೌನ್‌ಶಿಪ್‌ನಲ್ಲಿ ಮೂಲಸೌಕರ್ಯ ಕಲ್ಪಿಸಿ


Team Udayavani, Oct 6, 2020, 4:57 PM IST

ಟೌನ್‌ಶಿಪ್‌ನಲ್ಲಿ ಮೂಲಸೌಕರ್ಯ ಕಲ್ಪಿಸಿ

ಬಳ್ಳಾರಿ: ನಗರದ ಹೊರವಲಯದ ಮುಂಡರಗಿ ಆಶ್ರಯ ಮಹಾತ್ಮಗಾಂಧಿ ಟೌನ್‌ಶಿಪ್‌ ಅಡಿ ಜಿ+2 ಮಾದರಿಯ ಮನೆಗಳ ನಿರ್ಮಾಣ ಯೋಜನೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಎಸ್‌.ಎಸ್‌ .ನಕುಲ್‌ ಅಧ್ಯಕ್ಷತೆಯಲ್ಲಿ ಸೋಮವಾರ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ಮುಂಡರಗಿ ವಸತಿ ಯೋಜನಾ ಪ್ರದೇಶದ ಸಭಾಂಗಣದಲ್ಲಿಯೇ ನಡೆದ ಸಭೆಯಲ್ಲಿ ಇದುವರೆಗೆ ಆಗಿರುವ ಪ್ರಗತಿ, ಫಲಾನುಭವಿಗಳ ವಂತಿಗೆ, ಬ್ಯಾಂಕ್‌ಗಳ ಸಹಕಾರ ಹಾಗೂ ಇನ್ನೂ ಆಗಬೇಕಾದ ಕೆಲಸ-ಕಾರ್ಯಗಳ ಕುರಿತು ಸುದೀರ್ಘ‌ ಚರ್ಚೆಗಳು ನಡೆದವು. ಮುಂಡ್ರಿಗಿ ಟೌನ್‌ಶಿಪ್‌ನಲ್ಲಿ ಈಗಾಗಲೇ 5616 ಮನೆಗಳ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ಮೊದಲನೇ ಹಂತದಲ್ಲಿ 2592 ಮನೆಗಳನ್ನು ನಿರ್ಮಿಸಲು ಮತ್ತು ಉಳಿದ ಮನೆಗಳನ್ನು ಎರಡನೇ ಹಂತದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದೆ. 2259 ಫಲಾನುಭವಿಗಳು ವಂತಿಕೆ ಪಾವತಿಸಿದ್ದಾರೆ. ಉಳಿದ 250 ಫಲಾನುಭವಿಗಳು ವಂತಿಗೆ ಪಾವತಿಸಿದ ನಂತರ ದಾಖಲೆಗಳನ್ನು ಪಡೆದು ಅಟ್ಯಾಚ್‌ಮೆಂಟ್‌ ಮಾಡಲು ಕ್ರಮವಹಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತೆ ತುಷಾರಮಣಿ ಸಭೆಗೆ ತಿಳಿಸಿದರು.

ಇದರಲ್ಲಿ 1265 ಫಲಾನುಭವಿಗಳಿಗೆ ಕೆನರಾ ಬ್ಯಾಂಕ್‌, 994 ಫಲಾನುಭವಿಗಳಿಗೆ ಕರ್ನಾಟಕ ಗ್ರಾಮೀಣ ಬ್ಯಾಂಕ್‌ ಸಾಲ-ಸೌಲಭ್ಯ ಕಲ್ಪಿಸಲಿದೆ. 1055 ಎಸ್ಸಿ/ಎಸ್ಟಿ ಫಲಾನುಭವಿಗಳು, 1204ಇತರೆ/ಅಲ್ಪಸಂಖ್ಯಾತ ಫಲಾನುಭವಿಗಳುಸೇರಿದಂತೆ ಒಟ್ಟು 2259 ಫಲಾನುಭವಿಗಳು 4.59 ಕೋಟಿ ರೂ.ಹಣ ಪಾವತಿಸಿದ್ದಾರೆ. ಎಸ್ಸಿ/ಎಸ್ಟಿ ಫಲಾನುಭವಿಗಳಿಗೆ 50 ಸಾವಿರ ಮತ್ತು ಇತರೆ/ ಅಲ್ಪಸಂಖ್ಯಾತ ಸಮುದಾಯಗಳಿಗೆ 1 ಲಕ್ಷ ರೂ. ಮುಂಗಡ ವಂತಿಕೆ ಗುರಿ ನಿಗದಿಪಡಿಸಲಾಗಿತ್ತು ಎಂದು ಅವರು ವಿವರಿಸಿದರು.

ಮೂಲಸೌಕರ್ಯ ಕಲ್ಪಿಸಲು ಸೂಚನೆ: ಮುಂಡರಗಿ ವಸತಿ ಯೋಜನೆಯ ಇದುವರೆಗಿನ ಸಂಪೂರ್ಣ ಪ್ರಗತಿಯನ್ನು ಪರಿಶೀಲಿಸಿದ ಡಿಸಿ ನಕುಲ್‌ ಅವರು ಈ ಟೌನ್‌ಶಿಪ್‌ನಲ್ಲಿ ರಸ್ತೆ,ಒಳಚರಂಡಿ, ನೀರು ಸರಬರಾಜು ಮಾಡುವನಿಟ್ಟಿನಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ರಸ್ತೆ, ಒಳಚರಂಡಿ ಹಾಗೂ ಇನ್ನಿತರೆ ಸೌಕರ್ಯಗಳು ಕಲ್ಪಿಸುವುದಕ್ಕೆ ಸಂಬಂಧಿಸಿದಂತೆ ಕೂಡಲೇ ಅಂದಾಜುಪಟ್ಟಿ ಸಲ್ಲಿಸುವಂತೆ ಸೂಚನೆ ನೀಡಿದ ಡಿಸಿ ನಕುಲ್‌ ಅವರು, ಈಗಾಗಲೇ ಎಲ್ಲೆಲ್ಲಿ ಮನೆಗಳು ನಿರ್ಮಿಸಲಾಗಿದೆಯೋ ಅಲ್ಲಲ್ಲಿ ಮೊದಲು ವಿದ್ಯುತ್‌ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಜೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು. ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರಕ್ಕೆ ಕ್ರಮವಹಿಸಲಾಗುವುದು ಮತ್ತು ಈ ಟೌನ್‌ಶಿಫ್‌ ಬಳಿ ಕೈಗಾರಿಕೆಗಳು ಸ್ಥಾಪಿಸುವ ನಿಟ್ಟಿನಲ್ಲಿಯೂ ಈಗಾಗಲೇ ಪ್ರಯತ್ನ ನಡೆಸಿರುವುದನ್ನು ಸಭೆಯಲ್ಲಿ ಪ್ರಸ್ತಾಪಿಸಿದರು. ಮುಂಡರಗಿ ವಸತಿ ಯೋಜನೆಗೆ ಎಲ್ಲ ರೀತಿಯಸೌಕರ್ಯಗಳನ್ನು ಕಲ್ಪಿಸಲಾಗುವುದು ಎಂದರು.

ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ ಅವರು ಸಭೆಯಲ್ಲಿ ಪಾಲ್ಗೊಂಡು ಅನೇಕ ಸಲಹೆ-ಸೂಚನೆಗಳನ್ನು ನೀಡಿದರು. ಬಳಿಕ ವಿವಿಧ ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಸಭೆಗೂ ಮುನ್ನ

ಜಿಲ್ಲಾ ಧಿಕಾರಿ ಎಸ್‌.ಎಸ್‌.ನಕುಲ್‌ ಅವರು ನಿರ್ಮಿಸಲಾಗಿರುವ ಜಿ+2 ಮನೆಗಳನ್ನು ಪರಿಶೀಲಿಸಿದರು. ಸಭೆಯಲ್ಲಿ ಪ್ರೊಬೇಷನರಿ ಐಎಎಸ್‌ ಅಧಿಕಾರಿ ರಾಹುಲ್‌ ಸಂಕನೂರು, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಮೇಶ, ಕಾರ್ಯನಿರ್ವಾಹಕ ಎಂಜನಿಯರ್‌ ಕಾಳಪ್ಪ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತುಂಗಭದ್ರಾ ಜಲಾಶಯದಿಂದ ಹೆಚ್ಚುವರಿ ನೀರು ಹರಿವು; ಕಂಪ್ಲಿ-ಗಂಗಾವತಿ ಸಂಪರ್ಕ ಕಡಿತ

Bellary; ತುಂಗಭದ್ರಾ ಜಲಾಶಯದಿಂದ ಹೆಚ್ಚುವರಿ ನೀರು ಹರಿವು; ಕಂಪ್ಲಿ-ಗಂಗಾವತಿ ಸಂಪರ್ಕ ಕಡಿತ

Bellary; ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ

Bellary; ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ

Siruguppa ಕಬ್ಬಿಣದ ಸರಳಿನಿಂದ ಹೊಡೆದ ಪೆಟ್ಟಿಗೆ ಬಾಲಕ ಸಾವು

Siruguppa ಕಬ್ಬಿಣದ ಸರಳಿನಿಂದ ಹೊಡೆದ ಪೆಟ್ಟಿಗೆ ಬಾಲಕ ಸಾವು

Bellary; Indefinite strike by Lorry Owners Association

Bellary; ಲಾರಿ ಮಾಲೀಕರ ಸಂಘದಿಂದ ಅನಿರ್ದಿಷ್ಟಾವಧಿ ಮುಷ್ಕರ

14-siruguppa

Siruguppa: ಅಕ್ರಮ ಗಾಂಜಾ; 2 ದ್ವಿಚಕ್ರ ವಾಹನ ವಶ, 5 ಆರೋಪಿಗಳ ಬಂಧನ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.