ಶ್ರದ್ಧಾಭಕ್ತಿಯ ರಾಘವೇಂದ್ರ ಶ್ರೀಗಳ ಮಧ್ಯಾರಾಧನೆ
Team Udayavani, Aug 6, 2020, 3:08 PM IST
ಬಳ್ಳಾರಿ: ಸತ್ಯನಾರಾಯಣ ಪೇಟೆಯ ರಾಘವೇಂದ್ರ ಮಠದಲ್ಲಿ ಶ್ರೀಗುರು ರಾಘವೇಂದ್ರ ಶ್ರೀಗಳ 349ನೇ ಆರಾಧನಾ ಮಹೋತ್ಸವದ ಮಧ್ಯಾರಾಧನೆ ಶ್ರದ್ಧಾಭಕ್ತಿಯಿಂದ ಸರಳವಾಗಿ ನೆರವೇರಿಸಲಾಯಿತು.
ಬಳ್ಳಾರಿ: ನಗರದ ಸತ್ಯನಾರಾಯಣ ಪೇಟೆಯ ಶ್ರೀರಾಘವೇಂದ್ರ ಸ್ವಾಮಿ ಮಠದಲ್ಲಿ ಗುರು ಸಾರ್ವಭೌಮ ಮಂತ್ರಾಲಯದ ಗುರು ರಾಘವೇಂದ್ರ ಶ್ರೀಗಳ 349ನೇ ಆರಾಧನಾ ಮಹೋತ್ಸವದ ಮಧ್ಯಾರಾಧನೆ ಶ್ರದ್ದಾಭಕ್ತಿಯಿಂದ ಬುಧವಾರ ನಡೆಯಿತು. ಶ್ರೀಗಳ ವೃಂದಾವನಕ್ಕೆ ಬೆಳಗಿನ ಜಾವ 7 ಗಂಟೆಗೆ ಶ್ರೀಗಳ ಪಾದಪೂಜೆ, ಪಂಚಾಮೃತ ಅಭಿಷೇಕ ನೆರವೇರಿಸಲಾಯಿತು. ಮಧ್ಯಾಹ್ನ 12 ಗಂಟೆಗೆ ಅಷ್ಟೋದಕ ಹಾಗೂ ಮಂಗಳಾರತಿ ಕಾರ್ಯಕ್ರಮ ನಡೆಯಿತು. ಮಠದ ಶ್ರೀಗಳು
ಮಂತ್ರಘೋಷಗಳೊಂದಿಗೆ ವಿಶೇಷ ಪೂಜೆ, ಅಭಿಷೇಕ, ಪುಷ್ಪಾಲಂಕಾರ ಮಾಡಿ ಮಂಗಳರಾತಿ ಮಾಡಿದರು. ಈ ವೇಳೆ ಬ್ರಾಹ್ಮಣ ಸಮಾಜದ ಮುಖಂಡರಾದ ಡಾಕ್ಟರ್ ಬಿ.ಕೆ.ಸುಂದರ್, ಡಾಕ್ಟರ್ ಶ್ರೀನಾಥ್, ಬಿಜೆಪಿ ನಗರ ಅಧ್ಯಕ್ಷ ವೆಂಕಟೇಶ್ವರ, ಪ್ರಧಾನ ಕಾರ್ಯದರ್ಶಿ ರಾಮಾಂಜಿನಿ, ಕೆ.ಎಸ್.ಅಸೋಕ್ ಕುಮಾರ್, ನೇಮಕಲ್ರಾವ್ ಇದ್ದರು.
ವಿಶೇಷ ಅಲಂಕಾರ
ಸಿರುಗುಪ್ಪ: ವೇಣುಗೋಪಾಲಸ್ವಾಮಿ ದೇವಸ್ಥಾನದಲ್ಲಿ ಶ್ರೀ ರಾಘವೇಂದ್ರ ಗುರುಸಾರ್ವಭೌಮರ ಆರಾಧನ ಮಹೋತ್ಸವದ ಮಧ್ಯಾರಾಧನೆ ಅಂಗವಾಗಿ ಬುಧವಾರ ಬೆಳಗ್ಗೆ 6.30ಕ್ಕೆ ಶ್ರೀ ರಾಘವೇಂದ್ರ ಸ್ವಾಮಿಗಳ ಮೃತ್ತಿಕಾ ಬೃಂದಾವನಕ್ಕೆ ನಿರ್ಮಾಲ್ಯ, ಪಂಚಾಮೃತಾಭಿಷೇಕ, ಮಹಾಮಂಗಳಾರತಿ ನೆರವೇರಿಸಲಾಯಿತು. ನಗರದ ಭಕ್ತರು ಶ್ರೀರಾಘವೇಂದ್ರ ಸ್ವಾಮಿಯ ಅಷ್ಟೋತ್ತರ ನಾಮಾವಳಿಗಳನ್ನು ಪಠಿಸಿದರು. ಅಲ್ಲದೆ ರಾಯರ ಕುರಿತು ವಿವಿಧ ಭಕ್ತಿಗೀತೆಗಳನ್ನು ಹಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ