ಮಳೆಗೆ ತೊಯ್ದು ತೊಪ್ಪೆಯಾದ ಬೆಳೆ


Team Udayavani, Nov 6, 2021, 2:02 PM IST

ಮಳೆಗೆ ತೊಯ್ದು ತೊಪ್ಪೆಯಾದ ಬೆಳೆ

ಕಂಪ್ಲಿ: ತಾಲ್ಲೂಕಿನ ಪಟ್ಟಣವೂ ಸೇರಿದಂತೆ ಕೆಲವು ಗ್ರಾಮಗಳಲ್ಲಿ ಕಳೆದ ಎರಡು ದಿನಗಳಿಂದ ಅನಿರೀಕ್ಷಿತವಾಗಿ ಆಗಾಗ ಮಳೆಯಾಗುತ್ತಿದ್ದು ಈ ಮಳೆಯಿಂದ ಕೊಯ್ಲು ಮಾಡಿ ಹಾಕಿರುವ ವಾಣಿಜ್ಯ ಬೆಳೆಯಾದ ಒಣಮೆಣಸಿನಕಾಯಿ ಮತ್ತು ಭತ್ತದ ರಾಶಿಗಳು ತೋಯ್ದು ತೊಪ್ಪೆಯಾಗಿದ್ದು ಅನ್ನದಾತರು ಆತಂಕಕ್ಕೊಳಗಾಗಿದ್ದಾರೆ.

ತಾಲೂಕಿನ ಮೆಟ್ರಿ ಗ್ರಾಮದಲ್ಲಿ ಭಾರಿ ಪ್ರಮಾಣದ ಮಳೆಯಾಗಿದ್ದು, ಗ್ರಾಮದ ಗ್ರಾಪಂ ಮುಂಭಾಗದ ವಿಶಾಲವಾದ ಮೈದಾನದಲ್ಲಿ ವಾಣಿಜ್ಯ ಬೆಳೆಯಾದ ಒಣಮೆನಸಿನಕಾಯಿಗಳನ್ನು ಕೊಯ್ಲು ಮಾಡಿ ಒಣಗಲು ಹಾಕಿದ್ದಾರೆ. ಆದರೆ ಏಕಾಏಕಿ ಭಾರಿ ಪ್ರಮಾಣದಲ್ಲಿ ಮಳೆ ಸುರಿದಿದ್ದರಿಂದ ಒಣಗಲು ಹಾಕಿದ್ದ ಮೆಣಸಿನಕಾಯಿಗಳು ಮಳೆ ನೀರಿಗೆ ಹರಿದುಕೊಂಡು ಹೋಗಿವೆ.

ಆದರೆ ಮೆಟ್ರಿ ಗ್ರಾಮವನ್ನು ಹೊರತು ಪಡಿಸಿದರೆ ಅಕ್ಕಪಕ್ಕದ ಗ್ರಾಮಗಳಲ್ಲಿ ಅಂಥ ಹೇಳಿಕೊಳ್ಳುವಂತ ಮಳೆಯೇ ಆಗಿಲ್ಲ. ಇದನ್ನು ಗಮನಿಸಿದ ಮೆಣಸಿನಕಾಯಿ ಬೆಳೆದ ರೈತರು ಕಳೆದ ಹಲವು ತಿಂಗಳುಗಳಿಂದ ಸಾವಿರಾರು ರೂಗಳನ್ನು ವ್ಯಯಿಸಿ ಮೆಣಸಿನಕಾಯಿ ಬೆಳೆದು, ಕೊಯ್ಲು ಮಾಡಿ ಒಣಗಿಸಲು ಹಾಕಿದ್ದರೆ ಮಳೆರಾಯ ಈ ರೀತಿ ಮಾಡಿದ್ದಾನೆ ಎಂದು ನೋವನ್ನು ತೋಡಿಕೊಂಡರು. ಇನ್ನು ಪಟ್ಟಣದಲ್ಲಿ ದಿಢೀರನೇ ರಭಸವಾಗಿ ಹಾಗೂ ಜಿಟಿ ಜಿಟಿ ಮಳೆಯಾಗಿದ್ದು ಪಟ್ಟಣದ ಎಪಿಎಂಸಿ ಆವರಣದಲ್ಲಿ ರಾಶಿ ಹಾಕಿರುವ ನೂರಾರು ರೈತರ ಭತ್ತದ ಫಸಲು ಮಳೆಗೆ ತೋಯ್ದಿದೆ.

ಬೀಳುವ ಮಳೆಯಲ್ಲಿಯೇ ರೈತರು ಭತ್ತವನ್ನು ರಾಶಿ ಮಾಡಲು ಹರಸಾಹಸಪಡುತ್ತಿದ್ದರು. ಇದೀಗ ತಾಲೂಕಿನಲ್ಲಿ ಮುಂಗಾರು ಹಂಗಾಮಿನ ಭತ್ತದ ಕಟಾವು ಒಂದೆಡೆ ನಡೆಯುತ್ತಿದ್ದರೆ, ಇನ್ನೊಂದೆಡೆ ಒಣಮೆಣಸಿನಕಾಯಿ ಕೊಯ್ಲು ನಡೆಯುತ್ತಿದೆ. ಆದರೆ ಅನಿರೀಕ್ಷಿತವಾಗಿ ಬೀಳುತ್ತಿರುವ ಮಳೆ ಮಾತ್ರ ಎರಡು ಬೆಳೆಗಳನ್ನು ಬೆಳೆದ ರೈತರನ್ನು ಆತಂಕ್ಕೆ ದೂಡಿದ್ದಾನೆ.

ಈ ಅನಿರೀಕ್ಷಿತ ಮಳೆಯಿಂದ ಮೆಣಸಿನಕಾಯಿ ತೋಯ್ದು ಕೊಳೆತರೆ, ಇನ್ನು ಭತ್ತ ಮಳೆಯಲ್ಲಿ ನೆನೆದರೆ ಅದಕ್ಕೆ ಬೆಲೆಯೇ ಬರುವುದಿಲ್ಲವೆಂದು ಅನ್ನದಾತರು ತಮ್ಮ ಅಳಲನ್ನು ತೋಡಿಕೊಳ್ಳುತ್ತಿದ್ದಾರೆ. ಒಟ್ಟಾರೆ ಉತ್ತಮವಾಗಿ ಮಳೆಯಾಗಿದ್ದು, ಉತ್ತಮ ಇಳುವರಿ ಬರುತ್ತದೆ ಉತ್ತಮ ಬೆಲೆ ಸಿಗಬಹುದೆಂದು ಜಾತಕ ಪಕ್ಷಿಗಳಂತೆ ಕಾಯುತ್ತಿದ್ದ ರೈತರಿಗೆ ವರುಣ ಅನಿರೀಕ್ಷಿತ ಆಗಮನ ಕಂಗಾಲಾಗುವಂತೆ ಮಾಡಿದ್ದಾನೆ.

-ಜಿ. ಚಂದ್ರಶೇಖರಗೌಡ

ಟಾಪ್ ನ್ಯೂಸ್

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.