ಹಂಪಿ ರಾಮ ದೇಗುಲದಲ್ಲಿ ವಿದೇಶಿಯರಿಂದ ರಾಮಕೋಟಿ ಜಪ
ಪವಿತ್ರ ಸ್ಥಳಗಳಿಗೆ ಬಂದಾಗ ಮನಸ್ಸಿಗೆ ಶಾಂತಿ ಮತ್ತು ನೆಮ್ಮದಿ ಸಿಗುತ್ತದೆ...
Team Udayavani, Dec 11, 2022, 8:44 PM IST
ಹೊಸಪೇಟೆ: ಪ್ರಸಿದ್ಧ ಸ್ಮಾರಕಗಳನ್ನು ಕಣ್ತುಂಬಿಕೊಳ್ಳಲು ಹಂಪಿಗೆ ಆಗಮಿಸಿದ ದೇಶ-ವಿದೇಶಿ ಪ್ರವಾಸಿಗರು, ಭಾನುವಾರ ಹಂಪಿಯ ರಾಮನ ದೇಗುಲದಲ್ಲಿ ರಾಮಕೋಟಿ ಪಾರಾಯಣ ಮಾಡುವ ಮೂಲಕ ಗಮನ ಸೆಳೆದರು.
ಹಂಪಿಯ ಮಾಲ್ಯವಂತ ರಘುನಾಥ ದೇವಾಲಯದ ವೀಕ್ಷಣೆಗೆ ತೆರಳಿದ ವಿದೇಶಿ ಪ್ರವಾಸಿಗರು, ದೇವಾಲಯದಲ್ಲಿ ನಡೆಯುತ್ತಿದ್ದ ರಾಮಜಪ ಪಾರಾಯಣ ಕಂಡು ಮಾರು ಹೋಗಿ ರಾಮಜಪ ಮಾಡುವ ಮೂಲಕ ರಾಮಭಕ್ತರ ಪ್ರೀತಿಗೆ ಪಾತ್ರರಾದರು.
ಹಂಪಿಗೆ ಭೇಟಿ ನೀಡಿದ ಇಸ್ರೇಲ್ ದೇಶದ ಸುಮಾರು 20 ಪ್ರವಾಸಿಗರು ಮಾಲ್ಯವಂತ ರಘುನಾಥ ದೇಗುಲದಲ್ಲಿ ಸೂರ್ಯಸ್ತವನ್ನು ನೋಡಲು ಬಂದಿದ್ದರು. ಈ ವೇಳೆ ದೇಗುಲದಲ್ಲಿ ರಾಮ ನಾಮ ಕೋಟಿ ಹಾಗೂ ಹನುಮಾನ್ ಚಾಲೀಸಾವನ್ನು ನಿರಂತರವಾಗಿ ನಡೆಯುವ ಭಜನೆಯಲ್ಲಿ ಪಾಲ್ಗೊಂಡರು.
ಭಜನೆಗೆ ಮಾರುಹೋದ ವಿದೇಶಿಗರು ರಾಮ ಮಂತ್ರ ಪಠಣದಲ್ಲಿ ಮಗ್ನರಾದರು. ಹಿಂದೂ ಧರ್ಮ ಹಾಗೂ ರಾಮಾಯಣ ಬಗ್ಗೆ ತಿಳಿದುಕೊಂಡಿದ್ದು, ಇಂಥ ಪವಿತ್ರ ಸ್ಥಳಗಳಿಗೆ ಬಂದಾಗ ಮನಸ್ಸಿಗೆ ಶಾಂತಿ ಮತ್ತು ನೆಮ್ಮದಿ ಸಿಗುತ್ತದೆ ಎಂದು ವಿದೇಶಿ ಪ್ರವಾಸಿಗರು ಅನಿಸಿಕೆ ಹಂಚಿಕೊಂಡರು. ಹಂಪಿ ಆಧ್ಯಾತ್ಮಿಕ ಶ್ರದ್ಧಾ ಕೇಂದ್ರವಾಗಿದ್ದು ಪೌರಾಣಿಕ ಪ್ರಸಿದ್ಧಿ ಹೊಂದಿದೆ. ಈ ನಡುವೆಯೂ ಆನೆಗುಂದಿಯ ಹನುಮನ ಜನ್ಮಸ್ಥಳ ಅಂಜನಾದ್ರಿ ಕ್ಷೇತ್ರ ಕೂಡ ಪ್ರಸಿದ್ಧಿ ಹೊಂದುತ್ತಿದ್ದು, ಪ್ರವಾಸಿಗರ ಸಂಖ್ಯೆ ಹೆಚ್ಚಳವಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Ayodhya Ram Mandir ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ
BJP ರೈತಮೋರ್ಚಾ ರಾಜ್ಯಾಧ್ಯಕ್ಷ ಭವಿಷ್ಯವಾಣಿ;ಎಂಪಿ ಚುನಾವಣೆ ನಂತರ ಕಾಂಗ್ರೆಸ್ ದೇಶದಲ್ಲಿರೊಲ್ಲ
Hosapete: ಮಕರ ಸಂಕ್ರಾತಿ: ದಕ್ಷಿಣಕಾಶಿ ಹಂಪಿಗೆ ಪ್ರವಾಸಿಗರ ದಂಡು!
Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ
MUST WATCH
ಹೊಸ ಸೇರ್ಪಡೆ
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ