ಕುತೂಹಲ ಮೂಡಿಸಿದ ರಾಮುಲು-ಜನಾರ್ದನ ರೆಡ್ಡಿ ಮಧ್ಯರಾತ್ರಿ ರಹಸ್ಯ ಭೇಟಿ
Team Udayavani, Nov 3, 2022, 10:20 PM IST
ಬಳ್ಳಾರಿ: ತಾಲೂಕಿನ ಬಿಡಿಹಳ್ಳಿಯ ಬಳಿಯ ಕಾಲುವೆ ಕಾಮಗಾರಿ ಸ್ಥಳದಲ್ಲೇ ವಾಸ್ತವ್ಯ ಹೂಡಿದ್ದ ಜಿಲ್ಲಾ ಉಸ್ತುವಾರಿ ಸಚಿವ ಬಿ. ಶ್ರೀರಾಮುಲು ಅವರನ್ನು ಮಾಜಿ ಸಚಿವ ಜನಾರ್ದನ ರೆಡ್ಡಿ ಮಂಗಳವಾರ ತಡರಾತ್ರಿ ರಹಸ್ಯವಾಗಿ ಭೇಟಿಯಾಗಿದ್ದಾರೆ. ರೆಡ್ಡಿ ಬಿಜೆಪಿ ಮೇಲೆ ಅಸಮಾಧಾನ ಹೊರಹಾಕಿದ್ದ ಬೆನ್ನಲ್ಲೇ ಈ ರಹಸ್ಯ ಭೇಟಿ ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ.
ನಗರದ ಈದ್ಗಾ ಮೈದಾನದಲ್ಲಿ ಕಳೆದ ರವಿವಾರ ಮಿಲಾದ್ ಕಪ್ ಸೀಮಿತ ಓವರ್ಗಳ ಕ್ರಿಕೆಟ್ ಪಂದ್ಯಾ ವಳಿಗೆ ಚಾಲನೆ ನೀಡಿದ್ದ ಜನಾರ್ದನ ರೆಡ್ಡಿ, ನಾನು ಬೆಳೆಸಿದ ಪಕ್ಷದವರೇ ನನಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದರು. ಈ ಕುರಿತು ಪಕ್ಷದ ಹೈಕಮಾಂಡ್ ಜತೆ ಚರ್ಚಿಸುವುದಾಗಿ ಸಾರಿಗೆ ಸಚಿವ ಶ್ರೀರಾಮುಲು ನ.1ರಂದು ರಾಜ್ಯೋತ್ಸವ ಕಾರ್ಯಕ್ರಮ ವೇಳೆ ಪ್ರತಿಕ್ರಿಯಿಸಿದ್ದರು. ಈ ಎಲ್ಲ ಬೆಳವಣಿಗೆಗಳ ನಡುವೆ ನ.1ರಂದು ಮಂಗಳವಾರ ಕಾಲುವೆ ಕಾಮಗಾರಿ ಬಳಿಗೆ ತೆರಳಿ ಅಂದು ರಾತ್ರಿ ಅಲ್ಲೇ ವಾಸ್ತವ್ಯ ಹೂಡಿದ್ದ ಸಚಿವ ಶ್ರೀರಾಮುಲು ಅವರನ್ನು ರೆಡ್ಡಿ ರಹಸ್ಯವಾಗಿ ಭೇಟಿಯಾಗಿರುವುದು ಕುತೂಹಲ ಕೆರಳಿಸಿದೆ.
ಈ ನಡುವೆ ಆರೆಸ್ಸೆಸ್ ರಾಜ್ಯ ಮುಖಂಡರೊಬ್ಬರು ಕೂಡ ಬುಧವಾರ ರಾತ್ರಿ ರೆಡ್ಡಿಯನ್ನು ರಹಸ್ಯವಾಗಿ ಭೇಟಿಯಾಗಿ ಚರ್ಚಿಸಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
ರಾಜ್ಯ ದಿವಾಳಿ ಮಾಡಿ ಚೊಂಬು ತೋರಿಸುತ್ತಿದ್ದಾರೆ: ಬಸವರಾಜ ಬೊಮ್ಮಾಯಿ
Shiv sena ಪಕ್ಷದ ಗೀತೆಯಿಂದ ‘ಹಿಂದೂ’, ‘ಜೈ ಭವಾನಿ’ ಪದ ಕೈಬಿಡಲ್ಲ: ಉದ್ಧವ್
Protest; ಕೇಜ್ರಿವಾಲ್ ಸಕ್ಕರೆ ಮಟ್ಟ 300 ದಾಟಿದೆ.. ; ಆಮ್ ಆದ್ಮಿ ಪಕ್ಷ ಆಕ್ರೋಶ
Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!