ಹೊಂ ಕ್ವಾರಂಟೈನ್‌ ಕುಟುಂಬಕ್ಕೆ ರೇಷನ್‌ ದೇಣಿಗೆ


Team Udayavani, Apr 2, 2020, 6:00 PM IST

ballry-tdy-1

ಬಳ್ಳಾರಿ: ಕೋವಿಡ್ 19 ವೈರಸ್‌ ಭೀತಿಯಿಂದಾಗಿ ತಮ್ಮ ತಮ್ಮ ಊರುಗಳಿಗೆ ವಾಪಸ್ಸಾಗುತ್ತಿರುವ ಕೂಲಿ ಕಾರ್ಮಿಕರಿಗೆ ಹಲವು ಸಂಘ ಸಂಸ್ಥೆ, ಸಮಾಜ ಸೇವಕರಿಂದ ರಸ್ತೆಯುದ್ದಕ್ಕೂ ಊಟದ ವ್ಯವಸ್ಥೆ ಮಾಡುತ್ತಿರುವುದು ಸಾಮಾನ್ಯವಾಗಿದೆ. ಆದರೆ ಗೃಹ ಬಂಧನದಲ್ಲಿರುವ ವೈರಸ್‌ ಶಂಕಿತ ಕುಟುಂಬಕ್ಕೆ ನೆರೆಹೊರೆಯವರು ದೇಣಿಗೆ ಸಂಗ್ರಹಿಸಿ ತಿಂಗಳ ದವಸ ಧಾನ್ಯಗಳನ್ನು ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಜತೆಗೆ ಹೊರಬರದಂತೆ ಜಾಗೃತಿಯನ್ನೂ ಮೂಡಿಸಿದ್ದಾರೆ.

ಕೋವಿಡ್ 19  ವೈರಸ್‌ ಭೀತಿ ವಿಶ್ವವನ್ನೇ ಬೆಚ್ಚಿ ಬೀಳಿಸಿದೆ. ವೈರಸ್‌ ನಿಯಂತ್ರಿಸುವ ಸಲುವಾಗಿ ಕೇಂದ್ರ ಸರ್ಕಾರ ದೇಶಾದ್ಯಂತ ಲಾಕ್‌ ಡೌನ್‌ ವಿಧಿಸಿರುವ ಹಿನ್ನೆಲೆಯಲ್ಲಿ ಎಲ್ಲವೂ ಬಂದ್‌ ಆಗಿದೆ. ದೂರದೂರುಗಳಿಂದ ದುಡಿಯಲೆಂದು ಬೃಹತ್‌ ನಗರಗಳಿಗೆ ವಲಸೆ ಬಂದಿದ್ದ ಕೂಲಿ ಕಾರ್ಮಿಕರೆಲ್ಲರೂ ವೈರಸ್‌ ಭೀತಿಯಿಂದಾಗಿ ತಮ್ಮ ತಮ್ಮ ಊರುಗಳಿಗೆ ವಾಪಸ್‌ ಆಗುತ್ತಿದ್ದಾರೆ. ಹೀಗೆ ಬೆಂಗಳೂರಿಗೆ ದುಡಿಯಲೆಂದು ಕುಟುಂಬ ಸಮೇತ ರಾಜ್ಯದ ರಾಜಧಾನಿ ಬೆಂಗಳೂರಿಗೆ ಹೋಗಿದ್ದ ಬಳ್ಳಾರಿ ನಗರದ 7ನೇ ವಾರ್ಡ್‌ನಲ್ಲಿರುವ ಗಾರೆ ಕೆಲಸದ ಕುಟುಂಬ ಸಹ ಕಳೆದ ಎರಡ್ಮೂರು ದಿನಗಳ ಹಿಂದೆ ಬಳ್ಳಾರಿಗೆ ಆಗಮಿಸಿದೆ. ಬೆಂಗಳೂರಿನಲ್ಲಿ ಕೋವಿಡ್ 19  ವೈರಸ್‌ ಪಾಸಿಟಿವ್‌ ಪ್ರಕರಣಗಳ ಸಂಖ್ಯೆ ಹೆಚ್ಚಿರುವ ಹಿನ್ನೆಲೆಯಲ್ಲಿ ಈ ಕುಟುಂಬಕ್ಕೂ ಬಳ್ಳಾರಿಯಲ್ಲಿ ವೈದ್ಯರು ತಪಾಸಣೆ ವೇಳೆ ಸ್ಕ್ರೀನಿಂಗ್‌ ಮಾಡಿದ್ದು, 14 ದಿನಗಳ ಕಾಲ ಗೃಹಬಂಧನ (ಹೋಮ್‌ ಕ್ವಾರಂಟೈನ್) ದಲ್ಲಿರುವಂತೆ ಸೂಚಿಸಿದ್ದು, ಅದರಂತೆ ಮನೆಯಲ್ಲಿ ಇರಿಸಿರುವುದು ನೆರೆಹೊರೆಯ ಜನರನ್ನು ಆತಂಕಕ್ಕೀಡು ಮಾಡಿದೆ.

ನಗರದ 6 ಮತ್ತು 7ನೇ ವಾರ್ಡ್‌ಗಳು ಸಂಪೂರ್ಣ ಕೂಲಿ ಕಾರ್ಮಿಕರಿಂದ ಕೂಡಿರುವ ಸ್ಲಂ ಪ್ರದೇಶಗಳಾಗಿವೆ. ಹೆಚ್ಚಿನ ಪ್ರಮಾಣದಲ್ಲಿ ವೃದ್ಧರು, ಮಕ್ಕಳು ಇದ್ದು, ಶಾಲೆಗಳು, ಟ್ಯೂಷನ್‌ ಗಳು ರಜೆಯಲ್ಲಿರುವ ಕಾರಣ ಮಕ್ಕಳು, ಯುವಕರು ರಸ್ತೆಗಳಲ್ಲೇ ಆಟವಾಡುತ್ತಾ ಇರುತ್ತಾರೆ. ಇಂಥ ಪ್ರದೇಶಗಳಲ್ಲಿ ಸೋಂಕು ಹರಡಿದರೆ ಅದರ ಪರಿಣಾಮ ಊಹಿಸಲೂ ಅಸಾಧ್ಯವಾಗಲಿದೆ.

ಮೇಲಾಗಿ ಕೇಂದ್ರ ಸರ್ಕಾರದ ಲಾಕ್‌ಡೌನ್‌ ಆದೇಶದಿಂದ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳಿಂದ ವಾರ್ಡ್‌ಗಳಲ್ಲೂ ಸಾಧ್ಯವಾದಷ್ಟು ಮಕ್ಕಳು, ಯುವಕರು, ವೃದ್ಧರು ಮನೆಯಿಂದ ಹೊರಗೆ ಬರುವುದನ್ನು ತಡೆಹಿಡಿಯಲಾಗಿದೆ. ಆದರೂ, ಬೆಳಗ್ಗೆ ಮತ್ತು ಸಂಜೆ ಹೊತ್ತಲ್ಲಿ ಬೀದಿಗಳ ರಸ್ತೆಬದಿಯಲ್ಲಿ ನಿಲ್ಲುವುದು, ಮಕ್ಕಳು ಆಟವಾಡುವುದು ಸಾಮಾನ್ಯ. ಹಾಗಾಗಿ ಇಂಥಹ ಸಂದರ್ಭದಲ್ಲಿ ಗೃಹಬಂಧನದಲ್ಲಿರುವ ಶಂಕಿತ ಸೋಂಕಿತರು ಸಂಚರಿಸಿದಲ್ಲಿ ಇತರರಿಗೆ ಹರಡುವ ಸಾಧ್ಯತೆ ದಟ್ಟವಾಗಿದೆ. ಹಾಗಾಗಿ ಗೃಹ ಬಂಧನದಲ್ಲಿರುವವರಿಗೆ ತಿಂಗಳ ರೇಷನ್‌ ನೀಡುವ ಮೂಲಕ ಮನೆಯಿಂದ ಹೊರಗಡೆ ಬಾರದಂತೆ ಮನವಿ ಮಾಡಲಾಗಿದೆ. ಜತೆಗೆ ವಾರ್ಡ್‌ಗಳಲ್ಲೂ ಕೆಲವೊಂದು ರಸ್ತೆಗಳನ್ನು ಸಹ ಬಂದ್‌ ಮಾಡಲಾಗಿದೆ ಎಂದವರು ತಿಳಿಸಿದ್ದಾರೆ.

ಕಡುಬಡವರಾದ ಶಂಕಿತ ಕುಟುಂಬದ ವ್ಯಕ್ತಿಗಳು, ಅನ್ಯಕಾರ್ಯನಿಮಿತ್ತ ಪದೇ ಪದೆ ಹೊರಗಡೆ ಸಂಚರಿಸುವ ಸಾಧ್ಯತೆಯಿರುವುದರಿಂದ ಇತರರಿಗೂ ಸೋಂಕು ಆವರಿಸಲಿದೆ ಎಂದು ಭಯಭೀತರಾದ ನೆರೆಹೊರೆಯ ಜನರು ಪ್ರತಿಯೊಬ್ಬರಿಂದ ಸುಮಾರು 2 ಸಾವಿರ ರೂಗಳಷ್ಟು ದೇಣಿಗೆ ಸಂಗ್ರಹಿಸಿದ್ದಾರೆ. ಮೂವರು ಸದಸ್ಯರುಳ್ಳ ಈ ಕುಟುಂಬಕ್ಕೆ ಒಂದು ತಿಂಗಳಿಗೆ ಆಗುವಷ್ಟು 25 ಕೆಜಿ ಅಕ್ಕಿ, 3 ಲೀಟರ್‌ ಎಣ್ಣೆ, 2 ಉಪ್ಪಿನ ಪ್ಯಾಕೇಟ್‌, ತಲೆಗೆ ಹಚ್ಚಿಕೊಳ್ಳಲು ಕೊಬ್ಬರಿ ಎಣ್ಣೆ, ಬೆಳಗ್ಗೆ ಹಲ್ಲುಜ್ಜಲು ಟೂತ್‌ಪೇಸ್‌ ಸೇರಿದಂತೆ ಇನ್ನಿತರೆ ಅಗತ್ಯ ವಸ್ತುಗಳನ್ನು ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಜತೆಗೆ ದಯಮಾಡಿ ವೈದ್ಯರು ಸೂಚಿಸಿರುವ ನಿಗದಿತ 14 ದಿನಗಳ ಕಾಲ ಹೊರಗಡೆ ಬಾರದಂತೆ ಮನೆಯಲ್ಲೇ ಇರುವಂತೆಯೂ ಕೋರಲಾಗಿದೆ ಎಂದು ಹೆಸರು ಹೇಳಲು ಇಚ್ಛಿಸದ ದೇಣಿಗೆ ನೀಡಿದ ಮುಖಂಡರು ಉದಯವಾಣಿಗೆ ತಿಳಿಸಿದ್ದಾರೆ.

 

-ವೆಂಕೋಬಿ ಸಂಗನಕಲ್ಲು

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.