ಸಮಯ ವ್ಯರ್ಥ ಮಾಡದೆ ಓದಿ


Team Udayavani, Mar 8, 2019, 7:04 AM IST

bell-2.jpg

ಕೂಡ್ಲಿಗಿ: ವಿಜ್ಞಾನ ಜಗತ್ತಿನ ವಿಕಾಸಕ್ಕೆ ನಾಂದಿಯಾಗುವ ಬದಲು ನಾಶ ಮಾಡುವತ್ತ ಸಾಗಿರುವುದು ದುರಂತವೇ ಸರಿ ಎಂದು ದಾವಣಗೆರೆ ಜಿಲ್ಲಾ ಕರ್ನಾಟಕ ವಿಜ್ಞಾನ ಪರಿಷತ್‌ ಕಾರ್ಯಕಾರಿ ಕಾರ್ಯದರ್ಶಿ ಗುರುಸಿದ್ದಯ್ಯ ಸ್ವಾಮಿ ಆತಂಕವ್ಯಕ್ತಪಡಿಸಿದರು. 

ತಾಲೂಕಿನ ನಿಂಬಳಗೆರೆ ಗ್ರಾಮದ ಸರ್ಕಾರಿ ಪ್ರೌಢಶಾಲೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್‌ ಹಾಗೂ ಜಿಎಂಸಿ ಟ್ರಸ್ಟ್‌ ಮಂಗಾಪುರದ ಆಶ್ರಯದಲ್ಲಿ ಮಂಗಳವಾರ ಆಯೋಜಿಸಿದ್ದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಿದ್ಯಾರ್ಥಿಗಳಲ್ಲಿ ಹುದುಗಿರುವ ಪ್ರತಿಭೆಯನ್ನು ಹೊರ ತರುವ ಕೆಲಸ ಶಿಕ್ಷಕರದಾಗಿದೆ. ವಿದ್ಯಾರ್ಥಿಗಳು ಸೃಜನಶೀಲತೆ ಮೈಗೂಡಿಸಿಕೊಂಡು ವೈಜ್ಞಾನಿಕವಾಗಿ ಅಭಿವೃದ್ಧಿಯಾಗಬೇಕಿದೆ ಎಂದರು.

ವಿಜ್ಞಾನ ಮತ್ತು ಧರ್ಮಗಳು ಎರಡು ಒಂದೆ. ಆದರೆ ದಾರಿಗಳು ಬೇರೆಯಾಗಿವೆ. ಧರ್ಮವೂ ಹಳೆಯ ವಿಷಯಗಳೊಂದಿಗೆ ಮುಂದುವರಿದರೆ, ವಿಜ್ಞಾನವೂ ಪ್ರಸ್ತುತ ವಿಷಯಗಳ ಕುರಿತು ಅಧ್ಯಯನ ಮಾಡುತ್ತಾ ಕಾಲಮಾನಕ್ಕೆ ತಕ್ಕಂತೆ ಬದಲಾಗುತ್ತ ಹೋಗುತದೆ ಎಂದರು. ಕಿರಿಯ ವಿಜ್ಞಾನಿ
ಪುರಸ್ಕೃತ ಡಾ|ಪ್ರವೀಣ್‌ಕುಮಾರ್‌ ಮಾತನಾಡಿ, ವಿದ್ಯಾರ್ಥಿಗಳು ಸಮಯ ವ್ಯರ್ಥ ಮಾಡದೆ ಅಧ್ಯಯನದ ಕಡೆ ಹೆಚ್ಚು ಗಮನ ಹರಿಸಬೇಕು. 

ವೇಳಾಪಟ್ಟಿ ಸಿದ್ಧಪಡಿಸಿಕೊಂಡು ಅಭ್ಯಸಿಸುವುದನ್ನು ರೂಢಿಕೊಳಬೇಕು. ಪುಸ್ತಕವನ್ನು ಪ್ರೀತಿಸುವ ಜತೆಗೆ ಪುಸ್ತಕದ ಜತೆಗೆ ಸಂವಾದಕ್ಕಿಳಿದು ಅಭ್ಯಸಿಸಿದಾಗ ಯಶಸ್ಸು ಕಟ್ಟಿಟ್ಟ ಬುತ್ತಿಯಾಗಲಿದೆ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ವಿಜ್ಞಾನ ವಿಷಯವು ಅಷ್ಟೇ ಸುಲಭವಾಗಿದ್ದು, ಕುತೂಹಲ ಹಾಗೂ ಆಲೋಚನೆಯಿಂದ ವಿಮರ್ಶಿಸಿದರೆ ವಿಜ್ಞಾನ ಸರಳವಾಗಲಿದೆ. ಹೆಚ್ಚಿನದಾಗಿ ವಿಜ್ಞಾನಿಗಳು ಬಡತನದಿಂದ ಬಂದವರಾಗಿದ್ದಾರೆ. ಕಠಿಣ ಪರಿಶ್ರಮ, ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯವಾಗಲಿದೆ. ಅದರಂತೆ ಬದ್ಧತೆ ಮತ್ತು ಕುತೂಹಲ ಇರುವವರು ಸಂಶೋಧನೆ ಮಾಡಲು ದಾರಿಯಾಗುತ್ತದೆ ಎಂದರು.

ಮುಖ್ಯ ಶಿಕ್ಷಕ ಫಕ್ಕೀರಪ್ಪ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ವಿಜ್ಞಾನ ಪರಿಷತ್‌ ಕಾರ್ಯಕಾರಿ ಸದಸ್ಯ ಎಸ್‌.ಎಂ.ಕೊಟ್ರಸ್ವಾಮಿ, ಜೆಎಂಸಿ ಟ್ರಸ್ಟ್‌ನ ಎಂ.ಅಶೋಕ, ಗ್ರಾಪಂ ಅಧ್ಯಕ್ಷ ಮಹಾಂತೇಶ, ಗ್ರಾಪಂ ಸದಸ್ಯರಾದ ಗುರುಬಸವರಾಜ, ವಿ.ಎಂ.ವೀರೇಶಕುಮಾರ್‌, ನಿಲಯ ಪಾಲಕ ಬಸವರಾಜ, ಶಿಕ್ಷಕರಾದ ಪತ್ರೇಶ್‌, ಮಹಾಂತೇಶ್‌, ನಾಗರಾಜ ಇನ್ನಿತರರಿದ್ದರು. 

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.