ರೆಡ್‌ಕ್ರಾಸ್‌ ಬಳ್ಳಾರಿ ಘಟಕಕ್ಕೆ ಪ್ರಶಸ್ತಿ ಗರಿ


Team Udayavani, May 26, 2018, 11:57 AM IST

bell-3.jpg

ಬಳ್ಳಾರಿ: ಉಚಿತ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ, ಪ್ರಥಮ ಚಿಕಿತ್ಸೆ ತರಬೇತಿ ಸೇರಿದಂತೆ 27 ವಿಭಾಗಗಳಲ್ಲಿ ಬಳ್ಳಾರಿ ರೆಡ್‌ಕ್ರಾಸ್‌ ಸಂಸ್ಥೆ ಸಲ್ಲಿಸಿದ ಅಭೂತಪೂರ್ವ ಸೇವೆಗಳಿಗೆ ಉತ್ತಮ ಕಾರ್ಯನಿರ್ವಹಣೆ ಜಿಲ್ಲೆ ಪ್ರಶಸ್ತಿ ಲಭಿಸಿದ್ದು, ಎರಡು ದಿನಗಳ ಹಿಂದೆ ರಾಜಭವನದಲ್ಲಿ ರಾಜ್ಯಪಾಲರಿಂದ ಸ್ವೀಕರಿಸಲಾಯಿತು ಎಂದು ಜಿಲ್ಲಾಧಿಕಾರಿ ಡಾ| ರಾಮ್‌ ಪ್ರಸಾತ್‌ ಮನೋಹರ್‌ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಚಿತ ಆರೋಗ್ಯ ತಪಾಸಣೆ, ಸ್ವಯಂ ಪ್ರೇರಿತ ರಕ್ತದಾನ ಶಿಬಿರ, ಪ್ರಥಮ ಚಿಕಿತ್ಸೆ ತರಬೇತಿ, ಲೆಡ್‌ ಪೊಲ್ಯೂಶನ್‌ ಕಾರ್ಯಾಗಾರ, ಕಿವಿ ಪರೀಕ್ಷೆ ತಪಾಸಣೆ, ಕ್ವೀಜ್‌ ಕಾಂಪಿಟೇಶನ್‌, ವಿಶ್ವ ತಂಬಾಕು ದಿನಾಚರಣೆ, ಯೋಗ ದಿನಾಚರಣೆ, ಕ್ಯಾನ್ಸರ್‌ ಜಾಗೃತಿ, ರಕ್ತದಾನ, ಸ್ವತ್ಛ ಭಾರತ ಸೇರಿದಂತೆ 27 ವಿಭಾಗಗಳಲ್ಲಿ 185 ಕಾರ್ಯಕ್ರಮಗಳನ್ನು 2016-17ನೇ ಸಾಲಿನಲ್ಲಿ ಬಳ್ಳಾರಿ ರೆಡ್‌ಕ್ರಾಸ್‌ ಸಂಸ್ಥೆ ಕೈಗೊಂಡಿದ್ದು, ಇದರ ಸೇವಾ ಕಾರ್ಯನಿರ್ವಹಣೆ ಮೆಚ್ಚಿ ಉತ್ತಮ ಕಾರ್ಯನಿರ್ವಹಣೆ ಜಿಲ್ಲೆ ಪ್ರಶಸ್ತಿ ನೀಡಲಾಗಿದೆ. ಇದಕ್ಕೆ ಕಾರಣರಾದ ರೆಡ್‌ಕ್ರಾಸ್‌ ಸಂಸ್ಥೆಯ ಪದಾಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಅಭಿನಂದನೆ ಸಲ್ಲಿಸಿದರು.

50 ಸಾವಿರ ನೋಂದಣಿ ಗುರಿ: ಸೇವಾ ಮನೋಭಾವವನ್ನು ಯುವಜನರಲ್ಲಿ ಬೆಳೆಸುವ ದೃಷ್ಟಿಯಿಂದ ಬಳ್ಳಾರಿ ರೆಡ್‌ಕ್ರಾಸ್‌ ಸಂಸ್ಥೆಯ ಕಾರ್ಯಕಾರಿ ಸಮಿತಿ ತೀರ್ಮಾನದ ಅನ್ವಯ ಜೂನಿಯರ್‌ ರೆಡ್‌ಕ್ರಾಸ್‌ ಮತ್ತು ಯುವರೆಡ್‌ಕ್ರಾಸ್‌ಗೆ 50 ಸಾವಿರ ಯುವ ಜನರನ್ನು ನೋಂದಣಿ ಮಾಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಯುವಜನರಿಗೆ ಪ್ರಥಮ ಚಿಕಿತ್ಸೆ, ವಿಪತ್ತು ನಿರ್ವಹಣಾ ತರಬೇತಿ ನೀಡಲಾಗುತ್ತದೆ ಮತ್ತು ಇದರಲ್ಲಿ ಪಾಲ್ಗೊಂಡರೆ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದೇವೆ ಎಂಬ ಮನೋಭಾವ ಮೂಡುತ್ತದೆ. ಈ ಹಿನ್ನೆಲೆಯಲ್ಲಿ ನೋಂದಣಿ
ಮಾಡುವ ಉದ್ದೇಶ ಹೊಂದಲಾಗಿದೆ. ಈ ವರ್ಷ ಬಳ್ಳಾರಿ ರೆಡ್‌ಕ್ರಾಸ್‌ ಸಂಸ್ಥೆ ವತಿಯಿಂದ ಅವಶ್ಯವಿರುವ ಕಡೆ ರಕ್ತ ಸಂಗ್ರಹಣಾ ಕೇಂದ್ರಗಳನ್ನು ತೆರೆಯಲು ಉದ್ದೇಶಿಸಲಾಗಿದೆ. ರಕ್ತ ಸಂಗ್ರಹಣಾ ಕೇಂದ್ರಗಳಿರುವ ಕಡೆಗಳಲ್ಲಿ ಅವುಗಳನ್ನು ರಕ್ತ ಬ್ಯಾಂಕ್‌ಗಳನ್ನಾಗಿ ಪರಿವರ್ತಿಸಲಾಗುವುದು ಎಂದು ತಿಳಿಸಿದರು. 

20237 ಮತದಾರರು: ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣಾ ನೀತಿ ಸಂಹಿತೆ ಮೇ.15ರಿಂದ ಬಳ್ಳಾರಿ ಜಿಲ್ಲೆಯಲ್ಲಿ ಈಗಾಗಲೇ ಜಾರಿಯಲ್ಲಿದ್ದು, ಈ ಚುನಾವಣೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ 20237 ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಇದಕ್ಕಾಗಿ 30 ಮತದಾನ ಕೇಂದ್ರಗಳನ್ನು ಆರಂಭಿಸಿದ್ದು, 80 ಜನ ಸಿಬ್ಬಂದಿ ನಿಯೋಜಿಸಲಾಗಿದೆ. 9 ಫ್ಲೆ$çಯಿಂಗ್‌ ಸ್ಕ್ವಾಡ್‌ ತಂಡಗಳನ್ನು ನೇಮಕ ಮಾಡಲಾಗಿದೆ. ಜೂ.8ರಂದು ಮತದಾನ ನಡೆಯಲಿದ್ದು, ಜೂ.12ರಂದು ಗುಲ್ಬರ್ಗ ವಿವಿಯಲ್ಲಿ ಮತ ಏಣಿಕೆ ನಡೆಯಲಿದೆ ಎಂದು ತಿಳಿಸಿದರು. 

ಈ ಸಂದರ್ಭದಲ್ಲಿ ರೆಡ್‌ಕ್ರಾಸ್‌ ಸಂಸ್ಥೆಯ ಷಕೀಬ್‌, ಮುಖಂಡರಾದ ಡಾ| ಮಹಿಪಾಲ್‌, ಕೆ.ಚಂದ್ರಶೇಖರ್‌, ಸಾಧನಾ ಹಿರೇಮಠ, ಎಸ್‌ಬಿಐ ದೇವಣ್ಣ ಸೇರಿದಂತೆ ಇನ್ನಿತರರಿದ್ದರು. 

ಬೀಜ-ಗೊಬ್ಬರ ದಾಸ್ತಾನು ಜಿಲ್ಲೆಯಲ್ಲಿ ಈಗಾಗಲೇ ಉತ್ತಮ ಮಳೆಯಾಗಿದ್ದು, ಅವಶ್ಯಕವಿರುವ 15 ಸಾವಿರ ಟನ್‌ ಗೊಬ್ಬರ ಮತ್ತು 15 ಸಾವಿರ ಟನ್‌ ಬೀಜಗಳನ್ನು ರೈತ ಸಂಪರ್ಕ ಕೇಂದ್ರಗಳಲ್ಲಿ ದಾಸ್ತಾನು ಮಾಡಲಾಗಿದೆ. ಜೂನ್‌ ತಿಂಗಳಲ್ಲಿ 15 ಸಾವಿರ ಟನ್‌ ಗೊಬ್ಬರ, ಜುಲೈ ಮತ್ತು ಮುಂದಿನ ತಿಂಗಳಲ್ಲಿ ತಲಾ 40 ಸಾವಿರ ಟನ್‌ ಗೊಬ್ಬರ ಅವಶ್ಯಕವಿದ್ದು, ಅದನ್ನು ಸಮರ್ಪಕವಾಗಿ ಪೂರೈಸಲು ಸೂಚನೆ ನೀಡಲಾಗಿದೆ. ಈಗಾಗಲೇ ರಸಗೊಬ್ಬರ ಕಂಪನಿಗಳ ಡೀಲರ್‌ಗಳು, ರಸಗೊಬ್ಬರ ಸರಬರಾಜು ಗುತ್ತಿಗೆದಾರರು ಮತ್ತು ಲಾರಿ ಮಾಲೀಕರೊಂದಿಗೆ ಸಭೆ ನಡೆಸಲಾಗಿದೆ.

ರೈತರಿಗೆ ರಸಗೊಬ್ಬರ ಪೂರೈಕೆ ವಿಷಯದಲ್ಲಿ ಯಾವುದೇ ಸಮಸ್ಯೆಗಳು ಉಂಟಾದರೆ ಅವಶ್ಯಕ ವಸ್ತು ಕಾಯ್ದೆ ಅಡಿ ಸಂಬಂಧಿಸಿದವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ| ರಾಮ್‌ ಪ್ರಸಾತ್‌ ಮನೋಹರ್‌ ಎಚ್ಚರಿಕೆ ನೀಡಿದರು.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.