ಸೇವಾ ಭದ್ರತೆಗೆ ಆಗ್ರಹಿಸಿ ಮನವಿ
Team Udayavani, Oct 9, 2020, 7:14 PM IST
ಹೂವಿನಹಡಗಲಿ: ಸರಕಾರ ಜಾರಿಗೆ ತಂದಿರುವ ಸ್ವಾಮಿತ್ವ ಯೋಜನೆಕೆಲಸದಿಂದ ನಮ್ಮನ್ನು ಕೈಬಿಡಬೇಕು ಎಂದು ಕರ್ನಾಟಕ ರಾಜ್ಯ ಸರಕಾರಿ ಪರವಾನಗಿ ಭೂಮಾಪಕರ ಸಂಘ ಹಡಗಲಿ ತಾಲೂಕು ಘಟಕದ ಪದಾಧಿಕಾರಿಗಳು ಬುಧವಾರ ಭೂ ಮಾಪನ ಇಲಾಖೆಯ ಸಹಾಯಕ ನಿರ್ದೇಶಕರಾದ ಹಂಸಕುಮಾರಿ ಅವರಿಗೆ ಮನವಿ ಸಲ್ಲಿಸಿದರು.
ಅಧ್ಯಕ್ಷರಾದ ಎಂ ತಿಪ್ಪಾನಾಯ್ಕ ಮಾತನಾಡಿ ಸ್ವಾಮಿತ್ವ ಯೋಜನೆ ಅಡಿ ಪರವಾನಗಿ ಭೂ ಮಾಪಕರನ್ನು ನಿಯೋಜಿಸಿಕೊಳ್ಳುತ್ತಾರೆ ಆದರೆ ನಮಗೆಯಾವುದೇ ರೀತಿಯ ತರಬೇತಿ ಮತ್ತು ಸೂಕ್ತ ಮಾರ್ಗದರ್ಶನ ನಮಗೆ ನೀಡಿಲ್ಲ. ಇದುವರೆಗೂ ಪರವಾನಗಿ ಭೂ ಮಾಪಕರಿಗೆ ಸೇವಾಭದ್ರತೆ ಒದಗಿಸಿಲ್ಲ. ನಮ್ಮ ರಾಜ್ಯ ಮಂಡಳಿಯೊಂದಿಗೆ ಚರ್ಚಿಸದೆ ಏಕಾಏಕಿ ಯೋಜನೆಯನ್ನು ಜಾರಿಗೆ ತಂದು ನಮ್ಮನ್ನುನಿಯೋಜಿಸಿದ್ದಾರೆ. ಇದನ್ನು ನಾವು ಖಂಡಿಸುತ್ತೇವೆ ರಾಜ್ಯ ಸಂಘದ ಕರೆ ಮೇರೆಗೆ ತಾಲೂಕು ಸಂಘವು ಸರಕಾರಕೂಡಲೇ ಈ ಯೋಜನೆಯಿಂದ ನಮ್ಮನ್ನು ಕೈಬಿಡಬೇಕೆಂದು ಒತ್ತಾಯಿಸುತ್ತದೆ ಎಂದರು.
ಕಳೆದ 18 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ನಮಗೆ ಇಲಾಖೆಯಲ್ಲಿಸೇವಾ ಭದ್ರತೆ ಇಲ್ಲ. ಸರಕಾರದಯೋಜನೆಗಳಾದ ದರಕಾಸ ಪೋಡಿ, ಕೆರೆ ಅಳತೆ, ಪೋಡಿ ಮುಕ್ತ ಅಭಿಯಾನಯೋಜನೆ ಸೇರಿದಂತೆ ಭೂ ಮಾಪನಕೆಲಸ ಕಾರ್ಯಗಳಿಗೆ ನಮ್ಮಿಂದ ಕೆಲಸ ತೆಗೆದುಕೊಂಡು ನಿರ್ಲಕ್ಷ ಧೋರಣೆ ಅನುಸರಿಸುತ್ತಿದೆ.
ನಮ್ಮ ಸೇವೆಯನ್ನು ಈ ಕೂಡಲೇ ಕಾಯಂಗೊಳಿಸಬೇಕೆಂದು ಭೂ ಮಾಪನ ಇಲಾಖೆಯ ಸಹಾಯಕ ನಿರ್ದೇಶಕರ ಮೂಲಕ ಸರಕಾರಕ್ಕೆಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ಎಂ. ತಿಪ್ಪಾನಾಯ್ಕ,ಪದಾಧಿಕಾರಿಗಳಾದ ಗೋಪಿನಾಥ, ಚಂದ್ರುಶೇಖರ, ಸಂತೋಷ,ಡಾಕ್ಯಾನಾಯ್ಕ, ಶಿವಕುಮಾರನಾಯ್ಕ, ಜಗದೀಶ ಎನ್, ಸೊಮಶೇಖರ, ಜ್ಯೋತಿನಾಯ್ಕ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ