ಬಾಕಿ ವೇತನ ಪಾವತಿಗೆ ಆಗ್ರಹ


Team Udayavani, Nov 18, 2018, 5:23 PM IST

bell-1.jpg

ಬಳ್ಳಾರಿ: ಆಶಾ ಕಾರ್ಯಕರ್ತೆಯರ ಬಾಕಿ ವೇತನ, ಕೇಂದ್ರದ ಪ್ರೋತ್ಸಾಹಧನ ಬಿಡುಗಡೆಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ರಾಜ್ಯ ಸಂಯುಕ್ತ (ಎಐಯುಟಿಯುಸಿ ಸಂಯೋಜಿತ) ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಆಶಾ ಕಾರ್ಯಕರ್ತೆಯರು ಶನಿವಾರ ಪ್ರತಿಭಟನೆ ನಡೆಸಿದರು.

ಗಾಂಧಿ ಭವನದಿಂದ ಬೃಹತ್‌ ಪ್ರತಿಭಟನಾ ಮೆರವಣಿಗೆ ಆರಂಭಿಸಿದ ಆಶಾ ಕಾರ್ಯಕರ್ತೆಯರು ನಗರದ ಪ್ರಮುಖ ಬೀದಿಗಳಲ್ಲಿ ಸಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಆವರಣದಲ್ಲಿ ಕೆಲಹೊತ್ತು ಧರಣಿ ನಡೆಸಿದರು. ನಂತರ
ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಆರೋಗ್ಯ ಇಲಾಖೆಯಡಿ ಗ್ರಾಮೀಣ ಸೇರಿದಂತೆ ನಗರ ಪ್ರದೇಶಗಳಲ್ಲೂ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು, ಸರಕಾರದ ಸೇವೆಗಳನ್ನು ಸಾರ್ವಜನಿಕರಿಗೆ ತಲುಪಿಸುವಲ್ಲಿ ಯಶಸ್ವಿಯಾಗಿದ್ದಾರೆ. ರಾಜ್ಯ ಸರ್ಕಾರ 3500 ರೂ. ಗೌರವಧನ ನೀಡುತ್ತಿದ್ದು, ಕೇಂದ್ರ ಸರ್ಕಾರ ಕೆಲಸಕ್ಕೆ ತಕ್ಕಷ್ಟು ಪ್ರೋತ್ಸಾಹಧನ ನೀಡುತ್ತಿದೆ. ಆದರೆ, ಖಜಾನೆ-2ರಲ್ಲಿ ಬಾಕಿಯಿದ್ದ 6 ತಿಂಗಳ ವೇತನದಲ್ಲಿ ಈಚೆಗೆ ನಾಲ್ಕು ತಿಂಗಳ ವೇತನ ಪಾವತಿಯಾಗಿದೆ. ಇನ್ನುಳಿದ ಎರಡು ತಿಂಗಳ ವೇತನ ಬಾಕಿ ಉಳಿದಿದೆ. ಇನ್ನು ಕೇಂದ್ರ ಸರ್ಕಾರದ ಪ್ರೋತ್ಸಾಹಧನ ದುಡಿದಷ್ಟು ಕೈಗೆ ಸಿಗುತ್ತಿಲ್ಲ. ಆರ್‌ಸಿಎಚ್‌ ಹೊಸ ಪೋರ್ಟಲ್‌ ಜಾರಿಯಾಗಿದ್ದರಿಂದ ಕಳೆದ ಮೂರು ತಿಂಗಳಿಂದ ಆಶಾ ಸೇವೆಗಳು ಎಂಸಿಟಿಎಸ್‌ನಲ್ಲಿ ಸರಿಯಾಗಿ ದಾಖಲಾಗಿಲ್ಲ. ಒಂದೇ ಸಮನೆ ಮೂರ್‍ನಾಲ್ಕು ತಿಂಗಳುಗಳ ಸೇವೆಗಳನ್ನು ದಾಖಲು ಮಾಡುವುದರಿಂದ ಕೆಲವೊಂದು ಸಮಸ್ಯೆಯಾಗುತ್ತಿದ್ದು, ಇದರಿಂದ ಆಶಾ ಕಾರ್ಯಕರ್ತೆಯರಿಗೆ ದುಡಿದಷ್ಟು ಪ್ರೋತ್ಸಾಹಧನ ಕೈಗೆ ಸೇರುತ್ತಿಲ್ಲ. ಇಂಥ ಸಮಸ್ಯೆಗಳ ನಿವಾರಣೆಗೆ ಸೂಕ್ತ ಪರಿಹಾರ ಕಂಡುಕೊಳ್ಳಬೇಕು ಎಂದು
ಪ್ರತಿಭಟನಾಕಾರರು ಆಗ್ರಹಿಸಿದರು.

ಆಶಾ ಕಾರ್ಯಕರ್ತೆಯರ ರಾಜ್ಯದ ನಿಗದಿತ ವೇತನ, ಕೇಂದ್ರದ ಪ್ರೋತ್ಸಾಹಧನ ಕೂಡಲೇ ಬಿಡುಗಡೆಗೊಳಿಸಬೇಕು. ಪ್ರತಿ ತಿಂಗಳು ನಿಗದಿತ ದಿನಾಂಕದೊಳಗಾಗಿ ಖಾತೆಗೆ ಪಾವತಿಯಾಗಬೇಕು. ಆಶಾ ಸಾಫ್ಟ್‌ (ಆಶಾನಿಧಿ) ಅಥವಾ ಆರ್‌ಸಿಎಚ್‌ ಪೋರ್ಟಲ್‌ ನೋಂದಣಿಗೆ ಆಶಾ ವೇತನ ಲಿಂಕ್‌ ಮಾಡಿರುವುದನ್ನು ಕೈ ಬಿಡಬೇಕು. ಆಶಾ ಕಾರ್ಯಕರ್ತೆಯರು ನಿರ್ವಹಿಸಿದ್ದ ಎಲ್ಲ ಕೆಲಸಗಳಿಗೂ ಸಂಪೂರ್ಣ ಪ್ರೋತ್ಸಾಹಧನ
ನೀಡಬೇಕು. ಪ್ರೋತ್ಸಾಹಧನವಿಲ್ಲದ ಲಾರ್ವಾ, ಕುಷ್ಟರೋಗ, ಐಯೋಡಿನ್‌ ಸೇರಿದಂತೆ ವಿವಿಧ ಸರ್ವೇಗಳಿಗೆ ದಿನಕ್ಕೆ 200 ರೂ. ಪ್ರೋತ್ಸಾಹಧನ ನಿಗದಿಪಡಿಸಬೇಕು. ಜಿಪಂ ಸಿಇಒ ಅಧ್ಯಕ್ಷತೆಯಲ್ಲಿ ಕುಂದುಕೊರತೆ ಸಮಿತಿ ರಚಿಸಿ, ಪ್ರತಿ ತಿಂಗಳಿಗೊಮ್ಮೆ ಸಭೆ ನಡೆಸಬೇಕು. ತಾಲೂಕು ಆರೋಗ್ಯ
ಕೇಂದ್ರಗಳಲ್ಲಿ ಮೂಲ ಸೌಲಭ್ಯ ಕಲ್ಪಿಸಬೇಕು. ವಿಶ್ರಾಂತಿ ಕೊಠಡಿಗಳನ್ನು ಒದಗಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದರು.

ಸಂಘದ ಡಿ.ನಾಗಲಕ್ಷ್ಮೀ, ಎ.ಶಾಂತಾ, ಜಿಲ್ಲಾಧ್ಯಕ್ಷೆ ವೀರಮ್ಮ, ಜಿಲ್ಲಾ ಕಾರ್ಯದರ್ಶಿ ಗೀತಮ್ಮ, ಎಐಯುಟಿಯುಸಿ ರಾಜ್ಯ ಕಾರ್ಯದರ್ಶಿ ಕೆ.ಸೋಮಸೇಖರ್‌, ಎಸ್‌ಯುಸಿಐಸಿ ಜಿಲ್ಲಾ ಕಾರ್ಯದರ್ಶಿ ರಾಧಾಕೃಷ್ಣಾ ಉಪಾಧ್ಯ, ಮಂಜುಳಾ, ಎ.ದೇವದಾಸ್‌, ಗೌರಮ್ಮ, ಲಕ್ಷೀ¾ದೇವಿ,
ಚನ್ನಮ್ಮ, ಶಶಿಕಲಾ, ಮಂಗಳಾ, ನೇತ್ರಾವತಿ, ಭುವನೇಶ್ವರಿ, ಅನಂತಲಕ್ಷ್ಮೀ, ಯಲ್ಲಮ್ಮ, ಜಲಜಾಕ್ಷ್ಮೀ, ಬಸಮ್ಮ, ರಾಜೇಶ್ವರಿ, ಅಂಬಿಕಾ, ಕಮಲ, ಜ್ಯೋತಿ, ಸುರೇಶ್‌, ಈಶ್ವರಿ ಸೇರಿದಂತೆ ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.