ರಮೇಶ ವರ್ಗಾವಣೆ ತಡೆಹಿಡಿಯಲು ಮನವಿ
Team Udayavani, Feb 11, 2020, 1:59 PM IST
ಹೊಸಪೇಟೆ: ಪೌರಾಯುಕ್ತ ರಮೇಶ್ ಹೊಸಪೇಟೆ ನಗರಸಭೆಗೆ ವರ್ಗಾವಣೆಯಾಗಿ ಬರುವುದನ್ನು ತಡೆಯಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಘಟಕದ ಕಾರ್ಯಕರ್ತರು, ತಹಶೀಲ್ದಾರ್ ಎಚ್. ವಿಶ್ವನಾಥ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.
ಈ ಹಿಂದೆ ಹೊಸಪೇಟೆ ನಗರಸಭೆಯಲ್ಲಿ ಪೌರಾಯುಕ್ತರಾಗಿದ್ದ ರಮೇಶ ಅವರ ಅಧಿಕಾರ ಅವಧಿಯಲ್ಲಿ ಫಾರಂ-3 ಪಡೆಯಲು ಸಾರ್ವಜನಿಕರು, ತಿಂಗಳುಗಟ್ಟಲೆ ಅಲೆದಾಡುತ್ತಿದ್ದರು. ಮತ್ತೆ ರಮೇಶ ಅವರು ಹೊಸಪೇಟೆ ನಗರಸಭೆಗೆ ವರ್ಗವಣೆಯಾಗಿ ಬರುತ್ತಿದ್ದಾರೆ ಎಂಬ ಮಾಹಿತಿ ಬಂದಿದ್ದು, ಅವರು ಪುನಃ ಹೊಸಪೇಟೆ ನಗರಸಭೆಗೆ ವರ್ಗಾವಣೆಯಾಗಿ ಬರುವುದು ಬೇಡ. ಸಾರ್ವಜನಿಕರ ಅನುಕೂಲಕ್ಕಾಗಿ ಪ್ರಮಾಣಿಕ ಹಾಗೂ ನಿಷ್ಠಾವಂತ ಅಧಿಕಾರಿಗಳನ್ನು ಹೊಸಪೇಟೆ ನಗರಸಭೆಗೆ ಕರೆ ತರಬೇಕು ಎಂದು ಒತ್ತಾಯಿಸಿದರು. ಒಂದೊಮ್ಮೆ ನಿರ್ಲಕ್ಷ್ಯವಹಿಸಿದರೆ ಕರವೇ ಉಗ್ರ ಹೋರಾಟ ಮಾಡಲಿದೆ ಎಂದು ಎಚ್ಚರಿಸಿದರು.
ತಾಲೂಕು ಅಧ್ಯಕ್ಷ ತಾರಿಹಳ್ಳಿ ಹನುಮಂತಪ್ಪ, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ, ನಗರ ಘಟಕದ ಅಧ್ಯಕ್ಷ ಎಸ್.ಎಂ. ಜಾಫರ್, ಅಮೀರ್, ಬಸವರಾಜ, ಮಂಜುನಾಥ, ಗುಜ್ಜಲ ರಾಘವೇಂದ್ರ, ಭೀಮಣ್ಣ, ಬ್ಯಾಲಕುಂದಿ ರಮೇಶ, ಶಮಾ, ಸುಮಾ, ಚೆನ್ನಮ್ಮ, ಗಂಗಮ್ಮ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ