ನರೇಗಾ ಕೆಲಸದ ಅವಧಿ ಹೆಚ್ಚಳ ಹಿಂಪಡೆಯಿರಿ

ಬೆಳಗ್ಗಿನ ಅವಧಿಯಲ್ಲಿ ಮಾತ್ರ ಕೆಲಸ ಮಾಡಿಸಲು ಅಖೀಲ ಭಾರತ ರೈತ, ಕೃಷಿ ಕಾರ್ಮಿಕರ ಸಂಘಟನೆ ಒತ್ತಾಯ

Team Udayavani, Apr 7, 2022, 1:32 PM IST

ballary

ಬಳ್ಳಾರಿ: ನರೇಗಾ ಕೆಲಸದ ಅವಧಿ ಹೆಚ್ಚಳ ಹಿಂಪಡೆಯಬೇಕು. ಕೆಲಸವನ್ನು 200 ದಿನಗಳಿಗೆ ಹೆಚ್ಚಿಸಿ ಕೂಲಿಯನ್ನು 600 ರೂಗೆ ನಿಗದಿಪಡಿಸಬೇಕೆಂದು ಆಗ್ರಹಿಸಿ ನಗರದ ಜಿಪಂ ಕಚೇರಿ ಆವರಣದಲ್ಲಿ ಅಖೀಲ ಭಾರತ ರೈತ, ಕೃಷಿ ಕಾರ್ಮಿಕರ ಸಂಘಟನೆಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.

ಬೇಸಿಗೆ ದಿನಗಳಲ್ಲಿ ವ್ಯವಸಾಯ ಚಟುವಟಿಕೆ ಸ್ಥಗಿತಗೊಳ್ಳುವುದರಿಂದ ನರೇಗಾ ಯೋಜನೆ ಅಡಿಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಹತ್ತಾರು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತದೆ. ಈ ಯೋಜನೆಯಡಿ ಜನತೆಗೆ ಉಪಯುಕ್ತವಾಗುವ ಶ್ರಮಾಧಾರಿತ ಕಾಮಗಾರಿಗಳನ್ನು ಹಾಗೂ ಗ್ರಾಮಕ್ಕೆ ಉಪಯುಕ್ತವಾಗುವ ಕಾಮಗಾರಿಗಳಾದ ಹೊಲಗಳಿಗೆ ಹೋಗಲು ರಸ್ತೆ ಇಲ್ಲದಕಡೆ ರಸ್ತೆ ನಿರ್ಮಾಣ, ಕೆರೆ ನಿರ್ಮಾಣ, ಕೃಷಿ ಹೊಂಡಗಳ ನಿರ್ಮಾಣ, ಕಾಲುವೆ ದುರಸ್ತಿ ಕಾಮಗಾರಿಗಳು, ಮರ-ಗಿಡಗಳನ್ನು ನೆಡುವ ಕಾರ್ಯಕ್ರಮಗಳನ್ನು ಹಾಕಿಕೊಳ್ಳಲಾಗುತ್ತದೆ. ಆದರೆ, ಅಗತ್ಯ ವಸ್ತುಗಳ ಬೆಲೆಗಳು ದುಬಾರಿಯಾಗಿರುವುದರಿಂದ ನರೇಗಾ ಕೂಲಿಯನ್ನು ಅದಕ್ಕನುಗುಣವಾಗಿ ಹೆಚ್ಚಿಸುವ ಅಗತ್ಯವಿದ್ದು, ಬಳ್ಳಾರಿ ಜಿಲ್ಲೆಯಲ್ಲಿ ಬೇಸಿಗೆ ಬಿಸಿಲಿನ ತಾಪ ಹೆಚ್ಚಿರುವುದರಿಂದ ಬೆಳಗಿನ ಅವ ಧಿಯಲ್ಲಿ ಮಾತ್ರ ಕೆಲಸ ಮಾಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಅಗತ್ಯ ವಸ್ತುಗಳ ಬೆಲೆಗಳು ಹೆಚ್ಚಾಗಿರುವುದರಿಂದ ನರೇಗಾ ದಿನಗೂಲಿಯನ್ನು 600 ರೂಗಳಿಗೆ ಹೆಚ್ಚಿಸಬೇಕು. ಗ್ರಾಮೀಣ ಭಾಗದಲ್ಲಿ ಉದ್ಯೋಗಾವಕಾಶಗಳು ಅಲ್ಪವಾಗಿರುವುದರಿಂದ ವರ್ಷಕ್ಕೆ 200 ದಿನಗಳ ಕಾಲ ಉದ್ಯೋಗ ನೀಡಬೇಕು. ಶ್ರಮಾಧಾರಿತ ಹಾಗೂ ಗ್ರಾಮಕ್ಕೆ ಉಪಯುಕ್ತವಾಗುವ ಕಾಮಗಾರಿಗಳನ್ನು ಕೈಗೊಳ್ಳಬೇಕು. ಬಳ್ಳಾರಿ ಜಿಲ್ಲೆಯಲ್ಲಿ ಬಿಸಿಲಿನ ತಾಪ ಹೆಚ್ಚಾಗಿರುವುದರಿಂದ ಈ ಮೊದಲಿನಂತೆ ಕೆಲಸ ಅವಧಿಯನ್ನು ಬೆಳಗಿನ ಅವಧಿಗೆ ಸೀಮಿತಿಗೊಳಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಬಳಿಕ ಜಿಲ್ಲಾ ಪಂಚಾಯತ್‌ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಎ.ದೇವದಾಸ್‌, ಜಿಲ್ಲಾ ಕಾರ್ಯದರ್ಶಿ ಹನುಮಂತಪ್ಪ, ಜಿಲ್ಲಾ ಮುಖಂಡ ಗೋವಿಂದ್‌, ಬಸಣ್ಣ ಕೋಳೂರು, ಕೋಳೂರು ಪಂಪಾಪತಿ, ಕೋಳೂರು ಕೆ.ಲಿಂಗಪ್ಪ, ಬಾಬು, ಶೇಖರ್‌, ಹೇಮಣ್ಣ, ಹನುಮಂತ, ಕಲ್ಲುಕಂಭ ಪಂಪಣ್ಣ, ಶಿವಗಂಗಮ್ಮ, ಚನ್ನಮ್ಮ, ನೂರಾರು ಉದ್ಯೋಗ ಖಾತ್ರಿ ಕೂಲಿ ಕಾರ್ಮಿಕರು ಇದ್ದರು.

ಟಾಪ್ ನ್ಯೂಸ್

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.