ಬೇಡಿಕೆ ಈಡೇರಿಕೆಗಾಗಿ ರಸ್ತೆ ತಡೆ
ಆಟೋ ಚಾಲಕರ ಸಂಘಗಳ ನೇತೃತ್ವದಲ್ಲಿ ಪ್ರತಿಭಟನೆ
Team Udayavani, Jul 16, 2019, 11:11 AM IST
ಹೊಸಪೇಟೆ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ಸಂಯೋಜಿತ ಆಟೋ ಸಂಘ ಮತ್ತು ವಿಜಯನಗರ ಆಟೋ ಚಾಲಕರ ಸಂಘ ಹಾಗೂ ತುಂಗಭದ್ರಾ ಆಟೋ ಚಾಲಕರ ಸಂಘಗಳ ನೇತೃತ್ವದಲ್ಲಿ ನಗರದ ರೋಟರಿ ವೃತ್ತದ ರಸ್ತೆ ತಡೆದು ಪ್ರತಿಭಟನೆ ನಡೆಸಿತು.
ಹೊಸಪೇಟೆ: ಅಟೋ ಚಾಲಕರ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಿಐಟಿಯು ಸಂಯೋಜಿತ ಆಟೋ ಸಂಘ ಮತ್ತು ವಿಜಯನಗರ ಆಟೋ ಚಾಲಕರ ಸಂಘ ಹಾಗೂ ತುಂಗಭದ್ರಾ ಆಟೋ ಚಾಲಕರ ಸಂಘಗಳ ನೇತೃತ್ವದಲ್ಲಿ ನೂರಾರು ಆಟೋ ಚಾಲಕರು ಸೋಮವಾರ ನಗರದ ರೋಟರಿ ವೃತ್ತದ ರಸ್ತೆ ತಡೆದು ಪ್ರತಿಭಟನೆ ಮಾಡಿದರು.
15 ವರ್ಷದ ವಾಹನಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ. ಇದರಿಂದ ಬಡ ಆಟೋ ಚಾಲಕ ಹಾಗು ಮಾಲೀಕರಿಗೆ ವಿಪರೀತ ತೊಂದರೆಯಾಗುತ್ತಿದೆ. ಕಾರಣ ಹೊಸ ಆಟೋ ಖರೀದಿಗೆ ಹಣಕಾಸಿನ ನೆರವು ನೀಡಬೇಕು, ಆಟೋ ರಿಕ್ಷಾಗಳ ಮೇಲಿನ ವಿಮೆ ದರವನ್ನು ಕಡಿತ ಮಾಡಬೇಕು. ಚಾಲಕರಿಗೆ ನಗರಸಭೆ ವತಿಯಿಂದ ಎಸ್ಸಿ-ಎಸ್ಟಿ ನಿಗಮ ಹಾಗೂ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಬ್ಯಾಂಕ್ಗಳಲ್ಲಿ ಸಾಲ ಸೌಲಭ್ಯ ನೀಡಲು ಕ್ರಮ ವಹಿಸಬೇಕು. ಸುಪ್ರೀಂ ಕೋರ್ಟ್ನ ಆದೇಶದಂತೆ 7500 ಕೆಜಿ ತೂಕದ ವಾಹನಗಳಿಗೆ ಲೈಸೆನ್ಸ್ ಬ್ಯಾಡ್ಜ್ ಕಡ್ಡಾಯ ಇರುವುದಿಲ್ಲ. ರಾಜ್ಯದಲ್ಲೂ ಈ ನೀತಿ ಜಾರಿಯಾಗಬೇಕು ಎಂಬ ಬೇಡಿಕೆಗಳಿಗೆ ಪ್ರಧಾನಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಎಚ್.ವಿಶ್ವನಾಥ ಅವರಿಗೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಆಟೋ ಚಾಲಕರ ಮುಖಂಡರಾದ ಕೃಷ್ಣ, ಸಂತೋಷ, ಗೋಪಾಲ, ರಾಮಚಂದ್ರ, ಭಾಸ್ಕರ್ ರೆಡ್ಡಿ, ಈ. ಸಿದ್ಧಲಿಂಗ, ಬಸವರಾಜ, ಚಂದ್ರಶೇಖರ್, ಶ್ರೀನಿವಾಸ್ ಸೇರಿದಂತೆ ನೂರಾರು ಅಟೋಚಾಲಕರು ಪ್ರತಿಭಟನೆಯಲ್ಲಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ
Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು
Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ