ರಸ್ತೆ ಸುರಕ್ಷತಾ ನಿಯಮ ಪಾಲಿಸಿ: ಬಾಷಾ


Team Udayavani, Feb 16, 2019, 11:14 AM IST

bell-2.jpg

ಹೊಸಪೇಟೆ: ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲನೆಯಿಂದ ಅಪಘಾತಗಳು ಕಡಿಮೆಯಾಗಿ ಅಮೂಲ್ಯ  ಜೀವಗಳು ಉಳಿಯಲಿವೆ ಎಂದು ಆರ್‌ಟಿಒ ನೂರ್‌ ಮಹಮ್ಮದ್‌ ಬಾಷಾ ಹೇಳಿದರು. ನಗರದ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಆವರಣದಲ್ಲಿ 30ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ-2019 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸುರಕ್ಷತಾ ಸಾಧನಗಳಾದ ಹೆಲ್ಮೆಟ್‌, ಸೀಟ್‌ ಬೆಲ್ಟ್‌ಗಳನ್ನು ಧರಿಸಬೇಕು. ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಬೇಕು. ಇದರಿಂದ ನಮ್ಮ ಜೀವವನ್ನು ನಾವೇ ಕಾಪಾಡಿಕೊಂಡಂತಾಗುತ್ತದೆ. ರಸ್ತೆಗಳಲ್ಲಿ ಅಳವಡಿಸಿದ ಸೂಚನಾ ಫ‌ಲಕಗಳನ್ನು ಗಮನಿಸಿ ವಾಹನ ಓಡಿಸಬೇಕು.
ರಸ್ತೆಗಳಲ್ಲಿ ವಾಹನ ಚಲಾಯಿಸುವ ಪ್ರತಿಯೊಬ್ಬರಿಗೂ ಸುರಕ್ಷತಾ ಕ್ರಮಗಳು, ನಿಯಮಗಳ ಪಾಲನೆ ಯಿಂದ ಅಪಘಾತ ತಡೆಯಲು ಸಾಧ್ಯವಿದೆ ಎಂದರು.

ಟ್ರಾಫಿಕ್‌ ಸಿಪಿಐ ಅಯ್ಯನಗೌಡ ವಿ.ಪಾಟೀಲ್‌ ಮಾತನಾಡಿ, ಬೈಕ್‌ ಸವಾರರು ಕಡ್ಡಾಯವಾಗಿ ಹೆಲ್ಮೆಟ್‌ ಧರಿಸಬೇಕು. ಕಾರಿನಲ್ಲಿ ಪ್ರಯಾಣಿಸುವವರು ಸೀಟ್‌ ಬೆಲ್ಟ್  ಕಿಕೊಳ್ಳಬೇಕು. ಅಲ್ಲದೆ, ವಾಹನವನ್ನು ನಿಧಾನವಾಗಿ ಚಲಾಯಿಸುವ ಮೂಲಕ ಜೀವ ರಕ್ಷಣೆಗೆ ಒತ್ತು ನೀಡಬೇಕು. ಜಿಲ್ಲೆಯಲ್ಲಿ ಪ್ರತಿವರ್ಷ 200ಕ್ಕೂ ಅಧಿಕ ಜನರು ಅಪಘಾತದಲ್ಲಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು. ಪರಿಸರವಾದಿ, ನಿವೃತ್ತ ಮುಖ್ಯಶಿಕ್ಷಕ ಪಿ.ಪ್ರಭಾಕರ್‌, ಕ್ಷೇತ್ರ ಸಮನ್ವಯಾಧಿಕಾರಿ ಗುರುರಾಜ್‌ ಮಾತನಾಡಿದರು. ಪ್ರಾದೇಶಿಕ ಸಾರಿಗೆ ಕಚೇರಿಯ ಎಫ್ಡಿಎ ಶ್ರೀಧರ್‌ ನಿರ್ಮಿಸಿರುವ ರಸ್ತೆ ಸುರಕ್ಷತಾ ಕ್ರಮಗಳ ಸಾಕ್ಷ್ಯಾ ಚಿತ್ರವನ್ನು ಪ್ರೊಜೆಕ್ಟರ್‌ ಮೂಲಕ ಪ್ರದರ್ಶಿಸಲಾಯಿತು. ಕಚೇರಿಯ ಅಧೀಕ್ಷಕ ಅಡವೀಶ್ವರ ಗೌಡ, ಮೋಟಾರ್‌ ವಾಹನ ನಿರೀಕ್ಷಕರು ಇದ್ದರು. 

ಹೆಲ್ಮೆಟ್‌ ಜನಜಾಗೃತಿಗೆ ಡಿವೈಎಸ್‌ಪಿ ಚಾಲನೆ
ಬಳ್ಳಾರಿ: ನಗರದ ತಾಲೂಕು ಕಚೇರಿ ಆವರಣದಲ್ಲಿರುವ ಗ್ರಾಮೀಣ ಪೊಲೀಸ್‌ ಠಾಣೆಯ ಆವರಣದಲ್ಲಿ ದ್ವಿಚಕ್ರ ವಾಹನದ ಹೆಲ್ಮೆಟ್‌ ಜಾಗೃತಿಗೆ ಬಳ್ಳಾರಿ ಗ್ರಾಮೀಣ ಠಾಣೆಯ ಡಿವೈಎಸ್‌ಪಿ ಅರುಣ್‌ ಕುಮಾರ್‌ ಕೋಳೂರು ಚಾಲನೆ ನೀಡಿದರು. 

ಬಳಿಕ ಮಾತನಾಡಿದ ಅವರು, ಸವಾರರು ಬೈಕ್‌ ಚಾಲನೆ ಮಾಡುವಾಗ ಹೆಲ್ಮೆಟ್‌ ಧರಿಸಿ, ಸಂಚಾರಿ ನಿಯಮಗಳನ್ನು ಪಾಲಿಸಬೇಕು. ಇದರಿಂದ ಪ್ರತ್ಯೇಕ್ಷ ಹಾಗೂ ಪರೋಕ್ಷವಾಗಿ ಅಪಘಾತ ಹಾಗೂ ಅನಾಹುತಗಳನ್ನು ತಪ್ಪಿಸಬಹುದು. ದ್ವಿಚಕ್ರವಾಹನ ಪರವಾನಗಿ ಪಡೆದು ವಾಹನವನ್ನು ಚಲಾಯಿಸಬೇಕು ಎಂದರು.

‘ಹೆಲ್ಮಟ್‌ ಧರಿಸಿ ಜೀವ ಉಳಿಸಿ’, ‘ವಾಹನ ಚಾಲನೆ ಮಾಡುವಾಗ ಮೊಬೈಲ್‌ ಬಳಸದಿರಿ’, ‘ಸಂಚಾರಿ ನಿಯಮ ಪಾಲಿಸಿ’ ಎಂಬ ನಾಮಫಲಕ ಹಿಡಿದು ನಗರದ ವಿವಿಧ ರಸ್ತೆಗಳಲ್ಲಿ ದ್ವಿಚಕ್ರ ವಾಹನದ ಮೂಲಕ ಜಾಗೃತಿ ಮೂಡಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮೀಣ ಪೊಲೀಸ್‌ ಠಾಣೆಯ ಅಧಿಕಾರಿಗಳು ಇನ್ನಿತರರಿದ್ದರು. 

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.