ರಸ್ತೆಗಿಳಿವ ವಾಹನ ಅಂದರ್‌


Team Udayavani, Mar 30, 2020, 11:58 AM IST

ರಸ್ತೆಗಿಳಿವ ವಾಹನ ಅಂದರ್‌

ಸಾಂದರ್ಭಿಕ ಚಿತ್ರ

ಬಳ್ಳಾರಿ: ಕೋವಿಡ್ 19 ವೈರಸ್‌ ನಿಯಂತ್ರಣಕ್ಕಾಗಿ ದೇಶಾದ್ಯಂತ ಲಾಕ್‌ಡೌನ್‌ ವಿಧಿ ಸಿದ್ದರೂ, ವಿನಾಕಾರಣ ರಸ್ತೆಗಳಲ್ಲಿ ಸಂಚರಿಸುತ್ತಿರುವ ವಾಹನ ಸವಾರರ ಮೇಲೆ ಪೊಲೀಸರು ಹೊಸ ಅಸ್ತ್ರವನ್ನು ವಿಧಿಸುತ್ತಿದ್ದು, ವಾಹನಗಳನ್ನು ವಶಕ್ಕೆ ಪಡೆದು, ಸವಾರರನ್ನು ಕಾಲ್ನಡಿಗೆ ಮೂಲಕ ಕಳುಹಿಸುತ್ತಿದ್ದಾರೆ. ಜತೆಗೆ ನಗರದ ಪ್ರಮುಖ ವೃತ್ತಗಳನ್ನೆಲ್ಲ ಕಟ್ಟಿಗೆಗಳಿಂದ ಕಟ್ಟಿ ಸಂಪೂರ್ಣವಾಗಿ ಲಾಕ್‌ ಮಾಡಲಾಗುತ್ತಿದೆ.

ಕೋವಿಡ್ 19 ವೈರಸ್‌ ದೇಶದಲ್ಲಿ ವ್ಯಾಪಕವಾಗಿ ಹರಡುತ್ತಿದ್ದು, ಮೂರನೇ ಹಂತ ತಲುಪಲು ಹತ್ತಿರದಲ್ಲಿದೆ. ಇದನ್ನು ನಿಯಂತ್ರಿಸುವ ಸಲುವಾಗಿ ಕೇಂದ್ರ ಸರ್ಕಾರ ಕಳೆದ ವಾರವೇ ದೇಶಾದ್ಯಂತ ಲಾಕ್‌ ಡೌನ್‌ ಮಾಡಿ ಆದೇಶ ಹೊರಡಿಸಿದೆ. ಸಾರ್ವಜನಿಕರು ಹೊರಬರದೆ ಮನೆಯಲ್ಲೇ ಇರುವಂತೆ ನಿರ್ಬಂಧ ಹೇರಲಾಗಿದೆ. ಮೇಲಾಗಿ ಅಗತ್ಯ ವಸ್ತುಗಳಾದ ತರಕಾರಿ, ರೇಷನ್‌, ಪೆಟ್ರೋಲ್‌ ಇತರೆ ವಸ್ತುಗಳನ್ನು ಖರೀದಿಸಲು ಅವಕಾಶ ಕಲ್ಪಿಸಿ, ಸಮಯವನ್ನೂ ನಿಗದಿಪಡಿಸಲಾಗಿದೆ. ಆದರೂ, ಜನರು, ಯುವಕರು ಮನೆಗಳಲ್ಲೇ ಉಳಿಯದೆ ವಿನಾಕಾರಣ ಹೊರಗಡೆ ಸಂಚರಿಸುತ್ತಿರುವುದು ಕಂಡುಬರುತ್ತಿದೆ.

ಹೀಗಾಗಿ ಇದನ್ನು ಸಂಪೂರ್ಣವಾಗಿ ನಿಯಂತ್ರಿಸಲು ಮುಂದಾಗಿರುವ ಪೊಲೀಸ್‌ ಇಲಾಖೆ ಹೊಸ ಅಸ್ತ್ರವನ್ನು ಬಳಸಿದ್ದು, ಬೆಳಗ್ಗೆ 10 ಗಂಟೆ ನಂತರ ರಸ್ತೆಗಳಲ್ಲಿ ದ್ವಿಚಕ್ರ ವಾಹನಗಳು ಕಂಡುಬಂದಲ್ಲಿ ವಾಹನಗಳನ್ನು ವಶಕ್ಕೆ ಪಡೆದು ಅಲ್ಲಿಂದಲೇ ಕಾಲ್ನಡಿಗೆ ಮೂಲಕ ಮನೆಗೆ ಕಳುಹಿಸಲಾಗುತ್ತದೆ. ಹಳೆ ಚಾಳಿಗೆ ಅಭ್ಯಾಸ ಬಿದ್ದ ಜನರು ಕೂಡಲೇ ಬದಲಾವಣೆಯಾಗಬೇಕಾದರೆ ಸ್ವಲ್ಪ ಸಮಯ ಬೇಕಾಗಲಿದೆ. ಹೀಗಾಗಿ ಲಾಕ್‌ಡೌನ್‌ ಆದೇಶ ಜಾರಿಯಾಗಿ ನಾಲ್ಕೈದು ದಿನಗಳು ಕಳೆದರೂ ಜನರು ಅನಾವಶ್ಯಕವಾಗಿ ತಿರುಗಾಡುವುದನ್ನು ನಿಲ್ಲಿಸಿಲ್ಲ.

ಹೀಗಾಗಿ ಲಾಕ್‌ಡೌನ್‌ ಆದೇಶವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಜಾರಿ ಗೊಳಿಸುವ ಸಲುವಾಗಿ ವಾಹನಗಳನ್ನು ವಶಕ್ಕೆ ಪಡೆಯಲಾಗುತ್ತದೆ. ಅಲ್ಲಿಂದ ಅವರನ್ನು ಕಾಲ್ನಡಿಗೆ ಮೂಲಕ ಮನೆಗೆ ಕಳುಹಿಸಲಾಗುತ್ತದೆ. ಲಾಕ್‌ಡೌನ್‌ ಆದೇಶ ಮುಕ್ತಾಯಗೊಂಡ ಬಳಿಕ ಸವಾರರಿಗೆ ವಾಹನಗಳನ್ನು ನೀಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಶನಿವಾರ ಮತ್ತು ಮತ್ತು ಭಾನುವಾರ ಸೇರಿ 117 ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಎಸ್‌ಪಿ ಸಿ.ಕೆ. ಬಾಬಾ ಸ್ಪಷ್ಟಪಡಿಸಿದರು.

ವೃತ್ತಗಳು ಬಂದ್‌: ಲಾಕ್‌ಡೌನ್‌ ಆದೇಶವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಸಲುವಾಗಿ ನಗರದ ಪ್ರಮುಖ ವೃತ್ತಗಳನ್ನು ಬ್ಯಾರಿಕೇಡ್‌ ಮತ್ತು ಕಟ್ಟಿಗೆಗಳಿಂದ ಕಟ್ಟಿ ಸಂಪೂರ್ಣವಾಗಿ ಬಂದ್‌ ಮಾಡಲಾಗುತ್ತಿದೆ. ನಗರದ ಗಡಗಿ ಚನ್ನಪ್ಪ ವೃತ್ತ, ಎಸ್‌ಪಿ ವೃತ್ತಗಳಲ್ಲಿನ ನಾಲ್ಕು ದಿಕ್ಕುಗಳಲ್ಲಿನ ರಸ್ತೆಗಳು, ಬೆಂಗಳೂರು ರಸ್ತೆ ಸೇರಿ ಇನ್ನಿತರೆ ರಸ್ತೆಗಳನ್ನು ಬ್ಯಾರಿಕೇಡ್‌ ಮತ್ತು ಕಟ್ಟಿಗೆಗಳಿಂದ ಕಟ್ಟಿ ಬಂದ್‌ ಮಾಡಲಾಗಿದ್ದು, ಯಾವುದೇ ವಾಹನ ಸೇರಿ ಜನರು ಸಹ ಸಂಚರಿಸದಂತೆ ನಿರ್ಬಂಧ ಹೇರಲಾಗಿದೆ. ಜತೆಗೆ ಕೋವಿಡ್ 19  ವೈರಸ್‌ ಶಂಕಿತರನ್ನು ಗೃಹಬಂಧನದಲ್ಲಿರಿಸಿರುವ ಬಡಾವಣೆಗಳ ಪ್ರಮುಖ ರಸ್ತೆಗಳನ್ನು ಸಹ ಸಂಪೂರ್ಣ ಬಂದ್‌ ಮಾಡಲಾಗಿದೆ ಎಂದವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

bellary

Bellary: ತಡರಾತ್ರಿ ಸರಣಿ ಕಳ್ಳತನ; ಎಂಟು ಮನೆಗಳಿಗೆ ನುಗ್ಗಿದ ಕಳ್ಳರು

ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

Bellary; ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.