ರಸ್ತೆಗಿಳಿವ ವಾಹನ ಅಂದರ್‌


Team Udayavani, Mar 30, 2020, 11:58 AM IST

ರಸ್ತೆಗಿಳಿವ ವಾಹನ ಅಂದರ್‌

ಸಾಂದರ್ಭಿಕ ಚಿತ್ರ

ಬಳ್ಳಾರಿ: ಕೋವಿಡ್ 19 ವೈರಸ್‌ ನಿಯಂತ್ರಣಕ್ಕಾಗಿ ದೇಶಾದ್ಯಂತ ಲಾಕ್‌ಡೌನ್‌ ವಿಧಿ ಸಿದ್ದರೂ, ವಿನಾಕಾರಣ ರಸ್ತೆಗಳಲ್ಲಿ ಸಂಚರಿಸುತ್ತಿರುವ ವಾಹನ ಸವಾರರ ಮೇಲೆ ಪೊಲೀಸರು ಹೊಸ ಅಸ್ತ್ರವನ್ನು ವಿಧಿಸುತ್ತಿದ್ದು, ವಾಹನಗಳನ್ನು ವಶಕ್ಕೆ ಪಡೆದು, ಸವಾರರನ್ನು ಕಾಲ್ನಡಿಗೆ ಮೂಲಕ ಕಳುಹಿಸುತ್ತಿದ್ದಾರೆ. ಜತೆಗೆ ನಗರದ ಪ್ರಮುಖ ವೃತ್ತಗಳನ್ನೆಲ್ಲ ಕಟ್ಟಿಗೆಗಳಿಂದ ಕಟ್ಟಿ ಸಂಪೂರ್ಣವಾಗಿ ಲಾಕ್‌ ಮಾಡಲಾಗುತ್ತಿದೆ.

ಕೋವಿಡ್ 19 ವೈರಸ್‌ ದೇಶದಲ್ಲಿ ವ್ಯಾಪಕವಾಗಿ ಹರಡುತ್ತಿದ್ದು, ಮೂರನೇ ಹಂತ ತಲುಪಲು ಹತ್ತಿರದಲ್ಲಿದೆ. ಇದನ್ನು ನಿಯಂತ್ರಿಸುವ ಸಲುವಾಗಿ ಕೇಂದ್ರ ಸರ್ಕಾರ ಕಳೆದ ವಾರವೇ ದೇಶಾದ್ಯಂತ ಲಾಕ್‌ ಡೌನ್‌ ಮಾಡಿ ಆದೇಶ ಹೊರಡಿಸಿದೆ. ಸಾರ್ವಜನಿಕರು ಹೊರಬರದೆ ಮನೆಯಲ್ಲೇ ಇರುವಂತೆ ನಿರ್ಬಂಧ ಹೇರಲಾಗಿದೆ. ಮೇಲಾಗಿ ಅಗತ್ಯ ವಸ್ತುಗಳಾದ ತರಕಾರಿ, ರೇಷನ್‌, ಪೆಟ್ರೋಲ್‌ ಇತರೆ ವಸ್ತುಗಳನ್ನು ಖರೀದಿಸಲು ಅವಕಾಶ ಕಲ್ಪಿಸಿ, ಸಮಯವನ್ನೂ ನಿಗದಿಪಡಿಸಲಾಗಿದೆ. ಆದರೂ, ಜನರು, ಯುವಕರು ಮನೆಗಳಲ್ಲೇ ಉಳಿಯದೆ ವಿನಾಕಾರಣ ಹೊರಗಡೆ ಸಂಚರಿಸುತ್ತಿರುವುದು ಕಂಡುಬರುತ್ತಿದೆ.

ಹೀಗಾಗಿ ಇದನ್ನು ಸಂಪೂರ್ಣವಾಗಿ ನಿಯಂತ್ರಿಸಲು ಮುಂದಾಗಿರುವ ಪೊಲೀಸ್‌ ಇಲಾಖೆ ಹೊಸ ಅಸ್ತ್ರವನ್ನು ಬಳಸಿದ್ದು, ಬೆಳಗ್ಗೆ 10 ಗಂಟೆ ನಂತರ ರಸ್ತೆಗಳಲ್ಲಿ ದ್ವಿಚಕ್ರ ವಾಹನಗಳು ಕಂಡುಬಂದಲ್ಲಿ ವಾಹನಗಳನ್ನು ವಶಕ್ಕೆ ಪಡೆದು ಅಲ್ಲಿಂದಲೇ ಕಾಲ್ನಡಿಗೆ ಮೂಲಕ ಮನೆಗೆ ಕಳುಹಿಸಲಾಗುತ್ತದೆ. ಹಳೆ ಚಾಳಿಗೆ ಅಭ್ಯಾಸ ಬಿದ್ದ ಜನರು ಕೂಡಲೇ ಬದಲಾವಣೆಯಾಗಬೇಕಾದರೆ ಸ್ವಲ್ಪ ಸಮಯ ಬೇಕಾಗಲಿದೆ. ಹೀಗಾಗಿ ಲಾಕ್‌ಡೌನ್‌ ಆದೇಶ ಜಾರಿಯಾಗಿ ನಾಲ್ಕೈದು ದಿನಗಳು ಕಳೆದರೂ ಜನರು ಅನಾವಶ್ಯಕವಾಗಿ ತಿರುಗಾಡುವುದನ್ನು ನಿಲ್ಲಿಸಿಲ್ಲ.

ಹೀಗಾಗಿ ಲಾಕ್‌ಡೌನ್‌ ಆದೇಶವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಜಾರಿ ಗೊಳಿಸುವ ಸಲುವಾಗಿ ವಾಹನಗಳನ್ನು ವಶಕ್ಕೆ ಪಡೆಯಲಾಗುತ್ತದೆ. ಅಲ್ಲಿಂದ ಅವರನ್ನು ಕಾಲ್ನಡಿಗೆ ಮೂಲಕ ಮನೆಗೆ ಕಳುಹಿಸಲಾಗುತ್ತದೆ. ಲಾಕ್‌ಡೌನ್‌ ಆದೇಶ ಮುಕ್ತಾಯಗೊಂಡ ಬಳಿಕ ಸವಾರರಿಗೆ ವಾಹನಗಳನ್ನು ನೀಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಶನಿವಾರ ಮತ್ತು ಮತ್ತು ಭಾನುವಾರ ಸೇರಿ 117 ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಎಸ್‌ಪಿ ಸಿ.ಕೆ. ಬಾಬಾ ಸ್ಪಷ್ಟಪಡಿಸಿದರು.

ವೃತ್ತಗಳು ಬಂದ್‌: ಲಾಕ್‌ಡೌನ್‌ ಆದೇಶವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಸಲುವಾಗಿ ನಗರದ ಪ್ರಮುಖ ವೃತ್ತಗಳನ್ನು ಬ್ಯಾರಿಕೇಡ್‌ ಮತ್ತು ಕಟ್ಟಿಗೆಗಳಿಂದ ಕಟ್ಟಿ ಸಂಪೂರ್ಣವಾಗಿ ಬಂದ್‌ ಮಾಡಲಾಗುತ್ತಿದೆ. ನಗರದ ಗಡಗಿ ಚನ್ನಪ್ಪ ವೃತ್ತ, ಎಸ್‌ಪಿ ವೃತ್ತಗಳಲ್ಲಿನ ನಾಲ್ಕು ದಿಕ್ಕುಗಳಲ್ಲಿನ ರಸ್ತೆಗಳು, ಬೆಂಗಳೂರು ರಸ್ತೆ ಸೇರಿ ಇನ್ನಿತರೆ ರಸ್ತೆಗಳನ್ನು ಬ್ಯಾರಿಕೇಡ್‌ ಮತ್ತು ಕಟ್ಟಿಗೆಗಳಿಂದ ಕಟ್ಟಿ ಬಂದ್‌ ಮಾಡಲಾಗಿದ್ದು, ಯಾವುದೇ ವಾಹನ ಸೇರಿ ಜನರು ಸಹ ಸಂಚರಿಸದಂತೆ ನಿರ್ಬಂಧ ಹೇರಲಾಗಿದೆ. ಜತೆಗೆ ಕೋವಿಡ್ 19  ವೈರಸ್‌ ಶಂಕಿತರನ್ನು ಗೃಹಬಂಧನದಲ್ಲಿರಿಸಿರುವ ಬಡಾವಣೆಗಳ ಪ್ರಮುಖ ರಸ್ತೆಗಳನ್ನು ಸಹ ಸಂಪೂರ್ಣ ಬಂದ್‌ ಮಾಡಲಾಗಿದೆ ಎಂದವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತುಂಗಭದ್ರಾ ಜಲಾಶಯದಿಂದ ಹೆಚ್ಚುವರಿ ನೀರು ಹರಿವು; ಕಂಪ್ಲಿ-ಗಂಗಾವತಿ ಸಂಪರ್ಕ ಕಡಿತ

Bellary; ತುಂಗಭದ್ರಾ ಜಲಾಶಯದಿಂದ ಹೆಚ್ಚುವರಿ ನೀರು ಹರಿವು; ಕಂಪ್ಲಿ-ಗಂಗಾವತಿ ಸಂಪರ್ಕ ಕಡಿತ

Bellary; ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ

Bellary; ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ

Siruguppa ಕಬ್ಬಿಣದ ಸರಳಿನಿಂದ ಹೊಡೆದ ಪೆಟ್ಟಿಗೆ ಬಾಲಕ ಸಾವು

Siruguppa ಕಬ್ಬಿಣದ ಸರಳಿನಿಂದ ಹೊಡೆದ ಪೆಟ್ಟಿಗೆ ಬಾಲಕ ಸಾವು

Bellary; Indefinite strike by Lorry Owners Association

Bellary; ಲಾರಿ ಮಾಲೀಕರ ಸಂಘದಿಂದ ಅನಿರ್ದಿಷ್ಟಾವಧಿ ಮುಷ್ಕರ

14-siruguppa

Siruguppa: ಅಕ್ರಮ ಗಾಂಜಾ; 2 ದ್ವಿಚಕ್ರ ವಾಹನ ವಶ, 5 ಆರೋಪಿಗಳ ಬಂಧನ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.