ಅಂಗನವಾಡಿ ಕೇಂದ್ರದ ಮೇಲ್ಛಾವಣಿ ಶಿಥಿಲ-ಆತಂಕ


Team Udayavani, Nov 30, 2021, 3:23 PM IST

Untitled-2

ಸಿರುಗುಪ್ಪ: ತಾಲೂಕಿನ ಶಾನವಾಸಪುರ ಗ್ರಾಮದಲ್ಲಿರುವ 2ನೇ ಅಂಗನವಾಡಿ ಕೇಂದ್ರದ ಕಟ್ಟಡದ ಮೇಲ್ಛಾವಣಿ ಅಲ್ಲಲ್ಲಿ ಕುಸಿದು ಬಿದ್ದಿದ್ದು, ಇನ್ನು ಅಲ್ಲಲ್ಲಿ ಇನ್ನೂ ಬೀಳುತ್ತಲೇ ಇದೆ. ಆದರೆ ಅಂಗನವಾಡಿ ಕಾರ್ಯಕರ್ತೆಯರು ತಮ್ಮ ಅಂಗನವಾಡಿ ಕೇಂದ್ರಕ್ಕೆ ಬರುವ ಮಕ್ಕಳನ್ನು ಹೊರಗಡೆ ಕೂಡಿಸಲು ಸಾಧ್ಯವಾಗದೆ ಒಳಗಡೆ ಬೀಳುತ್ತಿರುವ ಕಟ್ಟಡದಲ್ಲಿಯೇ ಮಕ್ಕಳನ್ನು ಕೂಡಿಸಬೇಕಾದ ಅನಿವಾರ್ಯತೆ ನಿರ್ಮಾಣವಾಗಿದೆ.

ಸುಮಾರು 14ವರ್ಷಗಳ ಹಿಂದೆ ಈ ಅಂಗನವಾಡಿ ಕೇಂದ್ರದ ಕಟ್ಟಡವನ್ನು ಕಟ್ಟಲಾಗಿದ್ದು, ಕಟ್ಟಡದ ಮೇಲ್ಛಾವಣಿ ಮೇಲೆ ಬೀಳುವ ಮಳೆನೀರು ಸರಿಯಾಗಿ ಹರಿದು ಹೋಗಲು ವ್ಯವಸ್ಥೆ ಮಾಡಿಲ್ಲದ ಕಾರಣ ಸಣ್ಣ ಮಳೆ ಬಂದರೆ ಸಾಕು ಅಂಗನವಾಡಿ ಕೇಂದ್ರದಲ್ಲಿ ನೀರು ತೊಟ್ಟಿಕ್ಕುತ್ತದೆ. ಕೆಲ ವರ್ಷಗಳಿಂದ ನೀರು ತೊಟ್ಟಿಕ್ಕುತ್ತಿರುವುದರಿಂದ ಮೇಲ್ಛಾವಣಿಗೆ ಅಳವಡಿಸಿದ ಸಿಮೆಂಟ್‌ ಉದುರಿ ಬೀಳುತ್ತಿದ್ದು, ಕಬ್ಬಿಣದ ರಾಡುಗಳು ಕಂಡು ಬರುತ್ತಿವೆ. ಮಳೆನೀರಿನಿಂದಾಗಿ ಕಬ್ಬಿಣದ ರಾಡುಗಳು ಸಹ ತುಕ್ಕು ಹಿಡಿದಿದ್ದು, ಮಳೆಬಂದರೆ ಸಾಕು ಯಾವಾಗ ಬೀಳುತ್ತದೋ ಎನ್ನುವ ಭಯದಲ್ಲಿಯೇ ಅಂಗನವಾಡಿ ಕೇಂದ್ರದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ.

ಒಟ್ಟು 45 ಮಕ್ಕಳು ಈ ಅಂಗನವಾಡಿ ಕೇಂದ್ರಕ್ಕೆ ಬರಲು ನೋಂದಣಿ ಮಾಡಿಸಿದ್ದು 10ರಿಂದ 20 ಜನ ಮಕ್ಕಳು ಪ್ರತಿನಿತ್ಯವೂ ಇಲ್ಲಿಗೆ ಬರುತ್ತಿದ್ದಾರೆ. ಮಕ್ಕಳು ಕುಳಿತುಕೊಳ್ಳುವ ಸ್ಥಳದಲ್ಲಿಯೇ ಆಗಾಗ ಮೇಲ್ಛಾವಣಿಯ ಸಿಮೆಂಟ್‌ ಉದುರಿ ಬೀಳುವುದು ಸಾಮಾನ್ಯವಾಗಿರುತ್ತದೆ. ಆದರೆ ಇಲ್ಲಿಯವರೆಗೆ ಯಾವುದೇ ಮಕ್ಕಳ ಮೇಲೆ ಸಿಮೆಂಟ್‌ ಉದುರಿ ಬಿದ್ದಿಲ್ಲ, ಆದರೆ ಕೊರೊನಾ ಸಮಯದಲ್ಲಿ ಇದೇ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆ ಮತ್ತು ಆರೋಗ್ಯ ಸಿಬ್ಬಂದಿ ಮೇಲೆ ಮೇಲ್ಛಾವಣಿ ಸಿಮೆಂಟ್‌ ಉದುರಿ ಬಿದ್ದಿದ್ದು, ಸಣ್ಣಪುಟ್ಟ ಗಾಯಗಳಾಗಿದ್ದವು. ಮೇಲ್ಛಾವಣಿ ಕುಸಿದು ಬೀಳುವ ಹಂತ ತಲುಪಿದ್ದರೂ ಮೇಲ್ಛಾವಣಿ ರಿಪೇರಿ ಮಾಡಿಸಲು ಮುಂದಾಗದ ಸ್ಥಳೀಯ ಗ್ರಾಪಂ ಆಡಳಿತ ಮಂಡಳಿಯವರು ಕಟ್ಟಡದ ಹೊರಭಾಗಕ್ಕೆ ಬಣ್ಣಬಳಿದು ವಿವಿಧ ಆಕರ್ಷಕ ಚಿತ್ರಗಳನ್ನು ಬರೆಸಿದ್ದು ಸಾರ್ವಜನಿಕರ ಚರ್ಚೆಗೆ ಕಾರಣವಾಗಿದೆ.

ಕಟ್ಟಡದ ಮೇಲ್ಛಾವಣಿ ಕುಸಿದು ಬೀಳುತ್ತಿರುವ ಬಗ್ಗೆ ನಮ್ಮ ಮೇಲಧಿ ಕಾರಿಗಳ ಗಮನಕ್ಕೆ ತರಲಾಗಿದೆ. ಕಟ್ಟಡ ರಿಪೇರಿ ಮಾಡಿಸಿದರೆ ಮಕ್ಕಳನ್ನು ಕೂಡಿಸಲು ಅನುಕೂಲವಾಗುತ್ತದೆ ಎಂದು ಅಂಗನವಾಡಿ ಕಾರ್ಯಕರ್ತೆ ದ್ಯಾವಮ್ಮ ತಿಳಿಸಿದ್ದಾರೆ.

ಅಂಗನವಾಡಿ ಕಟ್ಟಡದ ಮೇಲ್ಛಾವಣಿ ರಿಪೇರಿಗಾಗಿ ಯೋಜನೆ ಸಿದ್ಧಪಡಿಸಲಾಗಿದ್ದು ಶೀಘ್ರ ಕೆಲಸ ಆರಂಭಿಸಲಾಗುವುದು. -ವೀರೇಶ್‌, ಪಿಡಿಒ

ಶಾನವಾಸಪುರದ 2ನೇ ಅಂಗನವಾಡಿ ಕೇಂದ್ರದ ಮೇಲ್ಛಾವಣಿ ಕುಸಿಯುತ್ತಿರುವ ಬಗ್ಗೆ ಮಾಹಿತಿ ಬಂದಿದೆ. ಇದನ್ನು ರಿಪೇರಿ ಮಾಡಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ. –ಜಲಾಲಪ್ಪ, ಸಿಡಿಪಿಒ

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.