“ನಮ್ಮ ಶಾಲೆಗೆ ಶೇ.100 ಫಲಿತಾಂಶ’ ಯೋಜನೆಗೆ ಚಾಲನೆ


Team Udayavani, Aug 17, 2017, 2:05 PM IST

17-BLR-1.jpg

ಬಳ್ಳಾರಿ: ಕಳೆದ ಸಾಲಿಗಿಂತ ಈ ಶೈಕ್ಷಣಿಕ ಸಾಲಿನಲ್ಲಿ ಜಿಲ್ಲೆಯ ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಿಸಲು “ನಮ್ಮ ಶಾಲೆ ಶೇ.100ರಷ್ಟು ಫಲಿತಾಂಶ’ ಎಂಬ ವಿಶೇಷ ಯೋಜನೆಯನ್ನು ಬೆಂಗಳೂರಿನ ಕ್ರಿಯೆಟೀವ್‌ ಕ್ಲಾಸ್‌ ಸಂಸ್ಥೆಯ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಯೋಜನೆಯಡಿ 8, 9 ಮತ್ತು 10ನೇ ತರಗತಿಗಳ ವಿದ್ಯಾರ್ಥಿಗಳಿಗೆ ನಿರ್ದಿಷ್ಟ ವಿಷಯಗಳಲ್ಲಿ ವಿಶೇಷ ತರಬೇತಿ ನೀಡಲು ಜಿಲ್ಲಾಡಳಿತ ನಿರ್ಧರಿಸಿದೆ ಎಂದು ತಿಳಿಸಿದರು. ವಿದ್ಯಾರ್ಥಿಗಳು ಕಷ್ಟದ ವಿಷಯ ಎಂದೇ ಭಾವಿಸಿರುವ ಗಣಿತ, ವಿಜ್ಞಾನ ಹಾಗೂ ಇಂಗ್ಲಿಷ್‌ ಪಠ್ಯಕ್ರಮಕ್ಕೆ ಸಂಬಂಧಿ ಸಿದಂತೆ ವಿದ್ಯಾರ್ಥಿಗಳಿಗೆ ಇರುವ ಅನುಮಾನ ಪರಿಹರಿಸಲು ಹಾಗೂ ಈ ಪಠ್ಯವನ್ನು ಮಕ್ಕಳಿಗೆ ಹೇಗೆ ಪರಿಣಾಮಕಾರಿಯಾಗಿ ಬೋಧನೆ ಮಾಡಬೇಕು ಎಂಬ ಅಂಶಗಳ ಕುರಿತು ಶಿಕ್ಷಕರಿಗೆ ಕ್ರಿಯೇಟಿವ್‌ ಕ್ಲಾಸೆಸ್‌ ಸಂಸ್ಥೆಯ ತಜ್ಞರು ತರಬೇತಿ ನೀಡಲಿದ್ದಾರೆ. ಸಂಸ್ಥೆಯು ಕಳೆದ ಏಳು ವರ್ಷಗಳಿಂದ ಫಲಿತಾಂಶ ಹೆಚ್ಚಳ ಕುರಿತ ತರಬೇತಿ ಸಂಬಂಧಿಸಿದಂತೆ ಸಂಶೋಧನೆ ನಡೆಸಿ, ತರಬೇತಿ ಕಾರ್ಯಕ್ರಮ ಹಮ್ಮಿಕೊಂಡು ಉತ್ತಮ ಫಲಿತಾಂಶ ದೊರೆಯುವಂತೆ ಶಾಲೆಗಳನ್ನು ತರಬೇತುಗೊಳಿಸಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಈ ಸಂಸ್ಥೆ ನೀಡಿದ ತರಬೇತಿ ಪಡೆದ ಶಾಲೆಗಳಲ್ಲಿ ಉತ್ತಮ ಫಲಿತಾಂಶ ಬಂದಿದೆ.

ಕಳೆದ ವರ್ಷವೂ ಕೂಡ ಬಳ್ಳಾರಿ ಜಿಲ್ಲೆಯಲ್ಲಿ ಇದೇ ಸಂಸ್ಥೆ ತರಬೇತಿ ನೀಡಿದ್ದು, ರಾಜ್ಯ ಮಟ್ಟದಲ್ಲಿ ಕೊನೆಯ ಸ್ಥಾನ ಗಳಿಸಿದ್ದ ಜಿಲ್ಲೆ 17ನೇ ಸ್ಥಾನಕ್ಕೇರಿದೆ. ಜಿಲ್ಲೆಯ ಶಿಕ್ಷಣಾಧಿಕಾರಿಗಳು, ಶಿಕ್ಷಕರು ಹಾಗೂ ಮಕ್ಕಳ ಸಹಭಾಗಿತ್ವದಿಂದಾಗಿಯೇ ಉತ್ತಮ ಫಲಿತಾಂಶ ಬರಲು ಸಾಧ್ಯವಾಯಿತು. ಕಳೆದ ವರ್ಷದ ಪ್ರಯತ್ನವನ್ನು ಈ ಬಾರಿಯೂ ಮುಂದುವರಿಸಲಾಗುವುದು. ಈ ಬಾರಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಜೊತೆಗೆ 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳಿಗೆ ಸಹ ತರಬೇತಿ ನೀಡಲಾಗುತ್ತಿದೆ. ಈ ಯೋಜನೆ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯವಾಗಲಿದೆ. ನೇರ ಎಸ್ಸೆಸ್ಸೆಲ್ಸಿ
ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಬದಲು 8ನೇ ತರಗತಿಯಿಂದಲೇ ಮಕ್ಕಳನ್ನು ಪರೀಕ್ಷೆಗೆ  ಸಜ್ಜುಗೊಳಿಸಬೇಕು. ಶೈಕ್ಷಣಿಕ ಪ್ರಗತಿಗೆ ಅಗತ್ಯ 
ಸೌಲಭ್ಯ ಕಲ್ಪಿಸಿಕೊಡಬೇಕು ಎಂಬ ಉದ್ದೇಶದಿಂದ ಈ ಶೈಕ್ಷಣಿಕ ವರ್ಷದಿಂದ 8, 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ನೀಡಲು ಜಿಲ್ಲಾಡಳಿತ ನಿರ್ಧರಿಸಿದೆ ಎಂದರು.

ಜಿಲ್ಲಾಧಿಕಾರಿ ಡಾ| ರಾಮ್‌ಪ್ರಸಾತ್‌ ಮನೋಹರ್‌ ಮಾತನಾಡಿ, ಕಳೆದ ವರ್ಷ ಅತ್ಯಂತ ಕಡಿಮೆ ವೆಚ್ಚದಲ್ಲಿ ಶಿಕ್ಷಕರು ಹಾಗೂ ಮಕ್ಕಳಿಗೆ ತರಬೇತಿ ನೀಡಲಾಗಿತ್ತು. ಬರೀ 4 ಲಕ್ಷ ರೂ. ವೆಚ್ಚದಲ್ಲಿ ತರಬೇತಿ ಮತ್ತಿತರ ಫಲಿತಾಂಶ ಹೆಚ್ಚಿಸುವ ಪೂರಕ ಚಟುವಟಿಕೆಗಳು ನಡೆದವು. ಬೆಂಗಳೂರಿನ ಇಂಜಿನಿಯರ್‌ ಜೆ.ಜಿ.ಅನಂತ್‌ ಅವರು ಸ್ವಯಂ ಆಸಕ್ತಿಯಿಂದ ಇಂತಹದೊಂದು ಮಹತ್ವದ ಕಾರ್ಯಕ್ಕೆ ಮುಂದಾಗಿದ್ದಾರೆ. ಅವರಿಗೆ ಜಿಲ್ಲಾಡಳಿತ ಸಹಕಾರ ನೀಡುತ್ತಿದೆ ಎಂದರು.

ಕ್ರಿಯೆಟೀವ್‌ ಕ್ಲಾಸ್‌ ಸಂಸ್ಥೆ ಮುಖ್ಯಸ್ಥ ಜೆ.ಜಿ.ಅನಂತ್‌ ಮಾತನಾಡಿ, ಈ ಹಿಂದೆ ದಾವಣಗೆರೆ, ಹಾವೇರಿ ಹಾಗೂ ಶಿವಮೊಗ್ಗ ಜಿಲ್ಲೆಗಳ ಕೆಲವೊಂದು ಶಾಲೆಗಳಲ್ಲಿ ಹೊಸ ಪದ್ಧತಿಯ ತರಬೇತಿ ಹಮ್ಮಿಕೊಳ್ಳಲಾಗಿತ್ತು. ಇದರಿಂದ ಉತ್ತಮ ಫಲಿತಾಂಶ ಬಂತು. ಕಳೆದ ವರ್ಷ ಬಳ್ಳಾರಿ ಜಿಲ್ಲೆಯಲ್ಲಿ ಆರಂಭಿಸಿದೆವು. ಶಿಕ್ಷಣ ಇಲಾಖೆ ಹಾಗೂ ಜಿಲ್ಲಾಧಿಕಾರಿಗಳ ಸಹಕಾರದಿಂದಾಗಿಯೇ ಜಿಲ್ಲೆಗೆ ಉತ್ತಮ ಫಲಿತಾಂಶ ದೊರೆಯಿತು. ಈ ಬಾರಿ ಜಿಲ್ಲೆಯ ಎಲ್ಲ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ತರಬೇತಿ ನೀಡಲು ಉದ್ದೇಶಿಸಿದ್ದೇವೆ. ಶಿಕ್ಷಕರು ಹಾಗೂ ಮಕ್ಕಳಿಗೆ ಸಹ ತರಬೇತಿ
ನೀಡಲಾಗುವುದು. ಬೋಧನಾ ಪದ್ಧತಿ ಹೇಳಿಕೊಡಲಾಗುವುದು. ಕಲಿಕೆಯಲ್ಲಿ ಹಿಂದುಳಿದ ಮಕ್ಕಳ ಕಡೆ ವಿಶೇಷವಾಗಿ ಗಮನ ಹರಿಸಲಾಗುವುದು. ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಪಠ್ಯದಲ್ಲಿ ಭಾಗವಹಿಸುವಿಕೆಯ ಸೂತ್ರಗಳನ್ನು ಹೇಳಿಕೊಡಲಾಗುವುದು ಎಂದು ತಿಳಿಸಿದರು.

ಡಿಡಿಪಿಐ ಶ್ರೀಧರನ್‌ ಮಾತನಾಡಿ, ಜಿಲ್ಲೆಯ 197 ಸರ್ಕಾರಿ ಶಾಲೆಗಳಲ್ಲಿ 8, 9 ಮತ್ತು 10 ನೇ ತರಗತಿಯಲ್ಲಿ ಒಟ್ಟು 54,729 ವಿದ್ಯಾರ್ಥಿಗಳು ಓದುತ್ತಿದ್ದಾರೆ ಎಂದು ಮಾಹಿತಿ ನೀಡಿದರು. ಎಸ್ಪಿ ಆರ್‌.ಚೇತನ್‌ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಿಗೆ ಗಣಿತ, ವಿಜ್ಞಾನ ಹಾಗೂ ಇಂಗ್ಲಿಷ್‌ ಪಠ್ಯಕ್ರಮಕ್ಕೆ ಸಂಬಂಧಿಸಿದಂತೆ ಇರುವ ಅನುಮಾನ ಪರಿಹರಿಸಲು ಹಾಗೂ ಈ ಪಠ್ಯವನ್ನು ಮಕ್ಕಳಿಗೆ ಹೇಗೆ ಪರಿಣಾಮಕಾರಿಯಾಗಿ ಬೋಧನೆ ಮಾಡಬೇಕು ಎಂಬ ಅಂಶಗಳ ಕುರಿತು ಶಿಕ್ಷಕರಿಗೆ ಕ್ರಿಯೇಟಿವ್‌ ಕ್ಲಾಸೆಸ್‌ ಸಂಸ್ಥೆಯ ತಜ್ಞರು ತರಬೇತಿ ನೀಡಲಿದೆ. 
ಸಂತೋಷ ಲಾಡ್‌, ಸಚಿವ

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.